39.2 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಎಕ್ಸೆಲ್ ನಲ್ಲಿ ತ್ಯಾಜ್ಯ ನೀರು ಸಂಸ್ಕರಣಾ (ಎಸ್. ಟಿ. ಪಿ) ವಿಸ್ತರಿತ ಘಟಕದ ಭೂಮಿಪೂಜೆ

ಬೆಳ್ತಂಗಡಿ:ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವತಿಯಿಂದ ಕಾಲೇಜು ಮತ್ತು ಹಾಸ್ಟೆಲ್ ಗಳ ತ್ಯಾಜ್ಯ ನೀರು ಹಾಗೂ ಪರಿಸರದ ಕೊಳಚೆ ನೀರಿನ ಸಂಸ್ಕರಣೆಯ ನೂತನ ವಿಸ್ತರಿತ ಘಟಕಕ್ಕೆ ಇತ್ತೀಚಿಗೆ ಶಂಕು ಸ್ಥಾಪನೆ ನೆರವೇರಿಸಲಾಯಿತು.

ಪ್ರತಿದಿನ ಹತ್ತುಲಕ್ಷ ಲೀಟರ್ ನೀರಿನ ಶುದ್ಧೀಕರಣ ಸಾಮರ್ಥ್ಯವುಳ್ಳ, ಸುಮಾರು ಮೂರು ಕೋಟಿ ರೂಪಾಯಿಗಳ ವೆಚ್ಚ ತಗಲುವ , ತಾಲೂಕಿನ ಬೃಹತ್ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಇದಾಗಿದೆ. ಘಟಕದಲ್ಲಿ ಸಂಸ್ಕರಿಸಿದ ನೀರನ್ನು ಸ್ಥಳೀಯ ಕೃಷಿ ಭೂಮಿಗೆ ಬಳಸುವ ಮೂಲಕ, ಕೃಷಿಗೆ ಬೆಂಬಲ ನೀಡುವ ಯೋಚನೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯದ್ದಾಗಿದೆ.

ಎಕ್ಸೆಲ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರ ಹೆತ್ತವರಾದ ಸತೀಶ್ ಕುಮಾರ್ ಆರಿಗ ಬೊಳ್ಳೂರು ಗುತ್ತು ಹಾಗೂ ಶುಭಲತಾ ಅವರು ನೂತನ ಘಟಕದ ಶಂಕು ಸ್ಥಾಪನೆ ನೆರವೇರಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಕಾರ್ಯದರ್ಶಿಯವರು, ಪ್ರಾಂಶುಪಾಲರು, ಆಡಳಿತಾಧಿಕಾರಿ, ಕ್ಯಾಂಪಸ್ ಮ್ಯಾನೇಜರ್, ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಉಪಸ್ಥಿತರಿದ್ದರು.

Related posts

ನೆರಿಯ: ಕುಡುಮಡ್ಕ ಸೌಗಂಧಿಕ ಮನೆಯ ನೀಲಮ್ಮ ನಿಧನ

Suddi Udaya

ಧರ್ಮಸ್ಥಳ: ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರ: ‘ಸಾಮಾಜಿಕ ಸಾಮರಸ್ಯ ಮೂಡಿಸುವಲ್ಲಿ ಭಜನೆಯ ಪಾತ್ರ’ ಕುರಿತು ಉಪನ್ಯಾಸ

Suddi Udaya

ಪದ್ಮುಂಜ ಮುಗೇರಡಿ ನಿವಾಸಿ ಸುಶೀಲ ಶೆಟ್ಟಿ ನಿಧನ

Suddi Udaya

ಪೋಟೋವನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಆರೋಪ: ಮಹಿಳೆಯಿಂದ ಪೊಲೀಸ್ ದೂರು: ಆರೋಪಿ ಮೇಲೆ ಪ್ರಕರಣ ದಾಖಲು

Suddi Udaya

ಮಾ.16: ಹೊಕ್ಕಾಡಿಗೋಳಿ ವೀರ – ವಿಕ್ರಮ ಕಂಬಳ: ಕೊಡಂಗೆಯಲ್ಲಿ ಶಾಶ್ವತ ಕರೆಗೆ ಭೂಮಿಪೂಜೆ

Suddi Udaya

ಎ.17 : ಬೆಳ್ತಂಗಡಿಯಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ ಆ‌ರ್ ಮತಪ್ರಚಾರ:ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಪತ್ರಿಕಾಗೋಷ್ಠಿ

Suddi Udaya
error: Content is protected !!