37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಶಿಶಿಲ ಅಡ್ಡಹಳ್ಳ ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಬಿದ್ದ ಬೃಹತ್ ಗಾತ್ರದ ಮರ: ಶೌರ್ಯ ವಿಪತ್ತು ತಂಡದ ಸದಸ್ಯರಿಂದ ಮರ ತೆರವು

ಶಿಶಿಲ: ಜು.14ರಂದು ಸುರಿದ ವಿಪರೀತ ಗಾಳಿ ಮಳೆಗೆ ಶಿಶಿಲದ ಅಡ್ಡಹಳ್ಳ ಎಂಬಲ್ಲಿ ಬೃಹತ್ ಗಾತ್ರದ ಧೂಪದ ಮರವೊಂದು ಮುರಿದು ರಸ್ತೆಗೆ ಅಡ್ಡವಾಗಿ 11 kV ಹಾಗೂ LT ಲೈನ್‌ಗಳ ಮೇಲೆ ಬಿದ್ದು ಕೆಳಗೂ ಬೀಳದೆ ಅಪಾಯಕಾರಿಯಾಗಿ ನಿಂತಿದೆ.

ತಕ್ಷಣ ಸ್ವಯಂಸೇವಕ ಗಂಗಾಧರ ಬದಿಗುಡ್ಡೆ ತಂಡದ ಸದಸ್ಯರಿಗೆ ಹಾಗೂ ಸಂಯೋಜಕಿಯವರಿಗೆ ಮಾಹಿತಿಯನ್ನು ನೀಡಿದರು.
ಮೇಲ್ವಿಚಾರಕಿ ಶ್ರೀಮತಿ ಶಶಿಕಲಾ ರವರ ಮಾರ್ಗದರ್ಶನದಲ್ಲಿ ಸಂಯೋಜಕಿ ಶ್ರೀಮತಿ ರಶ್ಮಿತಾರವರ ಕರೆಯ ಮೇರೆಗೆ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಾದ ಶೀನಪ್ಪ ನಾಯ್ಕ್, ಕುಶಾಲಪ್ಪ ಗೌಡ, ಗಂಗಾಧರ ಬದಿಗುಡ್ಡೆ, ಸೋಮಶೇಖರ್ ಶಿಬಾಜೆ, ಅವಿನಾಶ್ ಭಿಡೆ, ಕಿರಣ್ ಸಂಕೇಶ, ರಮೇಶ ಬೈರಕಟ್ಟ ಸ್ಥಳಕ್ಕೆ ಧಾವಿಸಿ ಪವರ್‌ಮ್ಯಾನ್ ಸಂತೋಷ್ ಹಾಗೂ ಉಮೇಶ್ ಇವರ ಉಪಸ್ಥಿತಿಯಲ್ಲಿ ತಂತಿಯ ಮೇಲಿದ್ದ ಬೃಹತ್ ಮರವನ್ನು ತೆರವುಗೊಳಿಸಿದರು.

ತೆರವುಗೊಳಿಸಿದ ಮರದ ಒಂದು ಪಾರ್ಶ್ವ ಅಪಾಯಕಾರಿಯಾಗಿ ನಿಂತೇ ಇದ್ದು ಅದನ್ನು ದಯಮಾಡಿ ತೆರವುಗೊಳಿಸುವಂತೆ ಹತ್ತಿರದ ಮನೆಯವರಾದ ನಾರಾಯಣ ನಾಯ್ಕರವರು ತಂಡದವರಲ್ಲಿ ವಿನಂತಿಸಿದಾಗ ಕುಶಾಲಪ್ಪ ಗೌಡರು ತಮ್ಮ ಮರಹತ್ತುವ ಕೌಶಲ್ಯವನ್ನು ಉಪಯೋಗಿಸಿ ಮರದ ತುದಿಗೆ ಹಗ್ಗ ಕಟ್ಟಿ ಮರವನ್ನು ಆ ಕಡೆ ವಿದ್ಯುತ್ ಲೈನ್ ಈ ಕಡೆ ಮನೆಯ ನಡುವೆ ಸುರಕ್ಷಿತವಾಗಿ ಕತ್ತರಿಸಿ ಹಾಕಲಾಯಿತು.

Related posts

ಭೀಕರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದ ತೋಟಕ್ಕೆ ನುಗ್ಗಿದ ನೀರು: ಕೊಚ್ಚಿ ಬಂದ ಮರದ ದಿಮ್ಮಿಗಳು

Suddi Udaya

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್ ತ್ರೋಬಾಲ್ ಪಂದ್ಯಾಟ: ಕಣಿಯೂರಿನ ಯೂನಿತ್ ಕೆ. ನಾಯಕತ್ವದ ತಂಡ ಪ್ರಥಮ ಸ್ಥಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಶ್ರಾವಣ ತರಬೇತಿ ಸಪ್ತಾಹದ ಉದ್ಘಾಟನೆ

Suddi Udaya

ಅಭಿವೃದ್ದಿ ಹೊಂದುತ್ತಿರುವ ಉಜಿರೆ ಹಳೆಪೇಟೆ ಸರಕಾರಿ ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಶ್ರಮದಾನ

Suddi Udaya

ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಶಿಕ್ಷಕರ ದಿನಾಚರಣೆ: ಪ್ರತಿಯೊಬ್ಬರೂ ಉನ್ನತವಾದ ಸ್ಥಾನದಲ್ಲಿ ಇರಬೇಕಾದರೆ ಮುಖ್ಯ ಕಾರಣ ಶಿಕ್ಷಕರು: ಕಿಶೋರ್ ಕುಮಾರ್

Suddi Udaya
error: Content is protected !!