25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಹೊಸಂಗಡಿ: ವಲಯ ಮಟ್ಟದ ಪದಗ್ರಹಣ ಸಮಾರಂಭ

ಹೊಸಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಗುರುವಾಯನಕೆರೆ ವ್ಯಾಪ್ತಿಯ ಹೊಸಂಗಡಿ ವಲಯದ ಬಡಕೋಡಿ ಒಕ್ಕೂಟದ ಆಶ್ರಯದಲ್ಲಿ ಜರಗುವ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟಗಳ ಪದಗ್ರಹಣ ಸಮಾರಂಭ ಪಾಡ್ಯರಬೆಟ್ಟು ಸಂತೃಪ್ತಿ ಸಭಾಭವನದಲ್ಲಿ ಜರುಗಿತು.

ಪದ್ಮಾ ಕ್ಯಾಷು ಫ್ಯಾಕ್ಟರಿ ಮಾಲಕ ವಿಕಾಸ್ ಜೈನ್ ಕಾರ್ಯಕ್ರಮ ಉದ್ಘಾಟಿಸಿ ಯೋಜನೆಯಿಂದ ಪ್ರತಿ ಮನೆ ಮನೆಯ ಅಭಿವೃದ್ಧಿಯಾಗಿದೆ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ದಂಪತಿಗಳ ಆಶಯವಾಗಿದೆ, ಎಂದು ನೂತನ ಒಕ್ಕೂಟಕ್ಕೆ ಶುಭ ಹಾರೈಸಿದರು.

ಕೇಂದ್ರ ಕಚೇರಿಯ ಮಾನವ ಸಂಪನ್ಮೂಲ ಯೋಜನಾಧಿಕಾರಿ ಶ್ರೀನಿವಾಸ್ ಪಿ. ಮಾತನಾಡಿ ನಂಬಿಕೆಯ ಆಧಾರದಲ್ಲಿ ಬೆಳೆದು ಬಂದಿರುವ ಗ್ರಾಮಾಭಿವೃದ್ಧಿ ಯೋಜನೆಯ ಮೂಲ ಪರಿಕಲ್ಪನೆ ಹಾಗೂ ಜನರ ಜೀವನದಲ್ಲಿ ಆಗಿರುವ ಬದಲಾವಣೆ ಬಗ್ಗೆ ಹಾಗೂ ಧಾರ್ಮಿಕವಾಗಿ ಜನರ ಭಾವನೆಗಳ ಬಗ್ಗೆ ಹೇಳುತ್ತಾ ಹುಟ್ಟು ಹಾಕಿರುವ ಮೂಲದೇಯವನ್ನು ನಾವು ಮರೆಯಬಾರದು ಎಂದು ತಿಳಿಸಿದರು.

ಹೊಸಂಗಡಿ ವಲಯ ಅಧ್ಯಕ್ಷ ಸತೀಶ್ ಮಠ ರವರು ೩೦ ವರ್ಷದ ಹಿಂದಿನ ಜೀವನದ ಪರಿಕಲ್ಪನೆ ಹಾಗೂ ಈಗಿನ ಜೀವನದಲ್ಲಿ ಆಗಿರುವ ಬದಲಾವಣೆಗೆ ಪೂಜ್ಯರೇ ಕಾರಣ ಎಂದು ಹೇಳಿದರು.

ವೇದಿಕೆಯಲ್ಲಿ ತಾಲೂಕು ಜನಜಾಗೃತಿ ಸದಸ್ಯರಾದ ವಿದ್ಯಾನಂದ ಜೈನ್, ವಿಠಲ್ ಸಿ ಪೂಜಾರಿ, ಪೂಜಾ ಸಮಿತಿ ಅಧ್ಯಕ್ಷ ಸೀನ ಶೆಟ್ಟಿ ಕಿರಿಂಬಿ ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬುಳೇರಿಮೊಗ್ರು ಪ್ರೌಢಶಾಲೆಗೆ ಸತತ 4ನೇ ವರ್ಷ ಶೇ.100 ಫಲಿತಾಂಶ

Suddi Udaya

ಚಾರ್ಮಾಡಿ ಗ್ರಾ.ಪಂ. ಮಟ್ಟದ ಸುಸ್ಥಿರ ಅಭಿವೃದ್ಧಿ ಮತ್ತು ಮಕ್ಕಳ ಹಕ್ಕುಗಳ ತರಬೇತಿ ಕಾರ್ಯಕ್ರಮ, ಭಿತ್ತಿಪತ್ರ ಬಿಡುಗಡೆ

Suddi Udaya

ಧರ್ಮಸ್ಥಳ “ರಂಗಶಿವ”ಬಳಗದಿಂದ ಮಕ್ಕಳ ರಂಗ ಶಿಬಿರ “ನಲಿಯೋಣ ಬಾ- 2023”

Suddi Udaya

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya

ರಾಜ್ಯದ ಜನರಿಗೆ ಬೆಲೆ ಏರಿಕೆ ಮೂಲಕ ಬರೆ ಎಳೆದ ಕಾಂಗ್ರೆಸ್ ಸರಕಾರ :ಉಚಿತ ಗ್ಯಾರಂಟಿಯ ಹೊರೆ ಭರಿಸಲಾದೆ ಸರ್ಕಾರ ದಿವಾಳಿ ಅಂಚಿಗೆ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಗೌರವ

Suddi Udaya
error: Content is protected !!