26.7 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಭಜನಾ ಪರಿಷತ್ ಲಾಯಿಲ ವಲಯದ ಅಧ್ಯಕ್ಷರಾಗಿ ಪಿ. ಚಂದ್ರಶೇಖರ ಸಾಲ್ಯಾನ್, ಕಾರ್ಯದರ್ಶಿಯಾಗಿ ಅಖಿಲೇಶ್ ಚಂದ್ಕೂರು, ಕೋಶಾಧಿಕಾರಿಯಾಗಿ ದಿನೇಶ್ ಜಾನ್ಲಪು

ಲಾಯಿಲ ವಲಯಕ್ಕೆ ಸಂಬಂಧಪಟ್ಟ ಭಜನಾ ಮಂಡಳಿಗಳ ಅಧ್ಯಕ್ಷರು ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳ ಸಭೆಯು ಇತ್ತೀಚೆಗೆ ಲಾಯಿಲ ಸಿಆರ್‌ಇ ತರಬೇತಿ ಕೇಂದ್ರದಲ್ಲಿ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿ ಪಿ. ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಭಜನಾ ಪರಿಷತ್ತಿನ ಸಮನ್ವಯ ಅಧಿಕಾರಿಯದ ಸಂತೋಷ್ ಭಾಗವಹಿಸಿ ವಲಯ ಪರಿಷತ್ತಿಗೆ ನೂತನ ಪದಾಧಿಕಾರಿಗಳ ಆಯ್ಕೆ ಬಗ್ಗೆ ಮಾಹಿತಿ ನೀಡಿದರು ನಂತರ ವಲಯ ಸಮಿತಿಯನ್ನು ರಚಿಸಲಾಯಿತು.

ಲಾಯಿಲ ವಲಯದ ನೂತನ ಅಧ್ಯಕ್ಷರಾಗಿ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿಯಾದ ಪಿ ಚಂದ್ರಶೇಖರ ಸಾಲ್ಯಾನ್, ಕೃಷ್ಣ ಭಜನಾ ಮಂಡಳಿ ಆದೂರುಪೆರಾಲ್ ಕೊಯ್ಯೂರು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಕುಶಲಪ್ಪ ಗೌಡ ನಡ ಲಕ್ಷ್ಮೀನರಸಿಂಹ ಭಜನಾ ಮಂಡಳಿ, ಕಾರ್ಯದರ್ಶಿಯಾಗಿ ಅಖಿಲೇಶ್ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಚಂದ್ಕೂರು, ಜೊತೆ ಕಾರ್ಯದರ್ಶಿಗಳಾಗಿ ರವಿ ಎಂ.ಕೆ. ಶಾರದ ಭಜನಾ ಮಂಡಳಿ ಪುದ್ದೋಟ್ಟು, ಶ್ರೀಮತಿ ಸೌಮ್ಯ ಶಾರದಾ ಮಹಿಳಾ ಭಜನಾ ಮಂಡಳಿ ಪುದ್ದೋಟ್ಟು, ಶ್ರೀಮತಿ ಪೂರ್ಣಿಮಾ ಶ್ರೀ ಕೃಷ್ಣ ಮಹಿಳಾ ಭಜನಾ ಮಂಡಳಿ ಆದೂರುಪೆರಾಲ್, ಕೋಶಾಧಿಕಾರಿಯಾಗಿ ದಿನೇಶ್ ಜಾಲ್ನಪು ಶ್ರೀ ಪಂಚದುರ್ಗಾ ಭಜನಾ ಮಂಡಳಿ ಕೊಯ್ಯೂರು ಇವರನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮ ಶ್ರೀಮತಿ ಪೂರ್ಣಿಮಾ ಹೇಮಂತ್ ಗೌಡ ಜಂಕಿನಡ್ಕ ಆದೂರು ಪೆರಾಲ್ ಪ್ರಾರ್ಥಿಸಿದರು. ವಲಯ ಮೇಲ್ವಿಚಾರಕ ಸುಶಾಂತ್ ಸ್ವಾಗತಿಸಿ ವಂದಿಸಿದರು.

Related posts

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಂದ ಡಾ.ಹೆಗ್ಗಡೆ ಹಾಗೂ ಕನ್ಯಾಡಿ ಶ್ರೀ ಭೇಟಿ

Suddi Udaya

ಎಸ್.ಡಿ.ಎಂ ಕಾಲೇಜಿನ ತಾಂತ್ರಿಕ ವಿದ್ಯಾಲಯದ ಗ್ರಂಥಪಾಲಕಿ ಡಾ. ರಜತಾ ಪಿ ಶೆಟ್ಟಿ ಪ್ರಬಂಧಕ್ಕೆ ಅಂತರಾಷ್ಟ ಮಟ್ಟದ ಅತ್ಯುತ್ತಮ ಪ್ರಬಂಧ ಪ್ರಶಸ್ತಿ

Suddi Udaya

ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಲೋಕೋಪಯೋಗಿ ಇಲಾಖೆಯ ಎಇಇ ಹಾಗೂ ಸಹಾಯಕ ಇಂಜಿನಿಯರ್ ರವರಿಗೆ ಮನವಿ

Suddi Udaya

ಗುರುವಾಯನಕೆರೆ: ಸ್ಕೂಟಿ- ಬೈಕ್ ಮುಖಾಮುಖಿ ಡಿಕ್ಕಿ,ಸವಾರರಿಬ್ಬರಿಗೆ ಗಂಭೀರ ಗಾಯ,ಆಸ್ಪತ್ರೆಗೆ ದಾಖಲು

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya

ಬೆಳ್ತಂಗಡಿ ಪೋಲಿಸ್ ಠಾಣಾ ನಿರೀಕ್ಷಕರಾಗಿ ಬಸವಲಿಂಗಯ್ಯ ಸುಬ್ಬಾಪುರಮಠ ಅಧಿಕಾರ ಸ್ವೀಕಾರ

Suddi Udaya
error: Content is protected !!