July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಹೊಸಂಗಡಿ: ವಲಯ ಮಟ್ಟದ ಪದಗ್ರಹಣ ಸಮಾರಂಭ

ಹೊಸಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಗುರುವಾಯನಕೆರೆ ವ್ಯಾಪ್ತಿಯ ಹೊಸಂಗಡಿ ವಲಯದ ಬಡಕೋಡಿ ಒಕ್ಕೂಟದ ಆಶ್ರಯದಲ್ಲಿ ಜರಗುವ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟಗಳ ಪದಗ್ರಹಣ ಸಮಾರಂಭ ಪಾಡ್ಯರಬೆಟ್ಟು ಸಂತೃಪ್ತಿ ಸಭಾಭವನದಲ್ಲಿ ಜರುಗಿತು.

ಪದ್ಮಾ ಕ್ಯಾಷು ಫ್ಯಾಕ್ಟರಿ ಮಾಲಕ ವಿಕಾಸ್ ಜೈನ್ ಕಾರ್ಯಕ್ರಮ ಉದ್ಘಾಟಿಸಿ ಯೋಜನೆಯಿಂದ ಪ್ರತಿ ಮನೆ ಮನೆಯ ಅಭಿವೃದ್ಧಿಯಾಗಿದೆ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ದಂಪತಿಗಳ ಆಶಯವಾಗಿದೆ, ಎಂದು ನೂತನ ಒಕ್ಕೂಟಕ್ಕೆ ಶುಭ ಹಾರೈಸಿದರು.

ಕೇಂದ್ರ ಕಚೇರಿಯ ಮಾನವ ಸಂಪನ್ಮೂಲ ಯೋಜನಾಧಿಕಾರಿ ಶ್ರೀನಿವಾಸ್ ಪಿ. ಮಾತನಾಡಿ ನಂಬಿಕೆಯ ಆಧಾರದಲ್ಲಿ ಬೆಳೆದು ಬಂದಿರುವ ಗ್ರಾಮಾಭಿವೃದ್ಧಿ ಯೋಜನೆಯ ಮೂಲ ಪರಿಕಲ್ಪನೆ ಹಾಗೂ ಜನರ ಜೀವನದಲ್ಲಿ ಆಗಿರುವ ಬದಲಾವಣೆ ಬಗ್ಗೆ ಹಾಗೂ ಧಾರ್ಮಿಕವಾಗಿ ಜನರ ಭಾವನೆಗಳ ಬಗ್ಗೆ ಹೇಳುತ್ತಾ ಹುಟ್ಟು ಹಾಕಿರುವ ಮೂಲದೇಯವನ್ನು ನಾವು ಮರೆಯಬಾರದು ಎಂದು ತಿಳಿಸಿದರು.

ಹೊಸಂಗಡಿ ವಲಯ ಅಧ್ಯಕ್ಷ ಸತೀಶ್ ಮಠ ರವರು ೩೦ ವರ್ಷದ ಹಿಂದಿನ ಜೀವನದ ಪರಿಕಲ್ಪನೆ ಹಾಗೂ ಈಗಿನ ಜೀವನದಲ್ಲಿ ಆಗಿರುವ ಬದಲಾವಣೆಗೆ ಪೂಜ್ಯರೇ ಕಾರಣ ಎಂದು ಹೇಳಿದರು.

ವೇದಿಕೆಯಲ್ಲಿ ತಾಲೂಕು ಜನಜಾಗೃತಿ ಸದಸ್ಯರಾದ ವಿದ್ಯಾನಂದ ಜೈನ್, ವಿಠಲ್ ಸಿ ಪೂಜಾರಿ, ಪೂಜಾ ಸಮಿತಿ ಅಧ್ಯಕ್ಷ ಸೀನ ಶೆಟ್ಟಿ ಕಿರಿಂಬಿ ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಐತಿಹಾಸಿಕ ಕಾಜೂರು ಮಖಾಂ ಉರೂಸ್ ಉದ್ಘಾಟನೆ: ಅಲ್ಲಾಹನ‌ ನೋಟ ಹೃದಯಕ್ಕೆ ಮಾತ್ರ; ವೈಎಂಕೆ ಡಾ. ಅಬ್ದುಲ್ಲ ಕುಂಞಿ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತಿನಲ್ಲಿ ನಿವೃತ್ತ ಅಂಚೆ ಪಾಲಕರಾದ ವಿಶ್ವನಾಥ ಪೂಜಾರಿ ಹಾಗೂ ವಿಜಯ ರಾಜ್ ಜೈನ್ ರಿಗೆ ನಾಗರೀಕ ಸನ್ಮಾನ

Suddi Udaya

ಕೊಕ್ಕಡ: ಸರ್ವಿಸ್ ಸ್ಟೇಷನ್ ಮಾಲಕ ಶಾಂತಪ್ಪ ಗೌಡ ಆತ್ಮಹತ್ಯೆ

Suddi Udaya

ಜೆಇಇ ಮೈನ್-2 ಫಲಿತಾಂಶ: ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾರ್ಥಿಗಳ ರಾಷ್ಟ್ರ ಮಟ್ಟದ ರ‍್ಯಾಂಕ್‌ಗಳ ಸಾಧನೆ

Suddi Udaya

ತೀರಾ ಹದಗೆಟ್ಟ ಇಂದಬೆಟ್ಟು ಶ್ರೀ ಅರ್ಧನಾರೀಶ್ವರಿ ದೇವಸ್ಥಾನಕ್ಕೆ ಹೋಗುವ ರಸ್ತೆ: ಗ್ರಾ.ಪಂ. ಮಾಜಿಸದಸ್ಯ, ಸಾಮಾಜಿಕ ಹೋರಾಟಗಾರ ವೆಂಕಪ್ಪ ಕೊಟ್ಯಾನ್ ರಿಂದ ವಿಶಿಷ್ಟವಾಗಿ ಹೋರಾಟ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
error: Content is protected !!