ಟ್ಯಾಂಕರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪುದುವೆಟ್ಟಿನ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

Suddi Udaya

ಬೆಳ್ತಂಗಡಿ: ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಗಡಿಯಾರ ಎಂಬಲ್ಲಿ ಜು.9ರಂದು ಟ್ಯಾಂಕರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಜು.15ರಂದು ಮೃತಪಟ್ಟಿದ್ದಾರೆ.

ಪುದುವೆಟ್ಟು ಗ್ರಾಮದ ಬಾಜಿದಡಿ ನೋಣಯ್ಯ ಪೂಜಾರಿ-ಮೀನಾಕ್ಷಿ ದಂಪತಿ ಪುತ್ರ ಗಣೇಶ್ (೩೯ ವ) ಮೃತಪಟ್ಟವರು. ಟ್ಯಾಂಕರ್ ಚಾಲಕ ಮಹಮ್ಮದ್ ಆಸಿಫ್ ಎಂಬಾತ ಅಜಾಗರೂಕತೆಯಿಂದ ವಾಹನ ಚಲಾಯಿಸಿದ್ದು, ಈ ವೇಳೆ ಬೈಕ್‌ಗೆ ಡಿಕ್ಕಿಯಾಗಿ ಗಣೇಶ್ ರಸ್ತೆಗೆ ಎಸೆಯಲ್ಪಟ್ಟು, ಗಂಭೀರ ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ಮೃತರು ಪತ್ನಿ ಪೂರ್ಣಿಮಾ, ತಂದೆ, ತಾಯಿ, ಸಹೋದರ ಯಶೋಧರ, ಸಹೋದರಿ ಪ್ರಮೀಳಾರನ್ನು ಅಗಲಿದ್ದಾರೆ.
ಈ ಬಗ್ಗೆ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

error: Content is protected !!