September 6, 2026
ಗ್ರಾಮಾಂತರ ಸುದ್ದಿ

ಕೊಲ್ಪಾಡಿ ಪೌಷ್ಟಿಕ ಆಹಾರ ಮಾಹಿತಿ ಕಾರ್ಯಕ್ರಮ

ಬೆಳಾಲು : ಜು 14 ಶ್ರೀ ಕ್ಷೇತ್ರ ಧರ್ಮಾಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ( ರಿ ) ಬೆಳ್ತಂಗಡಿ ತಾಲೂಕು. ಬೆಳಾಲು ಕೊಲ್ಪಾಡಿ ಓಂ ಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಮಾಹಿತಿ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿದ್ಯಾಶ್ರೀನಿವಾಸ್ ಗೌಡ ರವರು ನೆರವೆರಿಸಿ ಆಷಾಡ ಮಾಸದಲ್ಲಿ ಸೇವಿಸುವ ಆಹಾರಗಳ ಬಗ್ಗೆ ವೈಜ್ಞಾನಿಕವಾಗಿ ಪ್ರಾಮುಖ್ಯತೆ ಏನು ಎಂಬುವುದರ ಬಗ್ಗೆ ತಿಳಿಸಿದರು.ಸದೃಢ ಆರೋಗ್ಯ ನಿರ್ವಹಣೆಗೆ ಪೌಷ್ಠಿಕ ಆಹಾರ ತುಂಬಾ ಅವಶ್ಯಕವಾಗಿದ್ದು ಹಲವಾರು ರೋಗ ರುಜಿನ ಗಳನ್ನು ತಡೆಗಟ್ಟಲು ಸಹಕಾರಿ ರಿಯಾಗಿದೆ ಎಂದು ತಿಳಿಸಿದರು ಸಂಪನ್ಮೂಲ ವ್ಯಕ್ತಿಯಾದ ಉಷಾ ಮೇಡಂ ಸಮತೋಲನ ಆಹಾರದ ಬಗ್ಗೆ ದೀರ್ಘಕಾಲ ಕಾಡುವ ಕಾಯಿಲೆಗಳನ್ನು ತಡೆಗಟ್ಟಲು ಆಗಾದವಾದ ಪೌಷ್ಠಿಕಾಂಶಗಳನ್ನು ಒಳಗೊಂಡ ರೋಗನಿರೋದಕ ಶಕ್ತಿಯಿರುವ ಪ್ರೊಟೀನ್ ಅಂಶವುಳ್ಳ ಆಹಾರಗಳ ಸೇವನೆ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಒಕ್ಕೂಟದ ಅಧ್ಯಕ್ಷರಾದ ನೀಲಾವತಿ ಸೇವಾಪ್ರತಿನಿಧಿ ಪ್ರಮೀಳಾರ ವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರದ ಸದಸ್ಯರಾದ ಮಂಜುಳಾ ರವರು ವಹಿಸಿದರು. ಕೇಂದ್ರದ ಸದಸ್ಯರಾದ ಗುಲಾಬಿಯವರು ಸ್ವಾಗತಿಸಿ ಲಲಿತಾ ಧನ್ಯವಾದ ನೀಡಿದರು. ಸಮನ್ವಯಧಿಕಾರಿ ಮಧುರರವರು ಕಾರ್ಯಕ್ರಮ ನಿರೂಪಿಸಿದರು.

Related posts

ಎಸ್.ಡಿ.ಎಂ. ಪಾಲಿಟೆಕ್ನಿಕ್‌ನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್:ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರದಾನ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಗೆ ಅಮೆರಿಕದ ಪೆನ್ಸಿಲ್ವೇನಿಯ ವಿಶ್ವವಿದ್ಯಾಲಯದ ಅಧ್ಯಯನ ತಂಡ ಭೇಟಿ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಪ. ಪೂ. ಕಾಲೇಜಿನ ಬಾಲಕಿಯರ ತಂಡ ಚಾಂಪಿಯನ್

Suddi Udaya

ಕೊಕ್ಕಡ: ಶ್ರೀನಿಧಿ ಜೀಪ್ ಮಾಲಕ ರಘುನಾಥ ನಾಯ್ಕ್ ನಿಧನ

Suddi Udaya

ಕೇಂದ್ರದಲ್ಲಿ ಎನ್ ಡಿ ಎ ಬಿಜೆಪಿ ಮೋದಿ ಸರಕಾರ 10ನೇ ವರ್ಷಕ್ಕೆ ಪಾದಾರ್ಪಣೆ :ಪ್ರತಾಪಸಿಂಹ ನಾಯಕ್

Suddi Udaya
error: Content is protected !!