23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಹೊಸಂಗಡಿ: ವಲಯ ಮಟ್ಟದ ಪದಗ್ರಹಣ ಸಮಾರಂಭ

ಹೊಸಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಗುರುವಾಯನಕೆರೆ ವ್ಯಾಪ್ತಿಯ ಹೊಸಂಗಡಿ ವಲಯದ ಬಡಕೋಡಿ ಒಕ್ಕೂಟದ ಆಶ್ರಯದಲ್ಲಿ ಜರಗುವ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟಗಳ ಪದಗ್ರಹಣ ಸಮಾರಂಭ ಪಾಡ್ಯರಬೆಟ್ಟು ಸಂತೃಪ್ತಿ ಸಭಾಭವನದಲ್ಲಿ ಜರುಗಿತು.

ಪದ್ಮಾ ಕ್ಯಾಷು ಫ್ಯಾಕ್ಟರಿ ಮಾಲಕ ವಿಕಾಸ್ ಜೈನ್ ಕಾರ್ಯಕ್ರಮ ಉದ್ಘಾಟಿಸಿ ಯೋಜನೆಯಿಂದ ಪ್ರತಿ ಮನೆ ಮನೆಯ ಅಭಿವೃದ್ಧಿಯಾಗಿದೆ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ದಂಪತಿಗಳ ಆಶಯವಾಗಿದೆ, ಎಂದು ನೂತನ ಒಕ್ಕೂಟಕ್ಕೆ ಶುಭ ಹಾರೈಸಿದರು.

ಕೇಂದ್ರ ಕಚೇರಿಯ ಮಾನವ ಸಂಪನ್ಮೂಲ ಯೋಜನಾಧಿಕಾರಿ ಶ್ರೀನಿವಾಸ್ ಪಿ. ಮಾತನಾಡಿ ನಂಬಿಕೆಯ ಆಧಾರದಲ್ಲಿ ಬೆಳೆದು ಬಂದಿರುವ ಗ್ರಾಮಾಭಿವೃದ್ಧಿ ಯೋಜನೆಯ ಮೂಲ ಪರಿಕಲ್ಪನೆ ಹಾಗೂ ಜನರ ಜೀವನದಲ್ಲಿ ಆಗಿರುವ ಬದಲಾವಣೆ ಬಗ್ಗೆ ಹಾಗೂ ಧಾರ್ಮಿಕವಾಗಿ ಜನರ ಭಾವನೆಗಳ ಬಗ್ಗೆ ಹೇಳುತ್ತಾ ಹುಟ್ಟು ಹಾಕಿರುವ ಮೂಲದೇಯವನ್ನು ನಾವು ಮರೆಯಬಾರದು ಎಂದು ತಿಳಿಸಿದರು.

ಹೊಸಂಗಡಿ ವಲಯ ಅಧ್ಯಕ್ಷ ಸತೀಶ್ ಮಠ ರವರು ೩೦ ವರ್ಷದ ಹಿಂದಿನ ಜೀವನದ ಪರಿಕಲ್ಪನೆ ಹಾಗೂ ಈಗಿನ ಜೀವನದಲ್ಲಿ ಆಗಿರುವ ಬದಲಾವಣೆಗೆ ಪೂಜ್ಯರೇ ಕಾರಣ ಎಂದು ಹೇಳಿದರು.

ವೇದಿಕೆಯಲ್ಲಿ ತಾಲೂಕು ಜನಜಾಗೃತಿ ಸದಸ್ಯರಾದ ವಿದ್ಯಾನಂದ ಜೈನ್, ವಿಠಲ್ ಸಿ ಪೂಜಾರಿ, ಪೂಜಾ ಸಮಿತಿ ಅಧ್ಯಕ್ಷ ಸೀನ ಶೆಟ್ಟಿ ಕಿರಿಂಬಿ ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬಟ್ಲಡ್ಕ ಜುಮಾ ಮಸೀದಿಯಲ್ಲಿ ದಿ| ಶೈಖುನಾ ಮರ್ಹೂಮ್ ಕೂರಾ ತಂಙಲ್ ಅವರ ಹೆಸರಿನಲ್ಲಿ ಅನುಸ್ಮರಣೆ ಕಾರ್ಯಕ್ರಮ

Suddi Udaya

ಶಿರ್ಲಾಲು: ದರ್ಖಾಸು ಮನೆಯ ರಾಜು ಗೌಡ ಹೃದಯಾಘಾತದಿಂದ ನಿಧನ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಶಾರದಾ ಮಾತೆಯ ವಿಗ್ರಹ ಪಿಠಾರ್ಪಣೆ

Suddi Udaya

ಎಸ್ ಡಿ ಎಂ ಬೆಳ್ತಂಗಡಿ ಆಂಗ್ಲ ಮಾಧ್ಯಮ ಶಾಲೆಗೆ ಸಿ ಡಬ್ಲ್ಯೂ ಬಿ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಶಾಖಾ ಮಠ ನಿರ್ಮಾಣ: ಸಮಿತಿಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಿಂದ ವೀಕ್ಷಣೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!