22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಚಾರ್ಮಾಡಿ: ಆಡಿಮಾರು ಇಂದಿರಾ ಮೋಹನ್ ಮನೆಗೆ ಬಿದ್ದ ಬೃಹತ್ ಮರ:ಶೌರ್ಯ ಘಟಕದ ಸ್ವಯಂ ಸೇವಕರಿಂದ ತೆರವುಗೊಳಿಸುವ ಕಾರ್ಯ

ಬೆಳ್ತಂಗಡಿ:,ನಿನ್ನೆ ರಾತ್ರಿ ವೇಳೆ ತೀವ್ರ ಗಾಳಿ ಮಳೆಗೆ ಚಾರ್ಮಾಡಿ ಗ್ರಾಮದ ಆಡಿಮಾರು ಇಂದಿರಾ ಮೋಹನ್ ಇವರ ಮನೆಗೆ ಮಧ್ಯರಾತ್ರಿ 2.15ಕ್ಕೆ ಬೃಹತ್ ಮರ ಬಿದ್ದಿದ್ದು ಜು.14ರಂದು ಬೆಳಗ್ಗೆ 6ಗಂಟೆಗೆ ನೆರಿಯ ತುರ್ತು ಸ್ವಂದನ ಘಟಕದ ಸದಸ್ಯರಾದ ನಾಗೇಶ್ ಬಿ ಇವರಿಗೆ ಈ ವಿಚಾರ ಸ್ಥಳೀಯ ಸದಸ್ಯರ ಮೂಲಕ ತಿಳಿದು, ನೆರಿಯ, ಅರಸಿನಮಕ್ಕಿ ಉಜಿರೆ ಬೆಳಾಲು ಶೌರ್ಯ ಘಟಕದ ಸ್ವಯಂ ಸೇವಕರು ಸ್ಥಳಕ್ಕೆ ತೆರಳಿ ಮರಗಳನ್ನು ತೆರವುಗೊಳಿಸುವ ಕಾರ್ಯ ಮಾಡಿದರು.

ಬಳಿಕ ಅರಣ್ಯಧಿಕಾರಿ ನಾಗೇಶ್,ಗೋಪಾಲ್,ರವಿ ಸ್ಥಳಕ್ಕೆ ಕರೆಸಿಕೊಂಡು ಅವರೊಂದಿಗೆ ಚರ್ಚಿಸಿ ಮನೆಗೆ ಬಿದ್ದ ಮರ ತೆರವು ಗೊಳಿಸಲಾಯಿತು ಹಾಗೂ ಚಾರ್ಮಾಡಿ ಪಂಚಾಯತ್ ಅಧ್ಯಕ್ಷರು ಭೇಟಿ ನೀಡಿ ಮನೆಗೆ ಸಿಮೆಂಟ್ ಶೀಟ್ ಹಾಗೂ ಸಿಮೆಂಟ್ ಕಂಬ ಒದಗಿಸಿ ಕೊಟ್ಟರು ಅದನ್ನು ತುರ್ತು ಸ್ವಂದನ ತಂಡ ತಾತ್ಕಾಲಿಕ ಮನೆ ರಚನೆ ಮಾಡಿ ವಾಸ್ತವಕ್ಕೆ ಅನುಕೂಲ ಮಾಡಿ ಕೊಟ್ಟಿರುತ್ತಾರೆ.
ಈ ದಿನದ ಕಾರ್ಯಾಚರಣೆಯಲ್ಲಿ ತುರ್ತು ಸ್ಪಂದನಾ ತಂಡದ ಸ್ವಯಂ ಸೇವಕರಾದ ನೆರಿಯ ಘಟಕದ ಸ್ವಯಂ ಸೇವಕರಾದ ನಾಗೇಶ್ ಬಿ, ಸತೀಶ್ ಕೆ, ಅರಸೀನಮಕ್ಕಿ ಘಟಕದ ಅವಿನಾಶ್ ಭೀಡೆ, ಉಜಿರೆ ಘಟಕದ ಸ್ವಯಂ ಸೇವಕರಾದ ಸಚ್ಚಿನ್ ಭೀಡೆ, ಸಂದೇಶ್, ರವೀಂದ್ರ, ರಾಘವೇಂದ್ರ, ಸುಧೀರ್, ಸುಲೈಮಾನ್,ಅನಿಲ್ ಕುಮಾರ್, ಶಶಿ, ಅಶೋಕ್ ಇವರುಗಳು ತುರ್ತು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಮೇಲ್ವಿಚಾರಕಿ ಶ್ರೀಮತಿ ಶಶಿಕಲಾ ರವರ ಮಾರ್ಗದರ್ಶನದಲ್ಲಿ ಸಂಯೋಜಕಿ ಶ್ರೀಮತಿ ರಶ್ಮಿತಾರವರ ಕರೆಯ ಮೇರೆಗೆ ಸ್ವಯಂಸೇವಕರಾದ ಶೀನಪ್ಪ ನಾಯ್ಕ್ , ಕುಶಾಲಪ್ಪ ಗೌಡ,
ಸೋಮಶೇಖರ್ ಶಿಬಾಜೆ ,ಗಂಗಾಧರ ಬದಿಗುಡ್ಡೆ, ಅವಿನಾಶ್ ಭಿಡೆ, ಕಿರಣ್ ಸಂಕೇಶ, ರಮೇಶ ಬೈರಕಟ್ಟ ಸ್ಥಳಕ್ಕೆ ಧಾವಿಸಿ ವಯರ್ ಮ್ಯಾನ್ ಸಂತೋಷ್ ಹಾಗೂ ಉಮೇಶ್ ಇವರ ಉಪಸ್ಥಿತಿಯಲ್ಲಿ ತಂತಿಯ ಮೇಲಿದ್ದ ಬೃಹತ್ ಮರವನ್ನು ತೆರವುಗೊಳಿಸಿದರತೆರವು ಗೊಳಿಸಿದ ಮರದ ಒಂದು ಪಾರ್ಶ್ವ ಅಪಾಯಕಾರಿಯಾಗಿ ನಿಂತೇ ಇದ್ದು ಅದನ್ನು ತೆರವುಗೊಳಿಸುವಂತೆ ಹತ್ತಿರದ ಮನೆಯವರಾದ ನಾರಾಯಣ ನಾಯ್ಕರವರು ತಂಡದವರಲ್ಲಿ ವಿನಂತಿಸಿದಾಗ ಕುಶಾಲಪ್ಪ ಗೌಡರು ತಮ್ಮ ಮರಹತ್ತುವ ಕೌಶಲ್ಯವನ್ನು ಉಪಯೋಗಿಸಿ ಮರದ ತುದಿಗೆ ಹಗ್ಗ ಕಟ್ಟಿ ಮರವನ್ನು ಆ ಕಡೆ ವಿದ್ಯುತ್ ಲೈನ್ ಈ ಕಡೆ ಮನೆಯ ನಡುವೆ ಸುರಕ್ಷಿತವಾಗಿ ಕತ್ತರಿಸಿ ಹಾಕಲಾಯಿತು.
ವರದಿ. : ಸುಮಿತ್ರ ಸಂಯೋಜಕರು ನೆರಿಯ ಘಟಕ.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಗುತ್ತಿಗಾರು ಫಾ. ಆದರ್ಶ್ ಜೋಸೆಫ್ ರವರಿಗೆ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್

Suddi Udaya

ಕಲ್ಮಂಜ ಸರಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆ ಜಿಲ್ಲಾಮಟ್ಟದಲ್ಲೇ ಪ್ರಥಮ

Suddi Udaya

ಎಸ್.ಡಿ.ಎಮ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಿಂದ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನ ಮತ್ತು ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ

Suddi Udaya

ಮಲವಂತಿಗೆ ಗ್ರಾ.ಪಂ. ಮತ್ತು ಕೆನರಾ ಬ್ಯಾಂಕ್ ವತಿಯಿಂದ ಜನ ಸುರಕ್ಷಾ ಸಂಪೂರ್ಣತಾ ಅಭಿಯಾನ

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಮನೆಗೆ ತಹಶೀಲ್ದಾರ್ ಭೇಟಿ: ಅಜ್ಜಿಗೆ ವಾಸ್ತವ್ಯ ದೃಢೀಕರಣ ಪತ್ರ, ಆಹಾರ ಸಾಮಾಗ್ರಿ ಕಿಟ್ ವಿತರಣೆ: ಸುದ್ದಿ ಉದಯ ಸ್ಪೆಷಲ್ ರಿಪೋರ್ಟ್ Effect

Suddi Udaya
error: Content is protected !!