July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಧರ್ಮಸ್ಥಳ: ‘ಉನ್ನತಿ’ ವಾಣಿಜ್ಯ ಸಂಕೀರ್ಣದಲ್ಲಿ ‘ಆತಿಥ್ಯ ವೆಜ್’ ಶುಭಾರಂಭ

ಧರ್ಮಸ್ಥಳ : ನೂತನವಾಗಿ ಉದ್ಘಾಟನೆಗೊಂಡ ಉನ್ನತಿ ವಾಣಿಜ್ಯ ಸಂಕೀರ್ಣದಲ್ಲಿ ‘ಆತಿಥ್ಯ ವೆಜ್ ‘ ಇದರ ಉದ್ಘಾಟನಾ ಸಮಾರಂಭವು ಜು.16 ರಂದು ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಮಣೆಗಾರರು ವಸಂತ ಮಂಜಿತ್ತಾಯ ದೀಪ ಬೆಳಗಿಸಿ ಮಾತನಾಡಿ ಧರ್ಮಸ್ಥಳ ಪರಿಸರಕ್ಕೆ ‘ಆದಿತ್ಯ ವೆಜ್’ ಶೋಭೆಯನ್ನು ತಂದಿದೆ. ಗ್ರಾಹಕರಿಗೆ ಶುಚಿ – ರುಚಿಯಾದಂತಹ ಆತಿಥ್ಯವನ್ನು ನೀಡಿ. ಪಾಲುದಾರಿಕೆಯ ನಿಮ್ಮ ಉದ್ಯಮ ಯಶಸ್ಸನ್ನು ಕಾಣಲಿ ಎಂದು ಶುಭ ಹಾರೈಸಿದರು.

ಧರ್ಮಸ್ಥಳ ಪ್ರಾ.ಕೃ.ಪ.ಸ. ಅಧ್ಯಕ್ಷ ಪ್ರೀತಮ್ ಡಿ. ಮಾತನಾಡಿ ನೂತನವಾಗಿ ಉದ್ಘಾಟನೆಗೊಂಡ ಉನ್ನತಿ ಕಟ್ಟಡಕ್ಕೆ ‘ಆತಿಥ್ಯ ವೆಜ್’ ಇನ್ನಷ್ಟು ಶೋಭೆಯನ್ನು ತಂದಿದೆ. ಕ್ಷೇತ್ರಕ್ಕೆ ಬರುವಂತಹ ಭಕ್ತರು, ಪ್ರವಾಸಿಗರು ಹಾಗೂ ಸ್ಥಳೀಯರು ಆತಿಥ್ಯ ವೆಜ್ ಗೆ ಬರುವಂತಾಗಲಿ. ಉದ್ಯಮ ಉತ್ತಮ ಅಭಿವೃದ್ಧಿಯಾಗಲಿ ಎಂದು ಶುಭಹಾರೈಸಿದರು.

ವೇದಿಕೆಯಲ್ಲಿ ಧರ್ಮಸ್ಥಳ ಪ್ರಾ.ಕೃ.ಪ.ಸ. ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್, ಧರ್ಮಸ್ಥಳ ಪ್ರಾ.ಕೃ.ಪ.ಸ. ವ್ಯವಸ್ಥಾಪಕ ಎಂ. ಸತೀಶ್ ಹೊಳ್ಳ, ಅಖಿಲೇಶ್ ಕುಮಾರ್ ಎಂ, ರವಿಕುಮಾರ್, ಹರ್ಷಿತ್ ಕುಮಾರ್ ಜೈನ್, ಮುರಳೀದರದಾಸ್, ಧರ್ಮಸ್ಥಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ದೇವಸ್ಯ ಟಿ.ವಿ. ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾಲಕರಾದ ನಿಶಾಂತ್ ಹೆಬ್ಬಾರ್ ಮತ್ತು ವಿನಾಯಕ್ ಹಾಗೂ ಬಂಧು-ಮಿತ್ರರು ಉಪಸ್ಥಿತರಿದ್ದರು.

ರೇಖಾ ಪ್ರಶಾಂತ್ ಹೆಬ್ಬಾರ್ ಪ್ರಾರ್ಥಿಸಿದರು. ಮೋಹನ್ ಕೆ. ಧರ್ಮಸ್ಥಳ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

Related posts

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಚಿರಾಗ್ ನಾಯಕ್‌ಗೆ ಅಭಿನಂದನೆ

Suddi Udaya

ಕಾರಿಂಜ ಮಧ್ವ ಬಳಿ ಕಾರು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಬೆಳ್ತಂಗಡಿಯ ಯುವಕ ಸ್ಥಳದಲ್ಲೆ ಸಾವು

Suddi Udaya

ಲಾಯಿಲ: ಬಜಕ್ಕಿರೆಸಾಲು ಬಳಿ ಚಿರತೆ ಓಡಾಟ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯರಿಗೆ ಸನ್ಮಾನ

Suddi Udaya

ಗಡಿಪಾರು ಆದೇಶ ಪ್ರಶ್ನಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ ವಜಾ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya
error: Content is protected !!