23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸೌತಡ್ಕ: ಸತ್ತ ಕರುವೊಂದನ್ನು ಮೋರಿಗೆ ಎಸೆದ ದುಷ್ಕಾರ್ಮಿಗಳು: ಹಿಂ.ಜಾ. ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಸದಸ್ಯರಿಂದ ಅಂತ್ಯಸಂಸ್ಕಾರ

ಕೊಕ್ಕಡ: ಸತ್ತು ಮೋರಿಯಲ್ಲಿ ಎಸೆದು ಹೋಗಿದ್ದ ಕರುವಿನ ಅಂತ್ಯಸಂಸ್ಕಾರವನ್ನು ಹಿಂದೂ ಜಾಗರಣ ವೇದಿಕೆಯ ಸದಸ್ಯರು ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಸದಸ್ಯರು ಮಾಡಿರುವ ಘಟನೆ ಜು.15ರಂದು ವರದಿಯಾಗಿದೆ.

ಕೊಕ್ಕಡದ ಸೌತಡ್ಕ ಬಳಿ ಅಪರಿಚಿತರು ಸತ್ತ ಕರುವೊಂದನ್ನು ಮೋರಿಗೆ ಎಸೆದು ಹೋಗಿದ್ದು ಈ ಬಗ್ಗೆ ಮಾಹಿತಿ ಪಡೆದ ಕೊಕ್ಕಡ ಪಿಡಿಓ ಅವರು ಕರುವಿನ ಅಂತ್ಯ ಸಂಸ್ಕಾರ ಮಾಡುವ ಉದ್ದೇಶದಿಂದ ಕೊಕ್ಕಡದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರಿಗೆ ಮಾಹಿತಿಯನ್ನು ನೀಡಿದ್ದಾರೆ. ತಕ್ಷಣ ಸ್ಪಂದಿಸಿದ ಸಂಘಟನೆಯ ಕಾರ್ಯಕರ್ತರು ಸತ್ತ ಕರುವನ್ನು ಮೋರಿಯಿಂದ ಹೊರತೆಗೆದು ಅಲ್ಲೇ ಸಮೀಪ ಅಂತ್ಯಸಂಸ್ಕಾರ ಮಾಡಿದರು.

ಮೋರಿಯ ಸಮೀಪ ಗಾಡಿಯೊಂದು ನಿಂತ ಕುರುಹುಗಳು ಕಂಡುಬಂದಿದ್ದು, ಸಮೀಪದಲ್ಲೇ ಅಕ್ರಮ ಕಸಾಯಿಖಾನೆ ಕಾರ್ಯನಿರ್ವಹಿಸುತ್ತಿರುವ ಗುಮಾನಿ ಯಿದ್ದು, ಯಾರೋ ಕಿಡಿಗೇಡಿಗಳು ಕಸಾಯಿಖಾನೆಗೆ ತಂದ ಕರು ದಾರಿಮಧ್ಯೆ ಸತ್ತಿರುವ ಕಾರಣ ಎಸೆದು ಹೋಗಿರಬಹುದು ಎಂಬ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಂಬಂಧಪಟ್ಟವರು ಗಮನ ಹರಿಸಿ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

Related posts

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾಗಣೇಶ ಸಭಾಭವನದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಿನ್ನಿಗೋಳಿಯ ಐತಿಹಾಸಿಕ ಜಯದ ರೂವಾರಿ ಮಡಂತ್ಯಾರಿನ ಜೋಯೇಲ್ ಮೆಂಡೋನ್ಸಾ

Suddi Udaya

ಗುಂಡೂರಿ ಸತ್ಯನಾರಾಯಣ ಪೂಜಾ ಭಜನಾ ಮಂದಿರದ ಅರ್ಚಕ ಸಿ‌.ಕೃಷ್ಣ ಭಟ್ ನಿಧನ

Suddi Udaya

ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಧರೆಗುರುಳಿದ 33 ಕೆವಿ ವಿದ್ಯುತ್ ಟವರ್ ದೊಂಡೋಲೆ ಪವರ್ ಪ್ರಾಜೆಕ್ಟ್ ನವರಿಗೆ ಸೇರಿದ ಕಾರು – ಬೈಕ್ ಜಖಂ: ಕಾರಿನೊಳಗೆ ಇದ್ದ ‌ಪವರ್ ಪ್ರಾಜೆಕ್ಟ್ ನ ಸಿಬ್ಬಂದಿ ಗಣೇಶ್ ಅಪಾಯದಿಂದ ಪಾರು

Suddi Udaya

ಕಲಾ ಸಿಂಚನ- 2025 ಜಾನಪದ ನೃತ್ಯ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರಿಗೆ ದ್ವಿತೀಯ ಸ್ಥಾನ.

Suddi Udaya

ಮೂಡುಬಿದಿರೆ ಎಕ್ಸಲೆಂಟ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!