September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸೌತಡ್ಕ: ಸತ್ತ ಕರುವೊಂದನ್ನು ಮೋರಿಗೆ ಎಸೆದ ದುಷ್ಕಾರ್ಮಿಗಳು: ಹಿಂ.ಜಾ. ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಸದಸ್ಯರಿಂದ ಅಂತ್ಯಸಂಸ್ಕಾರ

ಕೊಕ್ಕಡ: ಸತ್ತು ಮೋರಿಯಲ್ಲಿ ಎಸೆದು ಹೋಗಿದ್ದ ಕರುವಿನ ಅಂತ್ಯಸಂಸ್ಕಾರವನ್ನು ಹಿಂದೂ ಜಾಗರಣ ವೇದಿಕೆಯ ಸದಸ್ಯರು ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಸದಸ್ಯರು ಮಾಡಿರುವ ಘಟನೆ ಜು.15ರಂದು ವರದಿಯಾಗಿದೆ.

ಕೊಕ್ಕಡದ ಸೌತಡ್ಕ ಬಳಿ ಅಪರಿಚಿತರು ಸತ್ತ ಕರುವೊಂದನ್ನು ಮೋರಿಗೆ ಎಸೆದು ಹೋಗಿದ್ದು ಈ ಬಗ್ಗೆ ಮಾಹಿತಿ ಪಡೆದ ಕೊಕ್ಕಡ ಪಿಡಿಓ ಅವರು ಕರುವಿನ ಅಂತ್ಯ ಸಂಸ್ಕಾರ ಮಾಡುವ ಉದ್ದೇಶದಿಂದ ಕೊಕ್ಕಡದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರಿಗೆ ಮಾಹಿತಿಯನ್ನು ನೀಡಿದ್ದಾರೆ. ತಕ್ಷಣ ಸ್ಪಂದಿಸಿದ ಸಂಘಟನೆಯ ಕಾರ್ಯಕರ್ತರು ಸತ್ತ ಕರುವನ್ನು ಮೋರಿಯಿಂದ ಹೊರತೆಗೆದು ಅಲ್ಲೇ ಸಮೀಪ ಅಂತ್ಯಸಂಸ್ಕಾರ ಮಾಡಿದರು.

ಮೋರಿಯ ಸಮೀಪ ಗಾಡಿಯೊಂದು ನಿಂತ ಕುರುಹುಗಳು ಕಂಡುಬಂದಿದ್ದು, ಸಮೀಪದಲ್ಲೇ ಅಕ್ರಮ ಕಸಾಯಿಖಾನೆ ಕಾರ್ಯನಿರ್ವಹಿಸುತ್ತಿರುವ ಗುಮಾನಿ ಯಿದ್ದು, ಯಾರೋ ಕಿಡಿಗೇಡಿಗಳು ಕಸಾಯಿಖಾನೆಗೆ ತಂದ ಕರು ದಾರಿಮಧ್ಯೆ ಸತ್ತಿರುವ ಕಾರಣ ಎಸೆದು ಹೋಗಿರಬಹುದು ಎಂಬ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಂಬಂಧಪಟ್ಟವರು ಗಮನ ಹರಿಸಿ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

Related posts

ಕಾಯರ್ತಡ್ಕದಲ್ಲಿ ಮಾರಕಾಯುಧದಿಂದ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಬ್ರಿಜೇಶ್ ಚೌಟ : ಗಂಭೀರ ಗಾಯಗೊಂಡ ರಾಜೇಶ್ ರವರ ಆರೋಗ್ಯ ವಿಚಾರಣೆ

Suddi Udaya

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿಯ ಮಹಾಸಂಗಮ ಕಾರ್ಯಕ್ರಮ

Suddi Udaya

ಶಿಲ್ಪಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿಗೆ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ಆಯ್ಕೆ

Suddi Udaya

ಬಂಗಾಡಿ ಸಹಸ್ರ ನಾಗಬನದಲ್ಲಿ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವರು ಮತ್ತು ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಹತ್ಯಡ್ಕ ವಿಠೋಬಾ ರುಕುಮಾಯಿ ದೇಗುಲಕ್ಕೆ ದೇಣಿಗೆ

Suddi Udaya
error: Content is protected !!