24.8 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಭಜನಾ ಪರಿಷತ್ ಲಾಯಿಲ ವಲಯದ ಅಧ್ಯಕ್ಷರಾಗಿ ಪಿ. ಚಂದ್ರಶೇಖರ ಸಾಲ್ಯಾನ್, ಕಾರ್ಯದರ್ಶಿಯಾಗಿ ಅಖಿಲೇಶ್ ಚಂದ್ಕೂರು, ಕೋಶಾಧಿಕಾರಿಯಾಗಿ ದಿನೇಶ್ ಜಾನ್ಲಪು

ಲಾಯಿಲ ವಲಯಕ್ಕೆ ಸಂಬಂಧಪಟ್ಟ ಭಜನಾ ಮಂಡಳಿಗಳ ಅಧ್ಯಕ್ಷರು ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳ ಸಭೆಯು ಇತ್ತೀಚೆಗೆ ಲಾಯಿಲ ಸಿಆರ್‌ಇ ತರಬೇತಿ ಕೇಂದ್ರದಲ್ಲಿ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿ ಪಿ. ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಭಜನಾ ಪರಿಷತ್ತಿನ ಸಮನ್ವಯ ಅಧಿಕಾರಿಯದ ಸಂತೋಷ್ ಭಾಗವಹಿಸಿ ವಲಯ ಪರಿಷತ್ತಿಗೆ ನೂತನ ಪದಾಧಿಕಾರಿಗಳ ಆಯ್ಕೆ ಬಗ್ಗೆ ಮಾಹಿತಿ ನೀಡಿದರು ನಂತರ ವಲಯ ಸಮಿತಿಯನ್ನು ರಚಿಸಲಾಯಿತು.

ಲಾಯಿಲ ವಲಯದ ನೂತನ ಅಧ್ಯಕ್ಷರಾಗಿ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿಯಾದ ಪಿ ಚಂದ್ರಶೇಖರ ಸಾಲ್ಯಾನ್, ಕೃಷ್ಣ ಭಜನಾ ಮಂಡಳಿ ಆದೂರುಪೆರಾಲ್ ಕೊಯ್ಯೂರು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಕುಶಲಪ್ಪ ಗೌಡ ನಡ ಲಕ್ಷ್ಮೀನರಸಿಂಹ ಭಜನಾ ಮಂಡಳಿ, ಕಾರ್ಯದರ್ಶಿಯಾಗಿ ಅಖಿಲೇಶ್ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಚಂದ್ಕೂರು, ಜೊತೆ ಕಾರ್ಯದರ್ಶಿಗಳಾಗಿ ರವಿ ಎಂ.ಕೆ. ಶಾರದ ಭಜನಾ ಮಂಡಳಿ ಪುದ್ದೋಟ್ಟು, ಶ್ರೀಮತಿ ಸೌಮ್ಯ ಶಾರದಾ ಮಹಿಳಾ ಭಜನಾ ಮಂಡಳಿ ಪುದ್ದೋಟ್ಟು, ಶ್ರೀಮತಿ ಪೂರ್ಣಿಮಾ ಶ್ರೀ ಕೃಷ್ಣ ಮಹಿಳಾ ಭಜನಾ ಮಂಡಳಿ ಆದೂರುಪೆರಾಲ್, ಕೋಶಾಧಿಕಾರಿಯಾಗಿ ದಿನೇಶ್ ಜಾಲ್ನಪು ಶ್ರೀ ಪಂಚದುರ್ಗಾ ಭಜನಾ ಮಂಡಳಿ ಕೊಯ್ಯೂರು ಇವರನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮ ಶ್ರೀಮತಿ ಪೂರ್ಣಿಮಾ ಹೇಮಂತ್ ಗೌಡ ಜಂಕಿನಡ್ಕ ಆದೂರು ಪೆರಾಲ್ ಪ್ರಾರ್ಥಿಸಿದರು. ವಲಯ ಮೇಲ್ವಿಚಾರಕ ಸುಶಾಂತ್ ಸ್ವಾಗತಿಸಿ ವಂದಿಸಿದರು.

Related posts

ಗರ್ಡಾಡಿ: ಕುಂಡದಬೆಟ್ಟು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ಧರ್ಮಸ್ಥಳ ಬೂತ್ ಸಂಖ್ಯೆ 163ರ ಅಧ್ಯಕ್ಷ ಉಮಾನಾಥ್ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ನಾಳೆಯಿಂದ ಬಂಡಾಜೆ ಜಲಪಾತ ವೀಕ್ಷಣೆಗೆ ಅವಕಾಶ

Suddi Udaya

ಸಂಗೀತ ಜೂನಿಯರ್ ಪರೀಕ್ಷೆ: ಸಾನ್ವಿ ಅಶ್ವಥಪಲ್ಕೆ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ನಡ: ಮಂಚದಪಲ್ಕೆ ಚಂದ್ಕೂರು ನಿವಾಸಿ ಸುಮಂಗಳ ನಿಧನ

Suddi Udaya

ಮಾದಕವಸ್ತು ಪ್ರಕರಣದಲ್ಲಿ ಆರೋಪಿಗೆ ಐದು ವರ್ಷ ಶಿಕ್ಷೆ ; ಆರೋಪಿಯನ್ನು 16 ವರ್ಷಗಳ ಬಳಿಕ ಬಂಧಿಸಿದ್ದ ಸಿ.ಎಸ್.ಪಿ ಅಧಿಕಾರಿಗಳು

Suddi Udaya
error: Content is protected !!