September 6, 2026
ಧಾರ್ಮಿಕ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರ ದಲ್ಲಿ ಅಷ್ಟಾಹಿನಿಕ ಪರ್ವ ಪೂಜಾ ಕಾರ್ಯಕ್ರಮ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ. ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರ ಶಿಶಿಲದಲ್ಲಿ ಅಷ್ಟಾಹಿನಿಕ ಪರ್ವ ಪೂಜಾ ಕಾರ್ಯಕ್ರಮ ಜರಗಿತು.
ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ೧00೮. ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದಲ್ಲಿ ಪರಮಪೂಜ್ಯ ಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿ ಕಾರ್ಕಳ ಇವರ ಶುಭ ಆಶೀರ್ವಾದದೊಂದಿಗೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀಮತಿ ಹೇಮಾವತಿ. ವಿ. ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಇಂದು ಅಷ್ಣಹಿನಿಕಾ ಪೂಜಾ ಕಾರ್ಯಕ್ರಮ ಬಹು ವಿಜೃಂಭಣೆಯಿಂದ ಪ್ರಾರಂಭವಾಯಿತು.

ಶ್ರೀಮತಿ ಸುಗುಣ ಎಸ್ ಡಿ ಶೆಟ್ಟಿ ಉಜಿರೆಯವರ ಎರಡನೇ ಮಗಳಾದ ಶ್ರೀಮತಿ ಪ್ರಗತಿ ರಾಜಿತ್ ಶೆಟ್ಟಿ ಯವರು ಶ್ರೀ ಕ್ಷೇತ್ರ ಚಂದ್ರಪುರಕ್ಕೆ 52 ಜಿನ ಬಿಂಬಗಳಿರುವ ನಂದೀಶ್ವರ ಮಂಟಪವನ್ನು ದಾನವಾಗಿ ನೀಡಿದ್ದು ಕೊಲ್ಲಾಪುರ ಸಮೀಪ ಉದ್ಗಾವ್ ನಲ್ಲಿ ಆಚಾರ್ಯ ಶ್ರೀ ೧೦೮ ವಿಶುದ್ದ ಸಾಗರ ಮುನಿ ಮಹಾರಾಜರ ಅಮೃತ ಹಸ್ತದಿಂದ ನಂದೀಶ್ವರ ಮಂಟಪಕ್ಕೆಲಘು ಪಂಚಕಲ್ಯಾಣ ನೆರವೇರಿದ್ದು

ಇಂದು ಆಷಾಢ ಮಾಸದ ಅಷ್ಟಾಹಿಣಿಕ ಪರ್ವದ ಮೊದಲ ಅಷ್ಟಮಿಯ ದಿನದಂದು ಬೆಳಿಗ್ಗೆ 10.30ಗಂಟೆಗೆ ಜಿನ ಮಂದಿರದಲ್ಲಿ. ವಿಶೇಷ ಆರಾಧನೆ ಹಾಗೂ ವಿಶೇಷ. ಪೂಜೆಗಳು ನೆರವೇರಿದ ನಂತರ ವಿರಾಜಮಾನಗೊಂಡಿದೆ. ಈ ಪುಣ್ಯ ಕಾರ್ಯದಲ್ಲಿ ಹಲವಾರು ಸಂಖ್ಯೆಯಲ್ಲಿ ಶ್ರಾವಕ ಶ್ರಾವಕಿಯರು ಭಾಗವಹಿಸಿ ಪುಣ್ಯಭಾಗಿಗಳಾದರು .ಇದೇ ಸಂದರ್ಭದಲ್ಲಿ ಉಜಿರೆಯ ಎಸ್ ಡಿ.ಶೆಟ್ಟಿ ದಂಪತಿಗಳನ್ನು ಗೌರವಿಸಲಾಯಿತು.. ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿಸಂಭ್ರಮದ ದೇವರ ದರ್ಶನ ಬಲಿ ಉತ್ಸವ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ “ಮಹಾ ಚಂಡಿಕಾಯಾಗ”ದ ವೈಭವದ ಹಸಿರುವಾಣಿ ಹೊರೆಕಾಣಿಕೆ

Suddi Udaya

ಕಲ್ಮಂಜ ನಿಡಿಗಲ್ ಮಜಲಿನಲ್ಲಿ ನಾಗದೇವರು ಹಾಗೂ ದೈವಗಳ ಪುನರ್ ಪ್ರತಿಷ್ಠೆ

Suddi Udaya

ಉರುವಾಲುಪದವು: ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವಕ್ಕೆ ಚಾಲನೆ

Suddi Udaya

ಎ.30: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 15ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ:

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ರಕ್ಷಿತ್ ಶಿವರಾಮ್ ಭೇಟಿ, ಪ್ರಾರ್ಥನೆ

Suddi Udaya
error: Content is protected !!