23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸೌತಡ್ಕ: ಸತ್ತ ಕರುವೊಂದನ್ನು ಮೋರಿಗೆ ಎಸೆದ ದುಷ್ಕಾರ್ಮಿಗಳು: ಹಿಂ.ಜಾ. ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಸದಸ್ಯರಿಂದ ಅಂತ್ಯಸಂಸ್ಕಾರ

ಕೊಕ್ಕಡ: ಸತ್ತು ಮೋರಿಯಲ್ಲಿ ಎಸೆದು ಹೋಗಿದ್ದ ಕರುವಿನ ಅಂತ್ಯಸಂಸ್ಕಾರವನ್ನು ಹಿಂದೂ ಜಾಗರಣ ವೇದಿಕೆಯ ಸದಸ್ಯರು ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಸದಸ್ಯರು ಮಾಡಿರುವ ಘಟನೆ ಜು.15ರಂದು ವರದಿಯಾಗಿದೆ.

ಕೊಕ್ಕಡದ ಸೌತಡ್ಕ ಬಳಿ ಅಪರಿಚಿತರು ಸತ್ತ ಕರುವೊಂದನ್ನು ಮೋರಿಗೆ ಎಸೆದು ಹೋಗಿದ್ದು ಈ ಬಗ್ಗೆ ಮಾಹಿತಿ ಪಡೆದ ಕೊಕ್ಕಡ ಪಿಡಿಓ ಅವರು ಕರುವಿನ ಅಂತ್ಯ ಸಂಸ್ಕಾರ ಮಾಡುವ ಉದ್ದೇಶದಿಂದ ಕೊಕ್ಕಡದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರಿಗೆ ಮಾಹಿತಿಯನ್ನು ನೀಡಿದ್ದಾರೆ. ತಕ್ಷಣ ಸ್ಪಂದಿಸಿದ ಸಂಘಟನೆಯ ಕಾರ್ಯಕರ್ತರು ಸತ್ತ ಕರುವನ್ನು ಮೋರಿಯಿಂದ ಹೊರತೆಗೆದು ಅಲ್ಲೇ ಸಮೀಪ ಅಂತ್ಯಸಂಸ್ಕಾರ ಮಾಡಿದರು.

ಮೋರಿಯ ಸಮೀಪ ಗಾಡಿಯೊಂದು ನಿಂತ ಕುರುಹುಗಳು ಕಂಡುಬಂದಿದ್ದು, ಸಮೀಪದಲ್ಲೇ ಅಕ್ರಮ ಕಸಾಯಿಖಾನೆ ಕಾರ್ಯನಿರ್ವಹಿಸುತ್ತಿರುವ ಗುಮಾನಿ ಯಿದ್ದು, ಯಾರೋ ಕಿಡಿಗೇಡಿಗಳು ಕಸಾಯಿಖಾನೆಗೆ ತಂದ ಕರು ದಾರಿಮಧ್ಯೆ ಸತ್ತಿರುವ ಕಾರಣ ಎಸೆದು ಹೋಗಿರಬಹುದು ಎಂಬ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಂಬಂಧಪಟ್ಟವರು ಗಮನ ಹರಿಸಿ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

Related posts

ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ರವರಿಗೆ ಮಂತ್ರಾಲಯಂ ಪರಿಮಳ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ: ತುಳುನಾಡ್ ಒಕ್ಕೂಟ ಸಂಘಟನೆಯ ಯುವ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪಟ್ರಮೆ: ಅನಾರು ಶಾಲೆ ಬಳಿ ಚರಂಡಿಗೆ ಬಿದ್ದ ಕೋಳಿ ಸಾಗಾಟದ ಲಾರಿ

Suddi Udaya

ಫೆ.6: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಕಿವಿ-ಮೂಗು-ಗಂಟಲು ತಪಾಸಣಾ ಶಿಬಿರ

Suddi Udaya

ಕೆಸಿಎಫ್ ಶಾರ್ಜಾ ಝೋನ್ 2024-2026 ನವ ಸಾರಥ್ಯ ಅಧ್ಯಕ್ಷರಾಗಿ ರಫೀಕ್ ತೆಕ್ಕಾರು

Suddi Udaya

ವಿ‌ ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್” ಪ್ರದಾನ

Suddi Udaya
error: Content is protected !!