24.6 C
ಪುತ್ತೂರು, ಬೆಳ್ತಂಗಡಿ
May 18, 2025
ಧಾರ್ಮಿಕ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರ ದಲ್ಲಿ ಅಷ್ಟಾಹಿನಿಕ ಪರ್ವ ಪೂಜಾ ಕಾರ್ಯಕ್ರಮ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ. ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರ ಶಿಶಿಲದಲ್ಲಿ ಅಷ್ಟಾಹಿನಿಕ ಪರ್ವ ಪೂಜಾ ಕಾರ್ಯಕ್ರಮ ಜರಗಿತು.
ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ೧00೮. ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದಲ್ಲಿ ಪರಮಪೂಜ್ಯ ಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿ ಕಾರ್ಕಳ ಇವರ ಶುಭ ಆಶೀರ್ವಾದದೊಂದಿಗೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀಮತಿ ಹೇಮಾವತಿ. ವಿ. ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಇಂದು ಅಷ್ಣಹಿನಿಕಾ ಪೂಜಾ ಕಾರ್ಯಕ್ರಮ ಬಹು ವಿಜೃಂಭಣೆಯಿಂದ ಪ್ರಾರಂಭವಾಯಿತು.

ಶ್ರೀಮತಿ ಸುಗುಣ ಎಸ್ ಡಿ ಶೆಟ್ಟಿ ಉಜಿರೆಯವರ ಎರಡನೇ ಮಗಳಾದ ಶ್ರೀಮತಿ ಪ್ರಗತಿ ರಾಜಿತ್ ಶೆಟ್ಟಿ ಯವರು ಶ್ರೀ ಕ್ಷೇತ್ರ ಚಂದ್ರಪುರಕ್ಕೆ 52 ಜಿನ ಬಿಂಬಗಳಿರುವ ನಂದೀಶ್ವರ ಮಂಟಪವನ್ನು ದಾನವಾಗಿ ನೀಡಿದ್ದು ಕೊಲ್ಲಾಪುರ ಸಮೀಪ ಉದ್ಗಾವ್ ನಲ್ಲಿ ಆಚಾರ್ಯ ಶ್ರೀ ೧೦೮ ವಿಶುದ್ದ ಸಾಗರ ಮುನಿ ಮಹಾರಾಜರ ಅಮೃತ ಹಸ್ತದಿಂದ ನಂದೀಶ್ವರ ಮಂಟಪಕ್ಕೆಲಘು ಪಂಚಕಲ್ಯಾಣ ನೆರವೇರಿದ್ದು

ಇಂದು ಆಷಾಢ ಮಾಸದ ಅಷ್ಟಾಹಿಣಿಕ ಪರ್ವದ ಮೊದಲ ಅಷ್ಟಮಿಯ ದಿನದಂದು ಬೆಳಿಗ್ಗೆ 10.30ಗಂಟೆಗೆ ಜಿನ ಮಂದಿರದಲ್ಲಿ. ವಿಶೇಷ ಆರಾಧನೆ ಹಾಗೂ ವಿಶೇಷ. ಪೂಜೆಗಳು ನೆರವೇರಿದ ನಂತರ ವಿರಾಜಮಾನಗೊಂಡಿದೆ. ಈ ಪುಣ್ಯ ಕಾರ್ಯದಲ್ಲಿ ಹಲವಾರು ಸಂಖ್ಯೆಯಲ್ಲಿ ಶ್ರಾವಕ ಶ್ರಾವಕಿಯರು ಭಾಗವಹಿಸಿ ಪುಣ್ಯಭಾಗಿಗಳಾದರು .ಇದೇ ಸಂದರ್ಭದಲ್ಲಿ ಉಜಿರೆಯ ಎಸ್ ಡಿ.ಶೆಟ್ಟಿ ದಂಪತಿಗಳನ್ನು ಗೌರವಿಸಲಾಯಿತು.. ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಣೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ವಿಶೇಷ ಪೂಜೆ

Suddi Udaya

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ: ಧಾರ್ಮಿಕ ಸಭಾ ಉದ್ಘಾಟನಾ ಸಮಾರಂಭ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಗ್ರಾಮ‌ ಸುಭೀಕ್ಷೆಗಾಗಿ ಶ್ರೀ ದೇವರ ಲೋಕ ಸಂಚಾರ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ

Suddi Udaya
error: Content is protected !!