37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಹೊಸಂಗಡಿ: ವಲಯ ಮಟ್ಟದ ಪದಗ್ರಹಣ ಸಮಾರಂಭ

ಹೊಸಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಗುರುವಾಯನಕೆರೆ ವ್ಯಾಪ್ತಿಯ ಹೊಸಂಗಡಿ ವಲಯದ ಬಡಕೋಡಿ ಒಕ್ಕೂಟದ ಆಶ್ರಯದಲ್ಲಿ ಜರಗುವ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟಗಳ ಪದಗ್ರಹಣ ಸಮಾರಂಭ ಪಾಡ್ಯರಬೆಟ್ಟು ಸಂತೃಪ್ತಿ ಸಭಾಭವನದಲ್ಲಿ ಜರುಗಿತು.

ಪದ್ಮಾ ಕ್ಯಾಷು ಫ್ಯಾಕ್ಟರಿ ಮಾಲಕ ವಿಕಾಸ್ ಜೈನ್ ಕಾರ್ಯಕ್ರಮ ಉದ್ಘಾಟಿಸಿ ಯೋಜನೆಯಿಂದ ಪ್ರತಿ ಮನೆ ಮನೆಯ ಅಭಿವೃದ್ಧಿಯಾಗಿದೆ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ದಂಪತಿಗಳ ಆಶಯವಾಗಿದೆ, ಎಂದು ನೂತನ ಒಕ್ಕೂಟಕ್ಕೆ ಶುಭ ಹಾರೈಸಿದರು.

ಕೇಂದ್ರ ಕಚೇರಿಯ ಮಾನವ ಸಂಪನ್ಮೂಲ ಯೋಜನಾಧಿಕಾರಿ ಶ್ರೀನಿವಾಸ್ ಪಿ. ಮಾತನಾಡಿ ನಂಬಿಕೆಯ ಆಧಾರದಲ್ಲಿ ಬೆಳೆದು ಬಂದಿರುವ ಗ್ರಾಮಾಭಿವೃದ್ಧಿ ಯೋಜನೆಯ ಮೂಲ ಪರಿಕಲ್ಪನೆ ಹಾಗೂ ಜನರ ಜೀವನದಲ್ಲಿ ಆಗಿರುವ ಬದಲಾವಣೆ ಬಗ್ಗೆ ಹಾಗೂ ಧಾರ್ಮಿಕವಾಗಿ ಜನರ ಭಾವನೆಗಳ ಬಗ್ಗೆ ಹೇಳುತ್ತಾ ಹುಟ್ಟು ಹಾಕಿರುವ ಮೂಲದೇಯವನ್ನು ನಾವು ಮರೆಯಬಾರದು ಎಂದು ತಿಳಿಸಿದರು.

ಹೊಸಂಗಡಿ ವಲಯ ಅಧ್ಯಕ್ಷ ಸತೀಶ್ ಮಠ ರವರು ೩೦ ವರ್ಷದ ಹಿಂದಿನ ಜೀವನದ ಪರಿಕಲ್ಪನೆ ಹಾಗೂ ಈಗಿನ ಜೀವನದಲ್ಲಿ ಆಗಿರುವ ಬದಲಾವಣೆಗೆ ಪೂಜ್ಯರೇ ಕಾರಣ ಎಂದು ಹೇಳಿದರು.

ವೇದಿಕೆಯಲ್ಲಿ ತಾಲೂಕು ಜನಜಾಗೃತಿ ಸದಸ್ಯರಾದ ವಿದ್ಯಾನಂದ ಜೈನ್, ವಿಠಲ್ ಸಿ ಪೂಜಾರಿ, ಪೂಜಾ ಸಮಿತಿ ಅಧ್ಯಕ್ಷ ಸೀನ ಶೆಟ್ಟಿ ಕಿರಿಂಬಿ ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಪಣಕಜೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಅಶಕ್ತ ಕುಟುಂಬಗಳಿಗೆ ಧನ ಸಹಾಯ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಡಂತ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಪಾರೆಂಕಿ ಶ್ರೀ ಮಹಿಷಾಮರ್ದಿನಿ ದೇವಸ್ಥಾನದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ : ವೈಟ್‌ಹೌಸ್ ನಿವಾಸಿ ನಾರಾಯಣ ಪೂಜಾರಿ

Suddi Udaya

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಭಾಗದ ನದಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!