25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ 100ನೇ ಹುಟ್ಟುಹಬ್ಬದ ಅಂಗವಾಗಿ ಶ್ರೀರಾಘವೇಂದ್ರ ಮಠದ ಸುಂದರ ಪರಿಸರದಲ್ಲಿ “ಪ್ರೇಮ ತರು” ಸಸಿಗಳನ್ನು ನೆಡುವ ಕಾರ್ಯಕ್ರಮ

ಬೆಳ್ತಂಗಡಿ: ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ 100ನೇ ಹುಟ್ಟುಹಬ್ಬದ ಅಂಗವಾಗಿ ಪ್ರೇಮ ತರು ಎಂಬ ಸಸಿಗಳನ್ನು ನೆಡುವ ಕಾರ್ಯಕ್ರಮವನ್ನು ಜುಲೈ 14 ರಂದು ಶ್ರೀರಾಘವೇಂದ್ರ ಮಠದ ಸುಂದರ ಪರಿಸರದಲ್ಲಿ ಶ್ರೀ ಸತ್ಯಸಾಯಿ ಸೇವಾ ಸಮಿತಿ ಬೆಳ್ತಂಗಡಿ ಇವರ ವತಿಯಿಂದ ಜರಗಿಸಲಾಯಿತು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ ಲಾಯಿಲ ಬೆಳ್ತಂಗಡಿ ಇದರ ಅಧ್ಯಕ್ಷರು ನಿವ್ರತ್ತ ಎಸ್ ಪಿ ಪೀತಾಂಬರ ಹೆರಾಜೆಯವರು ಉದ್ಘಾಟಿಸಿ, ಪರಿಸರದ ಉಳಿವಿಗಾಗಿ ಸಸ್ಯ ಸಂಕುಲವನ್ನು ಬೆಳೆಸಿ ಮನುಕುಲಕ್ಕೆ ಪ್ರಧಾನ ಮಾಡುವ ಈ ರಾಷ್ಟ್ರೀಯ ಕಾರ್ಯಕ್ರಮ ಅತ್ಯಂತ ಔಚಿತ್ಯ ಪೂರ್ಣ ಮತ್ತು ಅನುಕರಣಿಯ ಉದಾತ್ತ ಸೇವಾ ಸಾಧನೆ ಎಂದು ಪ್ರಶಂಶಿಸಿದರು.

ಈ ಕಾರ್ಯಕ್ರಮದಲ್ಲಿ ಶ್ರೀ ಸತ್ಯಸಾಯಿ ಸೇವಾ ಸಮಿತಿ ಬೆಳ್ತಂಗಡಿ ಇದರ ಪದಾಧಿಕಾರಿಗಳು ಹಾಗೂ ಶ್ರೀ ಗುರು ರಾಘವೇಂದ್ರ ಸೇವಾ ಪ್ರತಿಷ್ಠಾನದ ಪದಾಧಿಕಾರಿಗಳು ಪಾಲ್ಗೊಂಡು ಸಹಕಾರ ನೀಡಿದರು. ಈ ಸಂದರ್ಭದಲ್ಲಿ ವಿವಿಧ ಜಾತಿಯ ಹಣ್ಣು ಹಾಗೂ ಔಷಧೀಯ ಗುಣವುಳ್ಳ ಸಸ್ಯಗಳನ್ನು ನೀಡಲಾಯಿತು ಮತ್ತು ವಿತರಣೆ ಮಾಡಲಾಯಿತು.

ಶ್ರೀಮತಿ ಉಮಾ ರಾವ್, ಶ್ರೀಮತಿ ಮೀನಾಕ್ಷಿ, ಶ್ರೀಮತಿ ಸುವರ್ಣ ಲಕ್ಷ್ಮಿ, ಶ್ರೀಮತಿ ಕುಸುಮಾವತಿ, ಶ್ರೀಮತಿ ಶಾಲಿನಿ, ಶ್ರೀ ಸಿಂಧೂರ್, ಶ್ರೀ ಪ್ರಸನ್ನ ಆಚಾರ್, ಶ್ರೀ ವಸಂತ, ಶ್ರೀ ಶಾಂತಪ್ಪ, ಇವರು ಸಮಿತಿಯ ಪರವಾಗಿ ಪಾಲ್ಗೊಂಡಿದ್ದರು.

ಶ್ರೀ ರಾಘವೇಂದ್ರ ಸ್ವಾಮಿ ಸೇವಾ ಪ್ರತಿಷ್ಠಾನದ ಪರಾಧಿಕಾರಿಗಳಾದ ಶ್ರೀ ವಸಂತ ಸುವರ್ಣ, ಶ್ರೀ ಮಹಾಬಲ ಶೆಟ್ಟಿ, ಶ್ರೀ ಜಯರಾಮ ಬಂಗೇರ ಹೆರಾಜೆ, ಶ್ರೀ ಕೃಷ್ಣಶೆಟ್ಟಿ, ಇವರು ಸಹಕರಿಸಿದರು.

ಈ ಕಾರ್ಯಕ್ರಮದ ಪ್ರಾಯೋಜಕತ್ವವನ್ನು ಶ್ರೀ ಅಕ್ಷಯ್ ಕುಮಾರ್ ಇವರು ವಹಿಸಿದ್ದರು.
ಬೆಳ್ತಂಗಡಿ ಶ್ರೀ ಸತ್ಯಸಾಯಿ ಸೇವಾ ಸಮಿತಿಯ ಸಂಚಾಲಕರಾದ ಶ್ರೀ ಎ ಕೃಷ್ಣಪ್ಪ ಪೂಜಾರಿ ಅವರು ಸ್ವಾಗತಿಸಿ ವಂದನಾರ್ಪಣೆ ಸಲ್ಲಿಸಿದರು.

Related posts

ಸಾವ್ಯ: ಆಕಸ್ಮಿಕವಾಗಿ ಕುಸಿದುಬಿದ್ದು ವ್ಯಕ್ತಿ ಸಾವು

Suddi Udaya

ಶಿಬಾಜೆ ಕಾಂಗ್ರೆಸ್ ಬೂತ್ ಸಮಿತಿಯ ಅಧ್ಯಕ್ಷ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗಿ

Suddi Udaya

ಪ್ರಕೃತಿ ವಿಸ್ಮಯ: ಪಪ್ಪಾಯಿ ಹಣ್ಣಿನೊಳಗೆ ಮರಿ ಪಪ್ಪಾಯಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕ್ರಿಟಿಕಲ್ ಫಂಡ್ ಚೆಕ್ ವಿತರಣೆ

Suddi Udaya

ಬಾರ್ಯ: ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ

Suddi Udaya

ಬಳಂಜ ವೈಭವದ ಶಾರದೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!