September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಎಕ್ಸೆಲ್ ನಲ್ಲಿ ತ್ಯಾಜ್ಯ ನೀರು ಸಂಸ್ಕರಣಾ (ಎಸ್. ಟಿ. ಪಿ) ವಿಸ್ತರಿತ ಘಟಕದ ಭೂಮಿಪೂಜೆ

ಬೆಳ್ತಂಗಡಿ:ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವತಿಯಿಂದ ಕಾಲೇಜು ಮತ್ತು ಹಾಸ್ಟೆಲ್ ಗಳ ತ್ಯಾಜ್ಯ ನೀರು ಹಾಗೂ ಪರಿಸರದ ಕೊಳಚೆ ನೀರಿನ ಸಂಸ್ಕರಣೆಯ ನೂತನ ವಿಸ್ತರಿತ ಘಟಕಕ್ಕೆ ಇತ್ತೀಚಿಗೆ ಶಂಕು ಸ್ಥಾಪನೆ ನೆರವೇರಿಸಲಾಯಿತು.

ಪ್ರತಿದಿನ ಹತ್ತುಲಕ್ಷ ಲೀಟರ್ ನೀರಿನ ಶುದ್ಧೀಕರಣ ಸಾಮರ್ಥ್ಯವುಳ್ಳ, ಸುಮಾರು ಮೂರು ಕೋಟಿ ರೂಪಾಯಿಗಳ ವೆಚ್ಚ ತಗಲುವ , ತಾಲೂಕಿನ ಬೃಹತ್ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಇದಾಗಿದೆ. ಘಟಕದಲ್ಲಿ ಸಂಸ್ಕರಿಸಿದ ನೀರನ್ನು ಸ್ಥಳೀಯ ಕೃಷಿ ಭೂಮಿಗೆ ಬಳಸುವ ಮೂಲಕ, ಕೃಷಿಗೆ ಬೆಂಬಲ ನೀಡುವ ಯೋಚನೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯದ್ದಾಗಿದೆ.

ಎಕ್ಸೆಲ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರ ಹೆತ್ತವರಾದ ಸತೀಶ್ ಕುಮಾರ್ ಆರಿಗ ಬೊಳ್ಳೂರು ಗುತ್ತು ಹಾಗೂ ಶುಭಲತಾ ಅವರು ನೂತನ ಘಟಕದ ಶಂಕು ಸ್ಥಾಪನೆ ನೆರವೇರಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಕಾರ್ಯದರ್ಶಿಯವರು, ಪ್ರಾಂಶುಪಾಲರು, ಆಡಳಿತಾಧಿಕಾರಿ, ಕ್ಯಾಂಪಸ್ ಮ್ಯಾನೇಜರ್, ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಉಪಸ್ಥಿತರಿದ್ದರು.

Related posts

ಮಂಗಳೂರಿನಲ್ಲಿ ಆನೆದಂತ ಮಾರಟಕ್ಕೆ ಯತ್ನ; ಪುದುವೆಟ್ಟು ಗ್ರಾಮದ ಶಶಾಂಕ ವಶಕ್ಕೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಪ್ರಾರಂಭ

Suddi Udaya

ಧರ್ಮಸ್ಥಳ: ಸಿಡಿಲು ಬಡಿದು ವ್ಯಕ್ತಿ ಅಸ್ವಸ್ಥ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಗರಿಕ ಅಭಿನಂದನಾ ಸಮಿತಿ ಕುವೆಟ್ಟು-ಓಡಿಲ್ನಾಳ ವತಿಯಿಂದ ಭಾರತ ಮಾತೆಯ ಸೇವೆಗೈದು ನಿವೃತ್ತ ಹೊಂದಿದ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya

ಎ.6: ಬೆಂಗಳೂರು ಶ್ರೀ‌ ಪ್ರಸನ್ನ ಕಾರ್ಯಸಿದ್ದಿ ಬೈಲಾಂಜನೇಯ ದೇವಾಲಯದಲ್ಲಿ ರಾಮನವಮಿ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದಲ್ಲಿ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಹಾಗೂ ಸವಣಾಲು ಪಲ್ಗುಣಿ ಭಜನಾ ತಂಡ

Suddi Udaya
error: Content is protected !!