31.8 C
ಪುತ್ತೂರು, ಬೆಳ್ತಂಗಡಿ
May 18, 2025
ಅಪರಾಧ ಸುದ್ದಿ

ಗುಂಡ್ಯ ಬಳಿ ಟ್ರಕ್ ಕಾರಿಗೆ – ಡಿಕ್ಕಿ ಗೇರುಕಟ್ಟೆ ಪರಿಸರದ ಐವರಿಗೆ ಗಾಯ:ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ಟ್ರಕ್ ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸಹಿತ ಮೂವರು ಗಂಭೀರ ಗಾಯಗೊಂಡು ತಾಯಿ ಮಗುವಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.
ಹೆಚ್.ಪಿ.ಸಿ.ಎಲ್.ಸಂಸ್ಥೆಯಲ್ಲಿ ಲೈನ್ ವಾಕರ್ ಗುತ್ತಿಗೆ ಆಧಾರದಲ್ಲಿ ಉದ್ಯೋಗಿ ಗೇರುಕಟ್ಟೆ ಸಮೀಪದ ಯೋಗೀಶ್ ಗೌಡ ಬೆಂಗಳೂರಿನಲ್ಲಿರುವ ಹುಂಡೈ ಶೋ ರೂಮ್ ನಿಂದ ಐ. ಟೆನ್ .(ಹಳೆಯ) ಕಾರನ್ನು ಎರಡು ದಿನಗಳ ಹಿಂದೆ ಖರೀದಿಸಿ ಬೆಂಗಳೂರು, ತಿರುಪತಿ ಹಾಗೂ ಪುಣ್ಯ ಕ್ಷೇತ್ರ ಗಳಿಗೆ ಭೇಟಿ ನೀಡಿ ಕಳೆದ ರಾತ್ರಿ ಬೆಂಗಳೂರಿನಿಂದ ಊರಿಗೆ ಬರುವ ದಾರಿಯಲ್ಲಿ ಈ ಘಟನೆ ಸಂಭವಿಸಿದೆ.

ಕಾರು ಮಾಲಕ ಚಿಕ್ಕಪ್ಪ ನ ಮಗ ಹರೀಶ್ (ಕಾರು ಚಾಲಕ) ಯೋಗೀಶ ಗೌಡ ನ ತಂಗಿ ಗಂಡ (ಬಾವ) ಲೋಕೇಶ ಯಾನೆ ಹರೀಶ್ ಗೌಡ ಹಾಗೂ ಚಾಲಕ ಹರೀಶ ಗೌಡರ ಪತ್ನಿ ತಾರಾ ಓರ್ವ ಮಗಳು ಕಾರಿನಲ್ಲಿ ಪ್ರಯಾಣಿಸುತ್ತಿದರು.
ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾ
ಳಾಗಿದ್ದು ಇಬ್ಬರು ಚಿಕ್ಕಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಮೂವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ : ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ: ಚಾಲಕ ಪರಾರಿ; ವಾಣಿಜ್ಯ ತೆರಿಗೆ ಇಲಾಖೆಯಿಂದ ಲಾರಿ ವಶಕ್ಕೆ

Suddi Udaya

ಮದ್ದಡ್ಕದಲ್ಲಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರಿಬ್ಬರಿಗೆ ದ್ವಿಚಕ್ರ ವಾಹನ ಡಿಕ್ಕಿ :ಗಂಭೀರ ಗಾಯ

Suddi Udaya

ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಕಳ್ಳ

Suddi Udaya

ಕಳಿಯ ಪರಪ್ಪು ಬಸ್ಸು ನಿಲ್ದಾಣದ ರಸ್ತೆ ಬದಿಯಲ್ಲಿ ಸತ್ತ ದನವನ್ನು ಎಸೆದು ಹೋದ ಅಕ್ರಮ ದನ ಕಳ್ಳ ಸಾಗಾಟಗಾರರು

Suddi Udaya

ಹಾಡು ಹಗಲೇ ಲಾಯಿಲದ ದೇಜಪ್ಪರ ಮನೆಗೆ ನುಗ್ಗಿದ ಕಳ್ಳರು: ರೂ.20 ಸಾವಿರ ನಗದು ಸಹಿತ ರೂ.40 ಸಾವಿರ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಸೌತಡ್ಕ: ಸತ್ತ ಕರುವೊಂದನ್ನು ಮೋರಿಗೆ ಎಸೆದ ದುಷ್ಕಾರ್ಮಿಗಳು: ಹಿಂ.ಜಾ. ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಸದಸ್ಯರಿಂದ ಅಂತ್ಯಸಂಸ್ಕಾರ

Suddi Udaya
error: Content is protected !!