25.5 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಉಜಿರೆ: ತಾಲೂಕು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಾಮೂಹಿಕ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

ಉಜಿರೆ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಮಹೇಶ್ ಶೆಟ್ಟಿ ತಿಮರೋಡಿ ಇವರ ಗೌರವಾಧ್ಯಕ್ಷತೆಯಲ್ಲಿ ನಡೆಯುವ 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ ಹಾಗೂ ಕಾರ್ಯಕರ್ತರ ಪೂರ್ವಭಾವಿ ಸಮಾಲೋಚನ ಸಭೆಯು ಜು.14ರಂದು ಉಜಿರೆ ಪಂಚಾಯತ್ ನ ಆವರಣದಲ್ಲಿ ನಡೆಯಿತು.

ಅಧ್ಯಕ್ಷರಾಗಿ ರಮೇಶ್ ನಾಯ್ಕ ನಡಿಬೆಟ್ಟು, ಕಾರ್ಯದರ್ಶಿಯಾಗಿ ಪ್ರಶಾಂತ್ ಪೂಜಾರಿ ಬರಮೇಲು, ಕೋಶಾಧಿಕಾರಿಯಾಗಿ ವಿಕ್ಕಿ ಶೆಟ್ಟಿ ಕುಂಟಿನಿ ರವರನ್ನು ಆಯ್ಕೆ ಮಾಡಲಾಯಿತು.ಜೊತೆ ಕಾರ್ಯದರ್ಶಿಗಳಾಗಿ ಚಂದ್ರಶೇಖರ್ ಬಿಲ್ಲರೋಡಿ, ರಮೇಶ್, ಸುದೇಶ್ ಶೆಟ್ಟಿ ಕುಂಟಿನಿ, ಕಾರ್ತಿಕ್ ರಾವ್, ರಿತೇಶ್ ರೆಂಜಾಳ ಉಪಾಧ್ಯಕ್ಷರುಗಳಾಗಿ ಗಿರೀಶ್ ಪೆರ್ಲ, ದಿನೇಶ್ ಮಾತೃಶ್ರೀ, ಜಯಂತ್ ಅರ್ತಿಲ, ಯೋಗೀಶ್ ಸುರ್ಯ, ಉಮೇಶ್ ಕಡ0ಬು, ಪದ್ಮರಾಜ್ ವಿವೇಕಾನಂದ ನಗರ, ಲಕ್ಷ್ಮಣ್ ಕುಂಜರ್ಪ ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರಮೇಶ್ ನಾಯ್ಕ ರವರು ರಾಷ್ಟೀಯ ಹಿಂದೂ ಜಾಗರಣ ವೇದಿಕೆಯ ಸಕ್ರಿಯ ಹಿರಿಯ ಕಾರ್ಯಕರ್ತರಾಗಿ ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿಯಲ್ಲಿ ಸಕ್ರಿಯವಾಗಿ ತಮ್ಮ ಸೇವೆಯನ್ನು ನೀಡುತ್ತಾ ಬಂದಿದ್ದು ಕಳೆದ ಮೂರು ವರ್ಷದಿಂದ ಅನಾರೋಗ್ಯ (ಪಕ್ಷಪಾತ) ದಿಂದ ಬಳಲುತ್ತಿದ್ದು ಮನೆಯಲ್ಲಿಯೇ ಇದ್ದರು ಅವರ ಸೇವೆಯನ್ನು ನೆನಪಿಸಿ ಪ್ರಸ್ತುತ ಈ ಬಾರಿಯ ಅಧ್ಯಕ್ಷರನ್ನಾಗಿ ಸರ್ವರ ಅಭಿಮತದಿಂದ ವಿಶೇಷವಾಗಿ ಆಯ್ಕೆ ಮಾಡಲಾಯಿತು.

ಜು.21ರಂದು ಬೆಂಗಳೂರಿನಲ್ಲಿ ನಡೆಯುವ ಅತ್ಯಾಚಾರವಾಗಿ ಹತ್ಯೆಯಾದ ಕು| ಸೌಜನ್ಯ ಹಾಗೂ ಎಲ್ಲಾ ಹೆಣ್ಣು ಮಕ್ಕಳ ಸ್ಮರಣಾರ್ಥ ರಕ್ತದಾನ ಶಿಬಿರ ಹಾಗೂ ಜನಜಾಗೃತಿ ಸಭೆಯ ಬಗ್ಗೆ ಮಹೇಶ್ ಶೆಟ್ಟಿ ತಿಮರೋಡಿಯವರು ಮಾಹಿತಿ ನೀಡಿ ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಕರೆ ನೀಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ, ಗೌರವಾಧ್ಯಕ್ಷ ಹರೀಶ್ ಕುಮಾರ್ ಬರಮೇಲು, ಅಧ್ಯಕ್ಷ ಅನಿಲ್ ಕುಮಾರ್ ಅಂತರ, ಸಂಚಾಲಕ ಮನೋಜ್ ಕುಂಜರ್ಪ, ಗಣೇಶೋತ್ಸವ ಸಮಿತಿ ಮಾಜಿ ಅಧ್ಯಕ್ಷರುಗಳಾದ ವೆಂಕಟೇಶ್ ಕಾಶಿಬೆಟ್ಟು, ಉಮೇಶ್ ಅತ್ತಾಜೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಎರಡು ವರ್ಷಗಳ ಹಿಂದೆ ನಡೆದಿದ್ದ ಮನೆ ಕಳವು ಪ್ರಕರಣ ಭೇದಿಸಿದ ಬೆಳ್ಳಾರೆ ಪೊಲೀಸರು: ಆರೋಪಿ ನೆರಿಯದ ಶರತ್ ಬಂಧನ

Suddi Udaya

ಬೆಳ್ತಂಗಡಿ: ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ನೀಟ್ ತರಗತಿಯ ಉದ್ಘಾಟನೆ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಗಂಡಿಬಾಗಿಲು ಸಿಯೋನ್ ಅಶ್ರಮಕ್ಕೆ ಭೇಟಿ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಅಂಗವಾಗಿ ಮನೆ ಮನೆಯಿಂದ ಅಡಕೆ ಸಂಗ್ರಹ ಕಾರ್ಯಕ್ರಮದ ಕರಪತ್ರ ಬಿಡುಗಡೆ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಜ.11: ನಾರಾವಿಯಲ್ಲಿ ನೂತನ ಗುರು ಮಂದಿರ, ಭಜನಾ ಮಂದಿರ ಉದ್ಘಾಟನೆ ಹಾಗೂ 171ನೇ ವರ್ಷದ ಗುರು ಜಯಂತಿ ಆಚರಣೆ

Suddi Udaya
error: Content is protected !!