27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಕೊಲ್ಪಾಡಿ ಪೌಷ್ಟಿಕ ಆಹಾರ ಮಾಹಿತಿ ಕಾರ್ಯಕ್ರಮ

ಬೆಳಾಲು : ಜು 14 ಶ್ರೀ ಕ್ಷೇತ್ರ ಧರ್ಮಾಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ( ರಿ ) ಬೆಳ್ತಂಗಡಿ ತಾಲೂಕು. ಬೆಳಾಲು ಕೊಲ್ಪಾಡಿ ಓಂ ಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಮಾಹಿತಿ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿದ್ಯಾಶ್ರೀನಿವಾಸ್ ಗೌಡ ರವರು ನೆರವೆರಿಸಿ ಆಷಾಡ ಮಾಸದಲ್ಲಿ ಸೇವಿಸುವ ಆಹಾರಗಳ ಬಗ್ಗೆ ವೈಜ್ಞಾನಿಕವಾಗಿ ಪ್ರಾಮುಖ್ಯತೆ ಏನು ಎಂಬುವುದರ ಬಗ್ಗೆ ತಿಳಿಸಿದರು.ಸದೃಢ ಆರೋಗ್ಯ ನಿರ್ವಹಣೆಗೆ ಪೌಷ್ಠಿಕ ಆಹಾರ ತುಂಬಾ ಅವಶ್ಯಕವಾಗಿದ್ದು ಹಲವಾರು ರೋಗ ರುಜಿನ ಗಳನ್ನು ತಡೆಗಟ್ಟಲು ಸಹಕಾರಿ ರಿಯಾಗಿದೆ ಎಂದು ತಿಳಿಸಿದರು ಸಂಪನ್ಮೂಲ ವ್ಯಕ್ತಿಯಾದ ಉಷಾ ಮೇಡಂ ಸಮತೋಲನ ಆಹಾರದ ಬಗ್ಗೆ ದೀರ್ಘಕಾಲ ಕಾಡುವ ಕಾಯಿಲೆಗಳನ್ನು ತಡೆಗಟ್ಟಲು ಆಗಾದವಾದ ಪೌಷ್ಠಿಕಾಂಶಗಳನ್ನು ಒಳಗೊಂಡ ರೋಗನಿರೋದಕ ಶಕ್ತಿಯಿರುವ ಪ್ರೊಟೀನ್ ಅಂಶವುಳ್ಳ ಆಹಾರಗಳ ಸೇವನೆ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಒಕ್ಕೂಟದ ಅಧ್ಯಕ್ಷರಾದ ನೀಲಾವತಿ ಸೇವಾಪ್ರತಿನಿಧಿ ಪ್ರಮೀಳಾರ ವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರದ ಸದಸ್ಯರಾದ ಮಂಜುಳಾ ರವರು ವಹಿಸಿದರು. ಕೇಂದ್ರದ ಸದಸ್ಯರಾದ ಗುಲಾಬಿಯವರು ಸ್ವಾಗತಿಸಿ ಲಲಿತಾ ಧನ್ಯವಾದ ನೀಡಿದರು. ಸಮನ್ವಯಧಿಕಾರಿ ಮಧುರರವರು ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸಾಮೂಹಿಕ ದೀಪಾವಳಿ ಆಚರಣೆ: ಸರ್ವಧರ್ಮೀಯರು ಆಚರಿಸುವ ವಿಶ್ವವಿಖ್ಯಾತ ಹಬ್ಬ ದೀಪಾವಳಿ: ಪ್ರಕಾಶ ಶೆಟ್ಟಿ ನೊಚ್ಚ

Suddi Udaya

ಬೆಳ್ತಂಗಡಿ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ, ಇದರ ನೂತನ ಅಧ್ಯಕ್ಷರಾಗಿ ಮಿತ್ತಬಾಗಿಲು ಕಕ್ಕೆನೇಜಿ ಶಿವಾನಂದ ರಾವ್ ಆಯ್ಕೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಡೆಂಗ್ಯೂ ಜಾಗೃತಿ- ಡಾ. ಕಲಾಮಧು ದಂಪತಿಗಳಿಗೆ ಸನ್ಮಾನ

Suddi Udaya

ಬೆಳ್ತಂಗಡಿಯಲ್ಲಿ ಬಿಸಿಲ ಬೇಗೆಗೆ ತಂಪು ಮಜ್ಜಿಗೆ ಹಂಚಿ ಬಾಯಾರಿಕೆ ತಣಿಸಿದ ‘ರೆಡ್ ಕ್ರಾಸ್’ ತಂಡ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರವರಿಂದ ಮತದಾನ

Suddi Udaya

ಮಚ್ಚಿನ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ನಾರಾಯಣ ಶೆಟ್ಟಿ ಆಯ್ಕೆ

Suddi Udaya
error: Content is protected !!