25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಶಿಶಿಲ ಅಡ್ಡಹಳ್ಳ ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಬಿದ್ದ ಬೃಹತ್ ಗಾತ್ರದ ಮರ: ಶೌರ್ಯ ವಿಪತ್ತು ತಂಡದ ಸದಸ್ಯರಿಂದ ಮರ ತೆರವು

ಶಿಶಿಲ: ಜು.14ರಂದು ಸುರಿದ ವಿಪರೀತ ಗಾಳಿ ಮಳೆಗೆ ಶಿಶಿಲದ ಅಡ್ಡಹಳ್ಳ ಎಂಬಲ್ಲಿ ಬೃಹತ್ ಗಾತ್ರದ ಧೂಪದ ಮರವೊಂದು ಮುರಿದು ರಸ್ತೆಗೆ ಅಡ್ಡವಾಗಿ 11 kV ಹಾಗೂ LT ಲೈನ್‌ಗಳ ಮೇಲೆ ಬಿದ್ದು ಕೆಳಗೂ ಬೀಳದೆ ಅಪಾಯಕಾರಿಯಾಗಿ ನಿಂತಿದೆ.

ತಕ್ಷಣ ಸ್ವಯಂಸೇವಕ ಗಂಗಾಧರ ಬದಿಗುಡ್ಡೆ ತಂಡದ ಸದಸ್ಯರಿಗೆ ಹಾಗೂ ಸಂಯೋಜಕಿಯವರಿಗೆ ಮಾಹಿತಿಯನ್ನು ನೀಡಿದರು.
ಮೇಲ್ವಿಚಾರಕಿ ಶ್ರೀಮತಿ ಶಶಿಕಲಾ ರವರ ಮಾರ್ಗದರ್ಶನದಲ್ಲಿ ಸಂಯೋಜಕಿ ಶ್ರೀಮತಿ ರಶ್ಮಿತಾರವರ ಕರೆಯ ಮೇರೆಗೆ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಾದ ಶೀನಪ್ಪ ನಾಯ್ಕ್, ಕುಶಾಲಪ್ಪ ಗೌಡ, ಗಂಗಾಧರ ಬದಿಗುಡ್ಡೆ, ಸೋಮಶೇಖರ್ ಶಿಬಾಜೆ, ಅವಿನಾಶ್ ಭಿಡೆ, ಕಿರಣ್ ಸಂಕೇಶ, ರಮೇಶ ಬೈರಕಟ್ಟ ಸ್ಥಳಕ್ಕೆ ಧಾವಿಸಿ ಪವರ್‌ಮ್ಯಾನ್ ಸಂತೋಷ್ ಹಾಗೂ ಉಮೇಶ್ ಇವರ ಉಪಸ್ಥಿತಿಯಲ್ಲಿ ತಂತಿಯ ಮೇಲಿದ್ದ ಬೃಹತ್ ಮರವನ್ನು ತೆರವುಗೊಳಿಸಿದರು.

ತೆರವುಗೊಳಿಸಿದ ಮರದ ಒಂದು ಪಾರ್ಶ್ವ ಅಪಾಯಕಾರಿಯಾಗಿ ನಿಂತೇ ಇದ್ದು ಅದನ್ನು ದಯಮಾಡಿ ತೆರವುಗೊಳಿಸುವಂತೆ ಹತ್ತಿರದ ಮನೆಯವರಾದ ನಾರಾಯಣ ನಾಯ್ಕರವರು ತಂಡದವರಲ್ಲಿ ವಿನಂತಿಸಿದಾಗ ಕುಶಾಲಪ್ಪ ಗೌಡರು ತಮ್ಮ ಮರಹತ್ತುವ ಕೌಶಲ್ಯವನ್ನು ಉಪಯೋಗಿಸಿ ಮರದ ತುದಿಗೆ ಹಗ್ಗ ಕಟ್ಟಿ ಮರವನ್ನು ಆ ಕಡೆ ವಿದ್ಯುತ್ ಲೈನ್ ಈ ಕಡೆ ಮನೆಯ ನಡುವೆ ಸುರಕ್ಷಿತವಾಗಿ ಕತ್ತರಿಸಿ ಹಾಕಲಾಯಿತು.

Related posts

ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಆಯೋಜಿಸಿದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ : ಶ್ರೀ ಧ.  ಮಂ.  ಆಂಗ್ಲ ಮಾಧ್ಯಮ ಶಾಲೆಯಲ್ಲಿ  ನಾಯಕತ್ವ ತರಬೇತಿ ಕಾರ್ಯಾಗಾರ

Suddi Udaya

ಸವಣಾಲು: ಪದ್ಮನಾಭ ಶೆಟ್ಟಿ ನಿಧನ

Suddi Udaya

ಕಡಿರುದ್ಯಾವರ ದ. ಕ. ಜಿ. ಪಂ ಹಿ. ಪ್ರಾ ಶಾಲೆಯಲ್ಲಿ ಎಸ್.ಡಿ.ಎಮ್.ಸಿ, ಪೋಷಕರ ಸಭೆ ಹಾಗೂ ಶಾಲಾ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya

ಮಡಂತ್ಯಾರು : ಕುಕ್ಕಳದಲ್ಲಿ ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

Suddi Udaya

ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವದ ಯಶಸ್ಸಿಗಾಗಿ ಪೂರ್ವಭಾವಿ ಪ್ರಾರ್ಥನೆ

Suddi Udaya
error: Content is protected !!