July 23, 2026
ಸಾಧಕರು

ಸಿಎ ಪರೀಕ್ಷೆಯಲ್ಲಿ ಮುಂಡಾಜೆಯ ಅಶ್ವಥ್ ಎಸ್ ಉತ್ತೀರ್ಣ

ಬೆಳ್ತಂಗಡಿ :ಅಖಿಲ ಭಾರತೀಯ ಲೆಕ್ಕ ಪರಿಶೋಧನಾ ಸಂಸ್ಥೆ 2024 ಇದರ ವತಿಯಿಂದ ಮೇ ತಿಂಗಳಿನಲ್ಲಿ ನಡೆದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಮುಂಡಾಜೆಯ ದಿ.‌ ಶಿವರಾಮ ಗೊಲ್ಲ ಮತ್ತು ಭಾಗೀರಥಿ ದಂಪತಿ ಪುತ್ರ ಅಶ್ವಥ್ ಎಸ್ ಅವರು ಉತ್ತಮ ಅಂಕದೊಂದಿಗೆ ಉತ್ತೀರ್ಣರಾಗಿದ್ದಾರೆ.

ಇವರು ಮಂಗಳೂರಿನ ಪ್ರಖ್ಯಾತ ಸಿ.ಎ ಗಣೇಶ್ ರಾವ್ ಪಿ ಕದ್ರಿ ಅವರ ಜೊತೆ ತರಬೇತಿ ಪಡೆದು ಪರೀಕ್ಷೆ ಎದುರಿಸಿ ಯಶಸ್ಸು ಸಾಧಿಸಿದ್ದಾರೆ. ಆರ್ಟಿಕಲ್‌ಶಿಪ್ ಅನ್ನೂ ಅಲ್ಲೇ ಪೂರೈಸಿದ್ದಾರೆ.
ಇವರು ತನ್ನ ಪ್ರಾಥಮಿಕ ಶಿಕ್ಷಣವನ್ನು
ಮುಂಡಾಜೆ ಸರಸ್ವತಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ, ಪ್ರೌಢ ಮತ್ತು ಪ.ಪೂ ಶಿಕ್ಷಣವನ್ನು ಎಸ್‌ಡಿಎಂ ಹೈಸ್ಕೂಲ್ ಮತ್ತು ಕಾಲೇಜು ಉಜಿರೆಯಲ್ಲಿ ಹಾಗೂ ಬಿ.ಕಾ‌ಂ ಪದವಿಯನ್ನು ಕೆನರಾ ಕಾಲೇಜು ಮಂಗಳೂರು ಇಲ್ಲಿ ಪೂರೈಸಿರುತ್ತಾರೆ.
ಅತ್ಯುತ್ತಮ ಕ್ರೀಡಾಪಟು ಕೂಡ ಆಗಿರುವ ಅವರು ಶೆಟ್ಲ್ ಬ್ಯಾಡ್ಮಿಂಟನ್ ನಲ್ಲಿ
ರಾಜ್ಯ ಮಟ್ಟದ ವರೆಗೆ, ಹಾಗೂ ಕ್ರಿಕೆಟ್ ನಲ್ಲಿ ಮಂಗಳೂರು ಯುನಿವರ್ಸಿಟಿಯನ್ನು ಪ್ರತಿನಿಧಿಸಿ ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.
ಅವರ ತಾಯಿ ಭಾಗೀರಥಿ ಅವರು ಲ್ಯಾಂಪ್ ಸೊಸೈಟಿಯಲ್ಲಿ ಪಿಗ್ಮಿ ಸಂಗ್ರಾಹಕರಾಗಿದ್ದು, ಸಹೋದರಿ ನಿಟ್ಟೆ ಕಾಲೇಜಿನಲ್ಲಿ ಇಂಜಿನಿಯರಿಂಗ್ ಮುಗಿಸಿ ಪ್ರಸ್ತುತ ಮಂಗಳೂರಿನಲ್ಲಿ ಉದ್ಯೋಗದಲ್ಲಿದ್ದಾರೆ.

Related posts

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 2 ನೇ ರ್ಯಾಂಕ್ ಗಳಿಸಿರುವ ವಿದ್ಯಾರ್ಥಿ ಚಿನ್ಮಯ್ ಜಿ.ಕೆ.ಗೆ ವಿದ್ವತ್ ಪದವಿಪೂರ್ವ ಕಾಲೇಜಿನಲ್ಲಿ ಸನ್ಮಾನ

Suddi Udaya

ಸೇವಾಭಾರತಿಯಿಂದ ಈ ವರ್ಷದ “ಸೇವಾ ಶ್ರೇಷ್ಠ -2024” ಪುರಸ್ಕಾರ:

Suddi Udaya

ಜೀವ ದೇವತಾಶಾಸ್ತ್ರ ಮುಕ್ತ ವಿಶ್ವವಿದ್ಯಾಲಯದಿಂದ ಎಂ. ನಾರಾಯಣ್ ಬೇಗೂರು ರವರಿಗೆ ಸಮಾಜ ಸೇವೆಗಾಗಿ (“ಡಾಕ್ಟರ್ ಆಫ್ ಹ್ಯುಮಾನಿಟಿ”) ಡಾಕ್ಟರೇಟ್ ಗೌರವ ಪುರಸ್ಕಾರ

Suddi Udaya

ಅಧ್ಯಾಪಕ ಶಂಕರ ತಾಮನ್ಕರ್ ಇವರ 4ನೇ ಕವನ ಸಂಕಲನ ‘ಚಂದ್ರನಿಗೊಂದಂಗಿ’ಗೆ ಪ್ರಥಮ ಬಹುಮಾನ ಮತ್ತು ನಗದು ಪುರಸ್ಕಾರ

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಗೇರುಕಟ್ಟೆ ದಿವಾಕರ ಆಚಾರ್ಯ ರವರಿಗೆ ಯಕ್ಷಗಾನದಲ್ಲಿ ಡಿಪ್ಲೊಮಾ ಪದವಿ ಪ್ರದಾನ

Suddi Udaya
error: Content is protected !!