23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಕೊಲ್ಪಾಡಿ ಪೌಷ್ಟಿಕ ಆಹಾರ ಮಾಹಿತಿ ಕಾರ್ಯಕ್ರಮ

ಬೆಳಾಲು : ಜು 14 ಶ್ರೀ ಕ್ಷೇತ್ರ ಧರ್ಮಾಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ( ರಿ ) ಬೆಳ್ತಂಗಡಿ ತಾಲೂಕು. ಬೆಳಾಲು ಕೊಲ್ಪಾಡಿ ಓಂ ಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಮಾಹಿತಿ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿದ್ಯಾಶ್ರೀನಿವಾಸ್ ಗೌಡ ರವರು ನೆರವೆರಿಸಿ ಆಷಾಡ ಮಾಸದಲ್ಲಿ ಸೇವಿಸುವ ಆಹಾರಗಳ ಬಗ್ಗೆ ವೈಜ್ಞಾನಿಕವಾಗಿ ಪ್ರಾಮುಖ್ಯತೆ ಏನು ಎಂಬುವುದರ ಬಗ್ಗೆ ತಿಳಿಸಿದರು.ಸದೃಢ ಆರೋಗ್ಯ ನಿರ್ವಹಣೆಗೆ ಪೌಷ್ಠಿಕ ಆಹಾರ ತುಂಬಾ ಅವಶ್ಯಕವಾಗಿದ್ದು ಹಲವಾರು ರೋಗ ರುಜಿನ ಗಳನ್ನು ತಡೆಗಟ್ಟಲು ಸಹಕಾರಿ ರಿಯಾಗಿದೆ ಎಂದು ತಿಳಿಸಿದರು ಸಂಪನ್ಮೂಲ ವ್ಯಕ್ತಿಯಾದ ಉಷಾ ಮೇಡಂ ಸಮತೋಲನ ಆಹಾರದ ಬಗ್ಗೆ ದೀರ್ಘಕಾಲ ಕಾಡುವ ಕಾಯಿಲೆಗಳನ್ನು ತಡೆಗಟ್ಟಲು ಆಗಾದವಾದ ಪೌಷ್ಠಿಕಾಂಶಗಳನ್ನು ಒಳಗೊಂಡ ರೋಗನಿರೋದಕ ಶಕ್ತಿಯಿರುವ ಪ್ರೊಟೀನ್ ಅಂಶವುಳ್ಳ ಆಹಾರಗಳ ಸೇವನೆ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಒಕ್ಕೂಟದ ಅಧ್ಯಕ್ಷರಾದ ನೀಲಾವತಿ ಸೇವಾಪ್ರತಿನಿಧಿ ಪ್ರಮೀಳಾರ ವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರದ ಸದಸ್ಯರಾದ ಮಂಜುಳಾ ರವರು ವಹಿಸಿದರು. ಕೇಂದ್ರದ ಸದಸ್ಯರಾದ ಗುಲಾಬಿಯವರು ಸ್ವಾಗತಿಸಿ ಲಲಿತಾ ಧನ್ಯವಾದ ನೀಡಿದರು. ಸಮನ್ವಯಧಿಕಾರಿ ಮಧುರರವರು ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಜೈನ್ ಮಿಲನ್ ನ ಮಾಸಿಕ ಸಭೆ

Suddi Udaya

ಕಣಿಯೂರು: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಉಜಿರೆಯ ಶ್ರೀ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕಾಲೇಜಿನ ವತಿಯಿಂದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಾಗಾರ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಪ.ಪೂ. ವಿಜ್ಞಾನ ವಿಭಾಗದ ಶೈಕ್ಷಣಿಕ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಹಾಗೂ ಲಿಫ್ಟ್ ಉದ್ಘಾಟನೆ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಶ್ರೀನಿವಾಸ್ ಭಟ್ ನಿಧನ

Suddi Udaya
error: Content is protected !!