July 23, 2026
ಗ್ರಾಮಾಂತರ ಸುದ್ದಿ

ಕೊಲ್ಪಾಡಿ ಪೌಷ್ಟಿಕ ಆಹಾರ ಮಾಹಿತಿ ಕಾರ್ಯಕ್ರಮ

ಬೆಳಾಲು : ಜು 14 ಶ್ರೀ ಕ್ಷೇತ್ರ ಧರ್ಮಾಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ( ರಿ ) ಬೆಳ್ತಂಗಡಿ ತಾಲೂಕು. ಬೆಳಾಲು ಕೊಲ್ಪಾಡಿ ಓಂ ಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಮಾಹಿತಿ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿದ್ಯಾಶ್ರೀನಿವಾಸ್ ಗೌಡ ರವರು ನೆರವೆರಿಸಿ ಆಷಾಡ ಮಾಸದಲ್ಲಿ ಸೇವಿಸುವ ಆಹಾರಗಳ ಬಗ್ಗೆ ವೈಜ್ಞಾನಿಕವಾಗಿ ಪ್ರಾಮುಖ್ಯತೆ ಏನು ಎಂಬುವುದರ ಬಗ್ಗೆ ತಿಳಿಸಿದರು.ಸದೃಢ ಆರೋಗ್ಯ ನಿರ್ವಹಣೆಗೆ ಪೌಷ್ಠಿಕ ಆಹಾರ ತುಂಬಾ ಅವಶ್ಯಕವಾಗಿದ್ದು ಹಲವಾರು ರೋಗ ರುಜಿನ ಗಳನ್ನು ತಡೆಗಟ್ಟಲು ಸಹಕಾರಿ ರಿಯಾಗಿದೆ ಎಂದು ತಿಳಿಸಿದರು ಸಂಪನ್ಮೂಲ ವ್ಯಕ್ತಿಯಾದ ಉಷಾ ಮೇಡಂ ಸಮತೋಲನ ಆಹಾರದ ಬಗ್ಗೆ ದೀರ್ಘಕಾಲ ಕಾಡುವ ಕಾಯಿಲೆಗಳನ್ನು ತಡೆಗಟ್ಟಲು ಆಗಾದವಾದ ಪೌಷ್ಠಿಕಾಂಶಗಳನ್ನು ಒಳಗೊಂಡ ರೋಗನಿರೋದಕ ಶಕ್ತಿಯಿರುವ ಪ್ರೊಟೀನ್ ಅಂಶವುಳ್ಳ ಆಹಾರಗಳ ಸೇವನೆ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಒಕ್ಕೂಟದ ಅಧ್ಯಕ್ಷರಾದ ನೀಲಾವತಿ ಸೇವಾಪ್ರತಿನಿಧಿ ಪ್ರಮೀಳಾರ ವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರದ ಸದಸ್ಯರಾದ ಮಂಜುಳಾ ರವರು ವಹಿಸಿದರು. ಕೇಂದ್ರದ ಸದಸ್ಯರಾದ ಗುಲಾಬಿಯವರು ಸ್ವಾಗತಿಸಿ ಲಲಿತಾ ಧನ್ಯವಾದ ನೀಡಿದರು. ಸಮನ್ವಯಧಿಕಾರಿ ಮಧುರರವರು ಕಾರ್ಯಕ್ರಮ ನಿರೂಪಿಸಿದರು.

Related posts

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಅನುದಾನಿತ ಪ್ರೌಢ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಹರೀಶ್ ಪೂಂಜರವರ ಹೆಸರಿನಲ್ಲಿ ನಕಲಿ ಸಂದೇಶ ರವಾನೆ: ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಿಜೆಪಿ ಸಾಮಾಜಿಕ ಜಾಲತಾಣದ ಪ್ರಕೋಷ್ಟದಿಂದ ದೂರು

Suddi Udaya

ಇತ್ತೀಚೆಗೆ ಸುಟ್ಟು ಕರಕಲಾದ ಸ್ವಸ್ತಿಕ್ ಆಟೋ ಶೋರೂಮ್ ಗೆ ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ವತಿಯಿಂದ ಸಹಾಯಧನ

Suddi Udaya

ಕೋರ್ಟ್ ನಲ್ಲಿ ಬುರುಡೆ ಚಿನ್ನಯ್ಯನ ಮೂರು ದಿನಗಳ ಹೇಳಿಕೆ ಇಂದಿಗೆ ಮುಕ್ತಾಯ

Suddi Udaya

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬಜಿಲ ಕಿ.ಪ್ರಾ. ಶಾಲೆಯಲ್ಲಿ ಶ್ರಮದಾನ, ಪೋಷಕರಿಂದ ಮಾದರಿ ಶಾಲಾ ಕೈತೋಟ ನಿರ್ಮಾಣ

Suddi Udaya
error: Content is protected !!