April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಹೊಸಂಗಡಿ: ವಲಯ ಮಟ್ಟದ ಪದಗ್ರಹಣ ಸಮಾರಂಭ

ಹೊಸಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಗುರುವಾಯನಕೆರೆ ವ್ಯಾಪ್ತಿಯ ಹೊಸಂಗಡಿ ವಲಯದ ಬಡಕೋಡಿ ಒಕ್ಕೂಟದ ಆಶ್ರಯದಲ್ಲಿ ಜರಗುವ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟಗಳ ಪದಗ್ರಹಣ ಸಮಾರಂಭ ಪಾಡ್ಯರಬೆಟ್ಟು ಸಂತೃಪ್ತಿ ಸಭಾಭವನದಲ್ಲಿ ಜರುಗಿತು.

ಪದ್ಮಾ ಕ್ಯಾಷು ಫ್ಯಾಕ್ಟರಿ ಮಾಲಕ ವಿಕಾಸ್ ಜೈನ್ ಕಾರ್ಯಕ್ರಮ ಉದ್ಘಾಟಿಸಿ ಯೋಜನೆಯಿಂದ ಪ್ರತಿ ಮನೆ ಮನೆಯ ಅಭಿವೃದ್ಧಿಯಾಗಿದೆ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ದಂಪತಿಗಳ ಆಶಯವಾಗಿದೆ, ಎಂದು ನೂತನ ಒಕ್ಕೂಟಕ್ಕೆ ಶುಭ ಹಾರೈಸಿದರು.

ಕೇಂದ್ರ ಕಚೇರಿಯ ಮಾನವ ಸಂಪನ್ಮೂಲ ಯೋಜನಾಧಿಕಾರಿ ಶ್ರೀನಿವಾಸ್ ಪಿ. ಮಾತನಾಡಿ ನಂಬಿಕೆಯ ಆಧಾರದಲ್ಲಿ ಬೆಳೆದು ಬಂದಿರುವ ಗ್ರಾಮಾಭಿವೃದ್ಧಿ ಯೋಜನೆಯ ಮೂಲ ಪರಿಕಲ್ಪನೆ ಹಾಗೂ ಜನರ ಜೀವನದಲ್ಲಿ ಆಗಿರುವ ಬದಲಾವಣೆ ಬಗ್ಗೆ ಹಾಗೂ ಧಾರ್ಮಿಕವಾಗಿ ಜನರ ಭಾವನೆಗಳ ಬಗ್ಗೆ ಹೇಳುತ್ತಾ ಹುಟ್ಟು ಹಾಕಿರುವ ಮೂಲದೇಯವನ್ನು ನಾವು ಮರೆಯಬಾರದು ಎಂದು ತಿಳಿಸಿದರು.

ಹೊಸಂಗಡಿ ವಲಯ ಅಧ್ಯಕ್ಷ ಸತೀಶ್ ಮಠ ರವರು ೩೦ ವರ್ಷದ ಹಿಂದಿನ ಜೀವನದ ಪರಿಕಲ್ಪನೆ ಹಾಗೂ ಈಗಿನ ಜೀವನದಲ್ಲಿ ಆಗಿರುವ ಬದಲಾವಣೆಗೆ ಪೂಜ್ಯರೇ ಕಾರಣ ಎಂದು ಹೇಳಿದರು.

ವೇದಿಕೆಯಲ್ಲಿ ತಾಲೂಕು ಜನಜಾಗೃತಿ ಸದಸ್ಯರಾದ ವಿದ್ಯಾನಂದ ಜೈನ್, ವಿಠಲ್ ಸಿ ಪೂಜಾರಿ, ಪೂಜಾ ಸಮಿತಿ ಅಧ್ಯಕ್ಷ ಸೀನ ಶೆಟ್ಟಿ ಕಿರಿಂಬಿ ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ಕಾಯರ್ತಡ್ಕ: ಹದಗೆಟ್ಟ ರಸ್ತೆ, ಶಿಲಾನ್ಯಾಸಗೊಂಡ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ, ಪ್ರತಿಭಟನೆಗೆ ಗ್ರಾಮಸ್ಥರ ಸಿದ್ದತೆ

Suddi Udaya

ಎಕ್ಸೆಲ್ ಗೆ ಎಸ್ ಡಿ ಎಂ ನ ಎಕ್ಸ್ ಪಿರಿಯ ವಿಜ್ಞಾನ ಮೇಳದಲ್ಲಿ ಚಾಂಪಿಯನ್ ಶಿಪ್

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಮತ್ತು ಕುವೆಟ್ಟು ಗ್ರಾಮ ಸಮಿತಿಯ ತ್ರೈಮಾಸಿಕ ಸಭೆ ಹಾಗೂ ವನಮಹೋತ್ಸವ

Suddi Udaya

ಮೇ 14ರಿಂದ 24ರವರೆಗೆ ಕುಲಶೇಖರ ವೀರನಾರಾಯಣ ದೇವರಿಗೆ ಬ್ರಹ್ಮಕಲಶದ ವೈಭವ : ರೂ. 10 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣ: ಪತ್ರಿಕಾಗೋಷ್ಠಿಯಲ್ಲಿ ಮಯೂರ್ ಉಳ್ಳಾಲ್ ಮಾಹಿತಿ

Suddi Udaya

ಬೆಳ್ತಂಗಡಿ ದಿ ಆರ್ಟ್ ಆಫ್ ಲಿವಿಂಗ್ ಆನಂದೋತ್ಸವ ಶಿಬಿರದ ಸಮಾರೋಪ

Suddi Udaya
error: Content is protected !!