September 6, 2026
ಧಾರ್ಮಿಕ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರ ದಲ್ಲಿ ಅಷ್ಟಾಹಿನಿಕ ಪರ್ವ ಪೂಜಾ ಕಾರ್ಯಕ್ರಮ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ. ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರ ಶಿಶಿಲದಲ್ಲಿ ಅಷ್ಟಾಹಿನಿಕ ಪರ್ವ ಪೂಜಾ ಕಾರ್ಯಕ್ರಮ ಜರಗಿತು.
ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ೧00೮. ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದಲ್ಲಿ ಪರಮಪೂಜ್ಯ ಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿ ಕಾರ್ಕಳ ಇವರ ಶುಭ ಆಶೀರ್ವಾದದೊಂದಿಗೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀಮತಿ ಹೇಮಾವತಿ. ವಿ. ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಇಂದು ಅಷ್ಣಹಿನಿಕಾ ಪೂಜಾ ಕಾರ್ಯಕ್ರಮ ಬಹು ವಿಜೃಂಭಣೆಯಿಂದ ಪ್ರಾರಂಭವಾಯಿತು.

ಶ್ರೀಮತಿ ಸುಗುಣ ಎಸ್ ಡಿ ಶೆಟ್ಟಿ ಉಜಿರೆಯವರ ಎರಡನೇ ಮಗಳಾದ ಶ್ರೀಮತಿ ಪ್ರಗತಿ ರಾಜಿತ್ ಶೆಟ್ಟಿ ಯವರು ಶ್ರೀ ಕ್ಷೇತ್ರ ಚಂದ್ರಪುರಕ್ಕೆ 52 ಜಿನ ಬಿಂಬಗಳಿರುವ ನಂದೀಶ್ವರ ಮಂಟಪವನ್ನು ದಾನವಾಗಿ ನೀಡಿದ್ದು ಕೊಲ್ಲಾಪುರ ಸಮೀಪ ಉದ್ಗಾವ್ ನಲ್ಲಿ ಆಚಾರ್ಯ ಶ್ರೀ ೧೦೮ ವಿಶುದ್ದ ಸಾಗರ ಮುನಿ ಮಹಾರಾಜರ ಅಮೃತ ಹಸ್ತದಿಂದ ನಂದೀಶ್ವರ ಮಂಟಪಕ್ಕೆಲಘು ಪಂಚಕಲ್ಯಾಣ ನೆರವೇರಿದ್ದು

ಇಂದು ಆಷಾಢ ಮಾಸದ ಅಷ್ಟಾಹಿಣಿಕ ಪರ್ವದ ಮೊದಲ ಅಷ್ಟಮಿಯ ದಿನದಂದು ಬೆಳಿಗ್ಗೆ 10.30ಗಂಟೆಗೆ ಜಿನ ಮಂದಿರದಲ್ಲಿ. ವಿಶೇಷ ಆರಾಧನೆ ಹಾಗೂ ವಿಶೇಷ. ಪೂಜೆಗಳು ನೆರವೇರಿದ ನಂತರ ವಿರಾಜಮಾನಗೊಂಡಿದೆ. ಈ ಪುಣ್ಯ ಕಾರ್ಯದಲ್ಲಿ ಹಲವಾರು ಸಂಖ್ಯೆಯಲ್ಲಿ ಶ್ರಾವಕ ಶ್ರಾವಕಿಯರು ಭಾಗವಹಿಸಿ ಪುಣ್ಯಭಾಗಿಗಳಾದರು .ಇದೇ ಸಂದರ್ಭದಲ್ಲಿ ಉಜಿರೆಯ ಎಸ್ ಡಿ.ಶೆಟ್ಟಿ ದಂಪತಿಗಳನ್ನು ಗೌರವಿಸಲಾಯಿತು.. ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ನೀಟ್ ಟಾಪರ್ ಮೌರ್ಯ ವೈ.ಡಿ.ಗೆ ಅದ್ಧೂರಿ ಸನ್ಮಾನ

Suddi Udaya

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿಯಲ್ಲಿ ರಂಝಾನ್ ಆಚರಣೆ

Suddi Udaya

ಶ್ರೀ ರಾಮ ಕ್ಷೇತ್ರದಲ್ಲಿ ಬಳಂಜ ಸಂಘದಿಂದ ಶ್ರೀ ರಾಮತಾರಕ ಮಂತ್ರ

Suddi Udaya

ಮನೋಜವಂ ಮಾರುತ ತುಲ್ಯವೇಗಂ; ಅಳದಂಗಡಿಯಲ್ಲಿ ಹನುಮ ನಾಮ ಸ್ಮರಣೆ ಹನುಮೋತ್ಸವ-2025, : ಹನುಮ ಯಾಗಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದದಲ್ಲಿ ಜುಬಿಲಿ ವರ್ಷ ಉದ್ಘಾಟನೆ

Suddi Udaya

ನ.9: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಪುರಪ್ರವೇಶ

Suddi Udaya
error: Content is protected !!