22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

ಮಡಂತ್ಯಾರು: ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮುಖ್ಯ.ಶಿಸ್ತಿನಿಂದ ಸಾಧನೆಗೈಲು ಸಾಧ್ಯ.ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ರೀತಿಯ ಪ್ರತಿಭೆ ಇದ್ದೇ ಇರುತ್ತದೆ, ಜೀವನದಲ್ಲಿ ದೊರೆಯುವ ಸಣ್ಣ ಸಣ್ಣ ಅವಕಾಶಗಳನ್ನು ಬಳಸಿಕೊಂಡಾಗ ಮಹತ್ತರ ಸಾಧನೆಯನ್ನು ಮಾಡಹುದು. ವಿದ್ಯಾರ್ಥಿಗಳು ಕಾಲೇಜಿನಲ್ಲಿರುವ ವಿವಿಧ ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರೆ ಸರ್ವತೋಮುಖ ಅಭಿವೃದ್ಧಿ ಹೊಂದಲು ಸಾಧ್ಯ .ಈ ನಿಟ್ಟಿನಲ್ಲಿ ವಿದ್ಯಾಸಂಸ್ಥೆಗಳು, ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಇರುವ ಪ್ರತಿಭೆಯನ್ನು ಹೊರತರಲು ಪ್ರೇರೇಪಿಸುತ್ತಾರೆ ಎಂದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಕಾಲೇಜಿನ ಆಂಗ್ಲವಿಭಾಗದ ಮುಖ್ಯಸ್ಥ ಲಿಯೋ ನರೋನ್ಹಾ ಹೇಳಿದರು.

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜಿನ ಪ್ರಸ್ತುತ ವರ್ಷದ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಜೊತೆ ಕಾರ್ಯದರ್ಶಿಗಳಾದ ವಂ|ಸ್ಟ್ಯಾನಿ ಗೋವಿಯಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾಲೇಜಿನ ಪ್ರಾಚಾರ್ಯರಾದ ವಂ|ಜೆರೊಮ್ ಡಿಸೋಜಾ ವಿದ್ಯಾರ್ಥಿ ನಾಯಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಹೇಮಲತಾ ಎಂ ಸ್ವಾಗತಿಸಿ, ಉಪನಿರ್ದೇಶಕಿ ಲಾವಣ್ಯ ಆಳ್ವಾ ಕೆ ವಂದಿಸಿ, ವಿದ್ಯಾರ್ಥಿ ನಾಯಕ ಗ್ಲೆನ್ ಪ್ರೀತಂ ರೊಡ್ರಿಗಸ್, ಜೊತೆ ಕಾರ್ಯದರ್ಶಿ ಮೆಲಿಟಾ ಮಿನೇಜಸ್ ಅನಿಸಿಕೆ ಹಂಚಿಕೊಂಡರು.

ವಿದ್ಯಾರ್ಥಿಗಳಾದ ಫಾತಿಮತ್ ಅಝ್ಮಿಯ ಹಾಗೂ ಸಹನಾ ಕಾರ್ಯಕ್ರಮ ನಿರೂಪಿಸಿದರು.

Related posts

ಜ.27: ಮಡಂತ್ಯಾರು ಗ್ರಾಮ ಪಂಚಾಯತ್ ನಲ್ಲಿ ವಿವಿಧ ರಸ್ತೆ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಪ.ಜಾತಿ / ಪ.ಪಂಗಡ ಮತ್ತು ದಿವ್ಯಾಂಗಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಭೆ

Suddi Udaya

ಎಕ್ಸೆಲ್ ನಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಕಳೆಂಜ: ಶಿಬರಾಜೆಪಾದೆ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ರಬ್ಬರ್ ಟ್ಯಾಪಿಂಗ್ ಕಾರ್ಮಿಕ ಸ್ವತಃ ಮೈಮೇಲೆ ವಿದ್ಯುತ್ ಹರಿಸಿ ಆತ್ಮಹತ್ಯೆ

Suddi Udaya

ಕಣಿಯೂರು ಬಿಜೆಪಿ ಬೂತ್ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಕಾಂಗ್ರೇಸ್ ಸೇರ್ಪಡೆ

Suddi Udaya
error: Content is protected !!