24.4 C
ಪುತ್ತೂರು, ಬೆಳ್ತಂಗಡಿ
May 18, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಭಜನಾ ಪರಿಷತ್ ಲಾಯಿಲ ವಲಯದ ಅಧ್ಯಕ್ಷರಾಗಿ ಪಿ. ಚಂದ್ರಶೇಖರ ಸಾಲ್ಯಾನ್, ಕಾರ್ಯದರ್ಶಿಯಾಗಿ ಅಖಿಲೇಶ್ ಚಂದ್ಕೂರು, ಕೋಶಾಧಿಕಾರಿಯಾಗಿ ದಿನೇಶ್ ಜಾನ್ಲಪು

ಲಾಯಿಲ ವಲಯಕ್ಕೆ ಸಂಬಂಧಪಟ್ಟ ಭಜನಾ ಮಂಡಳಿಗಳ ಅಧ್ಯಕ್ಷರು ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳ ಸಭೆಯು ಇತ್ತೀಚೆಗೆ ಲಾಯಿಲ ಸಿಆರ್‌ಇ ತರಬೇತಿ ಕೇಂದ್ರದಲ್ಲಿ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿ ಪಿ. ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಭಜನಾ ಪರಿಷತ್ತಿನ ಸಮನ್ವಯ ಅಧಿಕಾರಿಯದ ಸಂತೋಷ್ ಭಾಗವಹಿಸಿ ವಲಯ ಪರಿಷತ್ತಿಗೆ ನೂತನ ಪದಾಧಿಕಾರಿಗಳ ಆಯ್ಕೆ ಬಗ್ಗೆ ಮಾಹಿತಿ ನೀಡಿದರು ನಂತರ ವಲಯ ಸಮಿತಿಯನ್ನು ರಚಿಸಲಾಯಿತು.

ಲಾಯಿಲ ವಲಯದ ನೂತನ ಅಧ್ಯಕ್ಷರಾಗಿ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿಯಾದ ಪಿ ಚಂದ್ರಶೇಖರ ಸಾಲ್ಯಾನ್, ಕೃಷ್ಣ ಭಜನಾ ಮಂಡಳಿ ಆದೂರುಪೆರಾಲ್ ಕೊಯ್ಯೂರು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಕುಶಲಪ್ಪ ಗೌಡ ನಡ ಲಕ್ಷ್ಮೀನರಸಿಂಹ ಭಜನಾ ಮಂಡಳಿ, ಕಾರ್ಯದರ್ಶಿಯಾಗಿ ಅಖಿಲೇಶ್ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಚಂದ್ಕೂರು, ಜೊತೆ ಕಾರ್ಯದರ್ಶಿಗಳಾಗಿ ರವಿ ಎಂ.ಕೆ. ಶಾರದ ಭಜನಾ ಮಂಡಳಿ ಪುದ್ದೋಟ್ಟು, ಶ್ರೀಮತಿ ಸೌಮ್ಯ ಶಾರದಾ ಮಹಿಳಾ ಭಜನಾ ಮಂಡಳಿ ಪುದ್ದೋಟ್ಟು, ಶ್ರೀಮತಿ ಪೂರ್ಣಿಮಾ ಶ್ರೀ ಕೃಷ್ಣ ಮಹಿಳಾ ಭಜನಾ ಮಂಡಳಿ ಆದೂರುಪೆರಾಲ್, ಕೋಶಾಧಿಕಾರಿಯಾಗಿ ದಿನೇಶ್ ಜಾಲ್ನಪು ಶ್ರೀ ಪಂಚದುರ್ಗಾ ಭಜನಾ ಮಂಡಳಿ ಕೊಯ್ಯೂರು ಇವರನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮ ಶ್ರೀಮತಿ ಪೂರ್ಣಿಮಾ ಹೇಮಂತ್ ಗೌಡ ಜಂಕಿನಡ್ಕ ಆದೂರು ಪೆರಾಲ್ ಪ್ರಾರ್ಥಿಸಿದರು. ವಲಯ ಮೇಲ್ವಿಚಾರಕ ಸುಶಾಂತ್ ಸ್ವಾಗತಿಸಿ ವಂದಿಸಿದರು.

Related posts

ಎಸ್. ಡಿ. ಎಂ. ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರಾಜೆಕ್ಟರ್ ಹಸ್ತಾಂತರ

Suddi Udaya

ನಿಡ್ಲೆ ಹಾಗೂ ಬೂಡುಜಾಲುವಿನಲ್ಲಿ ಸೌಜನ್ಯಪರ ಹಾಕಿದ ಬ್ಯಾನರ್ ನ್ನು ಕಿತ್ತೆಸೆದ ಕಿಡಿಗೇಡಿಗಳು

Suddi Udaya

ಧರ್ಮಸ್ಥಳ: ನೀರಚಿಲುಮೆ ಬಸ್ ಸ್ಟ್ಯಾಂಡಿನ ಬಳಿ ಹೆದ್ದಾರಿ ಬದಿಯಲ್ಲಿ ಕುಸಿದ ರಸ್ತೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ವಿವೇಕಾನಂದ ಜಯಂತಿ

Suddi Udaya

ಬಳಂಜ ಜ್ಯೋತಿ ಯುವತಿ ಮಂಡಲದ ಉದ್ಘಾಟನಾ ಸಮಾರಂಭ

Suddi Udaya
error: Content is protected !!