July 23, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಟ್ಯಾಂಕರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪುದುವೆಟ್ಟಿನ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

ಬೆಳ್ತಂಗಡಿ: ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಗಡಿಯಾರ ಎಂಬಲ್ಲಿ ಜು.9ರಂದು ಟ್ಯಾಂಕರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಜು.15ರಂದು ಮೃತಪಟ್ಟಿದ್ದಾರೆ.

ಪುದುವೆಟ್ಟು ಗ್ರಾಮದ ಬಾಜಿದಡಿ ನೋಣಯ್ಯ ಪೂಜಾರಿ-ಮೀನಾಕ್ಷಿ ದಂಪತಿ ಪುತ್ರ ಗಣೇಶ್ (೩೯ ವ) ಮೃತಪಟ್ಟವರು. ಟ್ಯಾಂಕರ್ ಚಾಲಕ ಮಹಮ್ಮದ್ ಆಸಿಫ್ ಎಂಬಾತ ಅಜಾಗರೂಕತೆಯಿಂದ ವಾಹನ ಚಲಾಯಿಸಿದ್ದು, ಈ ವೇಳೆ ಬೈಕ್‌ಗೆ ಡಿಕ್ಕಿಯಾಗಿ ಗಣೇಶ್ ರಸ್ತೆಗೆ ಎಸೆಯಲ್ಪಟ್ಟು, ಗಂಭೀರ ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ಮೃತರು ಪತ್ನಿ ಪೂರ್ಣಿಮಾ, ತಂದೆ, ತಾಯಿ, ಸಹೋದರ ಯಶೋಧರ, ಸಹೋದರಿ ಪ್ರಮೀಳಾರನ್ನು ಅಗಲಿದ್ದಾರೆ.
ಈ ಬಗ್ಗೆ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಅಳದಂಗಡಿ: ನೊಚ್ಚ ಮನೆತನದ ಕುವರಿ ನಿಯತಿ ಅಮೇರಿಕಾದಲ್ಲಿ ಯಕ್ಷಗಾನ ನಾಟ್ಯ ಪ್ರದರ್ಶನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಭಯಭೀತರಾದ ವಾಹನ ಸವಾರರು

Suddi Udaya

ಬಳಂಜ ಸ.ಉ. ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಮಕ್ಕಳ ಮೆಟ್ರಿಕ್ ಮೇಳ

Suddi Udaya

ಎ.20: ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ

Suddi Udaya

ಕುಂಭಶ್ರೀ ಆಂ.ಮಾ. ಶಾಲೆಯ ಸಂಸ್ಥಾಪಕ ಗಿರೀಶ್ ಕೆ ಎಚ್ ರವರಿಂದ ಉಚಿತ ಪುಸ್ತಕ ವಿತರಣೆ

Suddi Udaya

ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya
error: Content is protected !!