25.4 C
ಪುತ್ತೂರು, ಬೆಳ್ತಂಗಡಿ
May 18, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಡ ನೆಲ್ಲಿಗುಡ್ಡೆ ಅನಾರೋಗ್ಯದಿಂದ ಬಳಲುತ್ತಿರುವ ಶೀನಪ್ಪ ಗೌಡ ಕುಟುಂಬದ ಜೊತೆಗೆ ಹುಟ್ಟುಹಬ್ಬ ಆಚರಿಸಿ ತಾಲೂಕಿಗೆ ಮಾದರಿಯಾದ ನಡ ಪ.ಪೂ. ಕಾಲೇಜು ವಿದ್ಯಾರ್ಥಿ: ಅಕ್ಕಿ, ದವಸಧಾನ್ಯ ವಿತರಣೆ

ನಡ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಹರೀಶ್ ರವರ ಹುಟ್ಟುಹಬ್ಬವನ್ನು ಅತ್ಯಂತ ವಿಶಿಷ್ಟವಾಗಿ ಆಚರಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

ನಡ ಗ್ರಾಮದ ನೆಲ್ಲಿಗುಡ್ಡೆ ಎಂಬಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ, ಮನೆಯ ಆಧಾರಸ್ತಂಭವಾಗಿದ್ದ ಶೀನಪ್ಪ ಗೌಡ ಮತ್ತು ಅವರ ಬುದ್ಧಿಮಾಂದ್ಯ ಮಗಳ ಜೊತೆಗೆ ಜೀವನ ಸಾಗಿಸುತ್ತಿರುವ ಕುಟುಂಬದ ಜೊತೆಗೆ ಹರೀಶ್ ತನ್ನ ಹುಟ್ಟುಹಬ್ಬವನ್ನು ಆಚರಿಸಿದರು. ತನ್ನ ಹುಟ್ಟುಹಬ್ಬದ ಆಚರಣೆಗಾಗಿ ಈ ಕುಟುಂಬಕ್ಕೆ ಅಕ್ಕಿ, ದವಸಧಾನ್ಯಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಗೆಳೆಯರಾದ ದೀಕ್ಷಿತ್, ರಕ್ಷಿತ್, ಜೀತೆಶ್, ಕಿರಣ್. ನಿತಿನ್, ಯತೀಶ್, ಪ್ರಣಿತ್ ಉಪಸ್ಥಿತರಿದ್ದರು. ಈಗಿನ ವಿದ್ಯಾರ್ಥಿ, ಯುವಜನರು ಹುಟ್ಟುಹಬ್ಬವನ್ನು ಮೋಜು, ಮಸ್ತಿನಲ್ಲಿ ಆಚರಣೆ ಮಾಡುವ ಮೂಲಕ ಹಣವನ್ನು ಪೋಲು ಮಾಡುತ್ತಿರುವ ಈ ಸಂದರ್ಭದಲ್ಲಿ ಪಿಯುಸಿ ವಿದ್ಯಾರ್ಥಿಯ ಹುಟ್ಟುಹಬ್ಬ ಆಚರಣೆ ಇತರರಿಗೆ ಮಾದರಿಯಾಗಿದೆ.

Related posts

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆ -ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಹಾಗೂ ತೃತೀಯ ಸ್ಥಾನ

Suddi Udaya

ಶಿರ್ಲಾಲು ನಿವಾಸಿ ತಾರನಾಥ ಪೂಜಾರಿ ನಿಧನ

Suddi Udaya

ಉಜಿರೆ ಹಳೆಪೇಟೆ ಸ.ಪ್ರೌ. ಶಾಲೆಯ ಹಿಂಬದಿಯಲ್ಲಿ ಮಣ್ಣು ಕುಸಿತ: ಶಾಸಕ ಹರೀಶ್ ಪೂಂಜ ಭೇಟಿ: ತಕ್ಷಣವೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ: ಬೆಳ್ತಂಗಡಿ ಮಾಸ್ಟರ್‍ಸ್ ಕೋಚಿಂಗ್ ಕ್ಲಾಸ್ ಶೇ 88.5 ಫಲಿತಾಂಶ

Suddi Udaya

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ : ನಡುಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

Suddi Udaya
error: Content is protected !!