30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಮ್. ಪ.ಪೂ. ಕಾಲೇಜಿನಲ್ಲಿ, ಸ್ಪರ್ಧಾತ್ಮಕ ತರಗತಿಗಳ ಉದ್ಘಾಟನೆ

ಉಜಿರೆ : ಇಲ್ಲಿನ ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ಈ ವರ್ಷದ ಸ್ಪರ್ಧಾತ್ಮಕ ತರಗತಿಗಳನ್ನು ವಿದ್ಯುಕ್ತವಾಗಿ ಉದ್ಘಾಟಿಸಲಾಯಿತು.

ಉದ್ಘಾಟಕರಾಗಿ ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕ ಬಿ ಸೋಮಶೇಖರ ಶೆಟ್ಟಿ ಆಗಮಿಸಿದ್ದರು.
ಈ ಸಂದರ್ಭದಲ್ಲಿ ಕಳೆದ ವರ್ಷದ ಕರ್ನಾಟಕ ಸಿ. ಇ. ಟಿ. ಪರೀಕ್ಷೆಯಲ್ಲಿ ಕರ್ನಾಟಕದಲ್ಲಿ 1576 ನೇ ರ್‍ಯಾಂಕ್ ಪಡೆದ ಕಾಲೇಜಿನ ಹಿರಿಯ ವಿದ್ಯಾರ್ಥಿ ಕೃಪಾನಿಧಿ ಎನ್ ಎಲ್ ಇವರನ್ನು ಸನ್ಮಾನಿಸಲಾಯಿತು.


ಸನ್ಮಾನಿತರಾಗಿ ಮಾತನಾಡಿದ ಕೃಪಾನಿಧಿ, ತಾನು ಹೇಗೆ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆ ಎರಡನ್ನೂ ಸಮನಾಗಿ ಎದುರಿಸಿ ತಾನು ಈ ಸಾಧನೆ ಮಾಡಿದೆ, ತಾನು ಓದುತ್ತಿದ್ದ ಪುಸ್ತಕಗಳು, ಕಾಲೇಜಿನಲ್ಲಿ ನಡೆಸುತ್ತಿದ್ದ ಪರೀಕ್ಷೆಗಳಿಗೆ ನಡೆಸುತ್ತಿದ್ದ ಪೂರ್ವ ತಯಾರಿ, ಸಮಯದ ಹೊಂದಾಣಿಕೆ ಹಾಗೂ ಇವತ್ತಿನ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ರ್‍ಯಾಂಕ್ ಎಷ್ಟು ಮುಖ್ಯ ಎನ್ನುವುದನ್ನು ವಿವರಿಸಿದರು.
ಸ್ಪರ್ಧಾತ್ಮಕ ತರಗತಿಯ ಮುಖ್ಯ ಸಂಯೋಜಕರಾದ ಶೃತ ಅಕಾಡೆಮಿ, ಮಂಗಳೂರಿನ ಡಾ. ಶೃತಕೀರ್ತಿ ರಾಜ್ ಮಾತನಾಡಿ ಈ ವರ್ಷದ ಸ್ಪರ್ಧಾತ್ಮಕ ತರಗತಿಗಳ ಸ್ವರೂಪ ಹೇಗೆ, ಯಾವ ರೀತಿ ನಡೆಯುತ್ತದೆ ಎಂಬುದರ ಪೂರ್ವ ಯೋಜನೆಗಳ ಬಗ್ಗೆ ವಿವರಿಸಿದರು.


ಉದ್ಘಾಟಕರಾಗಿ, ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕರಾದ ಬಿ ಸೋಮಶೇಖರ ಶೆಟ್ಟಿ ಮಾತನಾಡುತ್ತ ಜೀವನದಲ್ಲಿ ಒಂದು ಸ್ಪಷ್ಟ ಗುರಿ ಇರಲಿ. ಸ್ಪಷ್ಟ ಗುರಿ ಇದ್ದಾಗ ಮಾತ್ರ ಉತ್ತಮ ಸಾಧನೆ ಸಾಧ್ಯವಾಗುತ್ತದೆ. ಇದಕ್ಕೆ ಉತ್ತಮ ಉದಾಹರಣೆ ಎಂದರೆ ಇವತ್ತಿನ ಸನ್ಮಾನಿತ ಕೃಪಾನಿಧಿಯೇ ಉದಾಹರಣೆ. ಶೃದ್ದೆ ಮತ್ತು ಏಕಾಗ್ರತೆ ಈವೆರಡೂ ಕಲಿಕಾ ಸಮಯದಲ್ಲಿ ಬಹಳ ಮುಖ್ಯ. ಎಷ್ಟೋ ಕನಸುಗಳನ್ನು ಹೊತ್ತು ನಿಮ್ಮ ತಂದೆ ತಾಯಿ ಅವರೆಲ್ಲರ ಸುಖಗಳನ್ನು ತ್ಯಜಿಸಿ ನಿಮ್ಮ ಕನಸಿಗೆ ನೀರೆರೆಯುತ್ತಿದ್ದಾರೆ ಅದನ್ನು ನೀವು ಹುಸಿಗೊಳಿಸದೇ ಸದುಪಯೋಗ ಪಡಿಸಿಕೊಳ್ಳಿ. ಅಂದು ಹೇಳಿದ ಪಾಠ ಪ್ರವಚನಗಳನ್ನು ಅಂದೇ ಓದಿದರೆ ಬಹಳ ಸುಲಭವಾಗುತ್ತದೆ. ಮುಂದಿನ ಸುಖಕರ ಜೀವನಕ್ಕಾಗಿ ಇಂದು ಕಷ್ಟಪಡಲೇಬೇಕು.

ಈ ಸಮಾಜದಲ್ಲಿ ಸಾಧನೆಯ ಹೆಗ್ಗುರುತನ್ನು ಮೂಡಿಸಿದಾಗ ಮಾತ್ರ ಜೀವನಕ್ಕೊಂದು ಸಾರ್ಥಕ ಬರುತ್ತದೆ ಆ ನಿಟ್ಟಿನಲ್ಲಿ ನಿಮ್ಮ ಬದ್ಧತೆ ಇರಲಿ ಎಂದು ತಮ್ಮ ಪ್ರೇರಣಾ ಮಾತುಗಳ ಮೂಲಕ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.
ಕಾರ್ಯಕ್ರಮದಲ್ಲಿ ಸಹ ಸಂಯೋಜಕರುಗಳಾದ ಡಾ. ರಾಜೇಶ್ವರಿ ಕೆ ಆರ್, ಶ್ರೀಮತಿ ಅನಿತಾ ಕೆ ಪಿ, ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು.
ಭೌತ ಶಾಸ್ತ್ರ ಉಪನ್ಯಾಸಕ ಲಕ್ಷ್ಮೀಶ್ ಭಟ್ ಕಾರ್ಯಕ್ರಮ ನಿರೂಪಿಸಿ, ಸರ್ವರನ್ನೂ ಸ್ವಾಗತಿಸಿದರು. ಜೀವಶಾಸ್ತ್ರ ಉಪನ್ಯಾಸಕಿ ಡಾ. ರಾಜೇಶ್ವರಿ ಕೆ ಆರ್ ವಂದಿಸಿದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಿರಿಯ ಸದಸ್ಯೆ ಲ. ಸುಶೀಲಾ ಎಸ್ ಹೆಗ್ಡೆಯವರಿಂದ ಅರ್ಹ ಕುಟುಂಬಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಶ್ರಮದಾನ

Suddi Udaya

ರಾಜ್ಯದ ಟಾಪ್ 10 ರ‍್ಯಾಂಕ್‌ಗಳಲ್ಲಿ ಆಳ್ವಾಸ್‌ನ 45 ವಿದ್ಯಾರ್ಥಿಗಳು

Suddi Udaya

ಉಜಿರೆ ಬದ್ರಿಯ ಜುಮಾ ಮಸೀದಿಯಲ್ಲಿ ವಿಶ್ವ ಪರಿಸರ ದಿನ

Suddi Udaya

ಎಕ್ಸೆಲ್ ಕಾಲೇಜಿನ ಸಿ.ಎ ಮತ್ತು ಸಿ.ಎಸ್ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಮೊಬೈಲ್ ಹಿಂದಿರುಗಿಸಿಕೊಟ್ಟು ಮಾನವೀಯತೆ ಮೆರೆದ ಬೆಳ್ತಂಗಡಿ ಸಂತೆಕಟ್ಟೆ ಗಣೇಶ್ ಮೆಡಿಕಲ್ ಮಾಲೀಕ

Suddi Udaya
error: Content is protected !!