April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

ಮಡಂತ್ಯಾರು: ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮುಖ್ಯ.ಶಿಸ್ತಿನಿಂದ ಸಾಧನೆಗೈಲು ಸಾಧ್ಯ.ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ರೀತಿಯ ಪ್ರತಿಭೆ ಇದ್ದೇ ಇರುತ್ತದೆ, ಜೀವನದಲ್ಲಿ ದೊರೆಯುವ ಸಣ್ಣ ಸಣ್ಣ ಅವಕಾಶಗಳನ್ನು ಬಳಸಿಕೊಂಡಾಗ ಮಹತ್ತರ ಸಾಧನೆಯನ್ನು ಮಾಡಹುದು. ವಿದ್ಯಾರ್ಥಿಗಳು ಕಾಲೇಜಿನಲ್ಲಿರುವ ವಿವಿಧ ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರೆ ಸರ್ವತೋಮುಖ ಅಭಿವೃದ್ಧಿ ಹೊಂದಲು ಸಾಧ್ಯ .ಈ ನಿಟ್ಟಿನಲ್ಲಿ ವಿದ್ಯಾಸಂಸ್ಥೆಗಳು, ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಇರುವ ಪ್ರತಿಭೆಯನ್ನು ಹೊರತರಲು ಪ್ರೇರೇಪಿಸುತ್ತಾರೆ ಎಂದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಕಾಲೇಜಿನ ಆಂಗ್ಲವಿಭಾಗದ ಮುಖ್ಯಸ್ಥ ಲಿಯೋ ನರೋನ್ಹಾ ಹೇಳಿದರು.

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜಿನ ಪ್ರಸ್ತುತ ವರ್ಷದ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಜೊತೆ ಕಾರ್ಯದರ್ಶಿಗಳಾದ ವಂ|ಸ್ಟ್ಯಾನಿ ಗೋವಿಯಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾಲೇಜಿನ ಪ್ರಾಚಾರ್ಯರಾದ ವಂ|ಜೆರೊಮ್ ಡಿಸೋಜಾ ವಿದ್ಯಾರ್ಥಿ ನಾಯಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಹೇಮಲತಾ ಎಂ ಸ್ವಾಗತಿಸಿ, ಉಪನಿರ್ದೇಶಕಿ ಲಾವಣ್ಯ ಆಳ್ವಾ ಕೆ ವಂದಿಸಿ, ವಿದ್ಯಾರ್ಥಿ ನಾಯಕ ಗ್ಲೆನ್ ಪ್ರೀತಂ ರೊಡ್ರಿಗಸ್, ಜೊತೆ ಕಾರ್ಯದರ್ಶಿ ಮೆಲಿಟಾ ಮಿನೇಜಸ್ ಅನಿಸಿಕೆ ಹಂಚಿಕೊಂಡರು.

ವಿದ್ಯಾರ್ಥಿಗಳಾದ ಫಾತಿಮತ್ ಅಝ್ಮಿಯ ಹಾಗೂ ಸಹನಾ ಕಾರ್ಯಕ್ರಮ ನಿರೂಪಿಸಿದರು.

Related posts

ಗೇರುಕಟ್ಟೆ: ಅಂಚೆ ಪತ್ರ ವಿತರಕ ಡಾಕಯ್ಯ ಗೌಡ ಸೇವಾ ನಿವೃತ್ತಿ, ಇಲಾಖೆ ಹಾಗೂ ಸ್ಥಳೀಯರ ವತಿಯಿಂದ ಸನ್ಮಾನ

Suddi Udaya

ನೆರಿಯ: ಸಂಜೀವ ಗೌಡ ನಿಧನ

Suddi Udaya

ಲಾಯಿಲ ಕುಂಟಿನಿಯಿಂದ ನಡ, ಪುತ್ರಬೈಲು ಮೂಲಕ ಬೆಳ್ತಂಗಡಿ ಮತ್ತು ಕಿಲ್ಲೂರಿಗೆ ಸಂಪರ್ಕಿಸುವ ಕಿರಿದಾದ ಮಣ್ಣಿನ ಮತ್ತು ಕಾಂಕ್ರಿಟ್ ರಸ್ತೆ : ಭಾರೀ ಮಳೆಗೆ ರಸ್ತೆಯ ಎರಡು ಬದಿಗಳಲ್ಲಿ ಮಣ್ಣು ಕುಸಿದು ಅಪಾಯವನ್ನು ಆಹ್ವಾನಿಸುವ ಮುನ್ಸೂಚನೆ

Suddi Udaya

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಪದಾಧಿಕಾರಿಗಳ ಆಯ್ಕೆ

Suddi Udaya

ಪ.ರಾ.ಶಾಸ್ತ್ರಿ ಅಭಿನಂದನೆ: ಆಹ್ವಾನ ಪತ್ರಿಕೆ ಅನಾವರಣ

Suddi Udaya

ಬೆಳ್ತಂಗಡಿ, ಪುತ್ತೂರು ಮತ್ತು ಬಂಟ್ವಾಳದ ಹಲವು ಕಡೆ ಎನ್‌ಐಎ ದಾಳಿ

Suddi Udaya
error: Content is protected !!