23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಹೊಸಂಗಡಿ: ವಲಯ ಮಟ್ಟದ ಪದಗ್ರಹಣ ಸಮಾರಂಭ

ಹೊಸಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಗುರುವಾಯನಕೆರೆ ವ್ಯಾಪ್ತಿಯ ಹೊಸಂಗಡಿ ವಲಯದ ಬಡಕೋಡಿ ಒಕ್ಕೂಟದ ಆಶ್ರಯದಲ್ಲಿ ಜರಗುವ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟಗಳ ಪದಗ್ರಹಣ ಸಮಾರಂಭ ಪಾಡ್ಯರಬೆಟ್ಟು ಸಂತೃಪ್ತಿ ಸಭಾಭವನದಲ್ಲಿ ಜರುಗಿತು.

ಪದ್ಮಾ ಕ್ಯಾಷು ಫ್ಯಾಕ್ಟರಿ ಮಾಲಕ ವಿಕಾಸ್ ಜೈನ್ ಕಾರ್ಯಕ್ರಮ ಉದ್ಘಾಟಿಸಿ ಯೋಜನೆಯಿಂದ ಪ್ರತಿ ಮನೆ ಮನೆಯ ಅಭಿವೃದ್ಧಿಯಾಗಿದೆ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ದಂಪತಿಗಳ ಆಶಯವಾಗಿದೆ, ಎಂದು ನೂತನ ಒಕ್ಕೂಟಕ್ಕೆ ಶುಭ ಹಾರೈಸಿದರು.

ಕೇಂದ್ರ ಕಚೇರಿಯ ಮಾನವ ಸಂಪನ್ಮೂಲ ಯೋಜನಾಧಿಕಾರಿ ಶ್ರೀನಿವಾಸ್ ಪಿ. ಮಾತನಾಡಿ ನಂಬಿಕೆಯ ಆಧಾರದಲ್ಲಿ ಬೆಳೆದು ಬಂದಿರುವ ಗ್ರಾಮಾಭಿವೃದ್ಧಿ ಯೋಜನೆಯ ಮೂಲ ಪರಿಕಲ್ಪನೆ ಹಾಗೂ ಜನರ ಜೀವನದಲ್ಲಿ ಆಗಿರುವ ಬದಲಾವಣೆ ಬಗ್ಗೆ ಹಾಗೂ ಧಾರ್ಮಿಕವಾಗಿ ಜನರ ಭಾವನೆಗಳ ಬಗ್ಗೆ ಹೇಳುತ್ತಾ ಹುಟ್ಟು ಹಾಕಿರುವ ಮೂಲದೇಯವನ್ನು ನಾವು ಮರೆಯಬಾರದು ಎಂದು ತಿಳಿಸಿದರು.

ಹೊಸಂಗಡಿ ವಲಯ ಅಧ್ಯಕ್ಷ ಸತೀಶ್ ಮಠ ರವರು ೩೦ ವರ್ಷದ ಹಿಂದಿನ ಜೀವನದ ಪರಿಕಲ್ಪನೆ ಹಾಗೂ ಈಗಿನ ಜೀವನದಲ್ಲಿ ಆಗಿರುವ ಬದಲಾವಣೆಗೆ ಪೂಜ್ಯರೇ ಕಾರಣ ಎಂದು ಹೇಳಿದರು.

ವೇದಿಕೆಯಲ್ಲಿ ತಾಲೂಕು ಜನಜಾಗೃತಿ ಸದಸ್ಯರಾದ ವಿದ್ಯಾನಂದ ಜೈನ್, ವಿಠಲ್ ಸಿ ಪೂಜಾರಿ, ಪೂಜಾ ಸಮಿತಿ ಅಧ್ಯಕ್ಷ ಸೀನ ಶೆಟ್ಟಿ ಕಿರಿಂಬಿ ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದ.ಕ. ಪ್ರಥಮ , ಉಡುಪಿ ದ್ವಿತೀಯ ಸ್ಥಾನ

Suddi Udaya

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

Suddi Udaya

ಕುಂಭಶ್ರೀ ಆಂ.ಮಾ. ಶಾಲೆಯ ಸಂಸ್ಥಾಪಕ ಗಿರೀಶ್ ಕೆ ಎಚ್ ರವರಿಂದ ಉಚಿತ ಪುಸ್ತಕ ವಿತರಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya

ಸಿಯೋನ್ ಆಶ್ರಮ: ರಾಷ್ಟ್ರೀಯ ಸೇವಾ ಯೋಜನಾ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕು ಜಿಪಿಟಿ ಶಿಕ್ಷಕರ ಸಂಘದ ವತಿಯಿಂದ ‘ಸ್ನೇಹ ಸಂಗಮ’ ಕಾರ್ಯಕ್ರಮ

Suddi Udaya
error: Content is protected !!