25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಧರ್ಮಸ್ಥಳ: ‘ಉನ್ನತಿ’ ವಾಣಿಜ್ಯ ಸಂಕೀರ್ಣದಲ್ಲಿ ‘ಆತಿಥ್ಯ ವೆಜ್’ ಶುಭಾರಂಭ

ಧರ್ಮಸ್ಥಳ : ನೂತನವಾಗಿ ಉದ್ಘಾಟನೆಗೊಂಡ ಉನ್ನತಿ ವಾಣಿಜ್ಯ ಸಂಕೀರ್ಣದಲ್ಲಿ ‘ಆತಿಥ್ಯ ವೆಜ್ ‘ ಇದರ ಉದ್ಘಾಟನಾ ಸಮಾರಂಭವು ಜು.16 ರಂದು ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಮಣೆಗಾರರು ವಸಂತ ಮಂಜಿತ್ತಾಯ ದೀಪ ಬೆಳಗಿಸಿ ಮಾತನಾಡಿ ಧರ್ಮಸ್ಥಳ ಪರಿಸರಕ್ಕೆ ‘ಆದಿತ್ಯ ವೆಜ್’ ಶೋಭೆಯನ್ನು ತಂದಿದೆ. ಗ್ರಾಹಕರಿಗೆ ಶುಚಿ – ರುಚಿಯಾದಂತಹ ಆತಿಥ್ಯವನ್ನು ನೀಡಿ. ಪಾಲುದಾರಿಕೆಯ ನಿಮ್ಮ ಉದ್ಯಮ ಯಶಸ್ಸನ್ನು ಕಾಣಲಿ ಎಂದು ಶುಭ ಹಾರೈಸಿದರು.

ಧರ್ಮಸ್ಥಳ ಪ್ರಾ.ಕೃ.ಪ.ಸ. ಅಧ್ಯಕ್ಷ ಪ್ರೀತಮ್ ಡಿ. ಮಾತನಾಡಿ ನೂತನವಾಗಿ ಉದ್ಘಾಟನೆಗೊಂಡ ಉನ್ನತಿ ಕಟ್ಟಡಕ್ಕೆ ‘ಆತಿಥ್ಯ ವೆಜ್’ ಇನ್ನಷ್ಟು ಶೋಭೆಯನ್ನು ತಂದಿದೆ. ಕ್ಷೇತ್ರಕ್ಕೆ ಬರುವಂತಹ ಭಕ್ತರು, ಪ್ರವಾಸಿಗರು ಹಾಗೂ ಸ್ಥಳೀಯರು ಆತಿಥ್ಯ ವೆಜ್ ಗೆ ಬರುವಂತಾಗಲಿ. ಉದ್ಯಮ ಉತ್ತಮ ಅಭಿವೃದ್ಧಿಯಾಗಲಿ ಎಂದು ಶುಭಹಾರೈಸಿದರು.

ವೇದಿಕೆಯಲ್ಲಿ ಧರ್ಮಸ್ಥಳ ಪ್ರಾ.ಕೃ.ಪ.ಸ. ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್, ಧರ್ಮಸ್ಥಳ ಪ್ರಾ.ಕೃ.ಪ.ಸ. ವ್ಯವಸ್ಥಾಪಕ ಎಂ. ಸತೀಶ್ ಹೊಳ್ಳ, ಅಖಿಲೇಶ್ ಕುಮಾರ್ ಎಂ, ರವಿಕುಮಾರ್, ಹರ್ಷಿತ್ ಕುಮಾರ್ ಜೈನ್, ಮುರಳೀದರದಾಸ್, ಧರ್ಮಸ್ಥಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ದೇವಸ್ಯ ಟಿ.ವಿ. ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾಲಕರಾದ ನಿಶಾಂತ್ ಹೆಬ್ಬಾರ್ ಮತ್ತು ವಿನಾಯಕ್ ಹಾಗೂ ಬಂಧು-ಮಿತ್ರರು ಉಪಸ್ಥಿತರಿದ್ದರು.

ರೇಖಾ ಪ್ರಶಾಂತ್ ಹೆಬ್ಬಾರ್ ಪ್ರಾರ್ಥಿಸಿದರು. ಮೋಹನ್ ಕೆ. ಧರ್ಮಸ್ಥಳ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

Related posts

ಜಿಲ್ಲಾ ಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮ: ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಸಂಜನಾ ಎಸ್ ರಿಗೆ ಅಭಿನಯ ಕಥೆಯಲ್ಲಿ ಪ್ರಥಮ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.172 ಕೋಟಿ ವ್ಯವಹಾರ, ರೂ. 87 ಲಕ್ಷ ಲಾಭ, ಶೇ.4 ಡಿವಿಡೆಂಡ್

Suddi Udaya

ಉಡುಪಿ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಂದ ಅರ್ಚಕ ಕೆ.ರಮಾನಂದ ಭಟ್ ಕೊಕ್ಕಡ ಅವರಿಗೆ “ಶ್ರೀಕೃಷ್ಣಗೀತಾನುಗ್ರಹ” ಪ್ರಶಸ್ತಿ ಪ್ರದಾನ

Suddi Udaya

ಧರ್ಮಸ್ಥಳ ಮೇಳದ ತಿರುಗಾಟ ಪ್ರಾರಂಭ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ನಕಲಿ ಸಹಿ ಮಾಡಿ ಅಕ್ಷರ ದಾಸೋಹ ಮತ್ತು ಎಸ್.ಎಸ್.ಎ. ಖಾತೆಯ ಹಣ ಡ್ರಾ; ಮುಖ್ಯ ಶಿಕ್ಷಕಿಯ ವಿರುದ್ಧ ಎಸ್.ಡಿ.ಎಂ.ಸಿ ಅಧ್ಯಕ್ಷೆ ದೂರು: ಪೋಜ೯ರಿ ಸಹಿ ಮಾಡಿ ಶಾಲೆಯ ಖಾತೆಯಿಂದ ಯಾವತ್ತೂ ಹಣವನ್ನು ಡ್ರಾ ಮಾಡಿರುವುದಿಲ್ಲ : ಮುಖ್ಯ ಶಿಕ್ಷಕಿ ಸ್ಪಷ್ಟನೆ

Suddi Udaya
error: Content is protected !!