23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸೌತಡ್ಕ: ಸತ್ತ ಕರುವೊಂದನ್ನು ಮೋರಿಗೆ ಎಸೆದ ದುಷ್ಕಾರ್ಮಿಗಳು: ಹಿಂ.ಜಾ. ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಸದಸ್ಯರಿಂದ ಅಂತ್ಯಸಂಸ್ಕಾರ

ಕೊಕ್ಕಡ: ಸತ್ತು ಮೋರಿಯಲ್ಲಿ ಎಸೆದು ಹೋಗಿದ್ದ ಕರುವಿನ ಅಂತ್ಯಸಂಸ್ಕಾರವನ್ನು ಹಿಂದೂ ಜಾಗರಣ ವೇದಿಕೆಯ ಸದಸ್ಯರು ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಸದಸ್ಯರು ಮಾಡಿರುವ ಘಟನೆ ಜು.15ರಂದು ವರದಿಯಾಗಿದೆ.

ಕೊಕ್ಕಡದ ಸೌತಡ್ಕ ಬಳಿ ಅಪರಿಚಿತರು ಸತ್ತ ಕರುವೊಂದನ್ನು ಮೋರಿಗೆ ಎಸೆದು ಹೋಗಿದ್ದು ಈ ಬಗ್ಗೆ ಮಾಹಿತಿ ಪಡೆದ ಕೊಕ್ಕಡ ಪಿಡಿಓ ಅವರು ಕರುವಿನ ಅಂತ್ಯ ಸಂಸ್ಕಾರ ಮಾಡುವ ಉದ್ದೇಶದಿಂದ ಕೊಕ್ಕಡದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರಿಗೆ ಮಾಹಿತಿಯನ್ನು ನೀಡಿದ್ದಾರೆ. ತಕ್ಷಣ ಸ್ಪಂದಿಸಿದ ಸಂಘಟನೆಯ ಕಾರ್ಯಕರ್ತರು ಸತ್ತ ಕರುವನ್ನು ಮೋರಿಯಿಂದ ಹೊರತೆಗೆದು ಅಲ್ಲೇ ಸಮೀಪ ಅಂತ್ಯಸಂಸ್ಕಾರ ಮಾಡಿದರು.

ಮೋರಿಯ ಸಮೀಪ ಗಾಡಿಯೊಂದು ನಿಂತ ಕುರುಹುಗಳು ಕಂಡುಬಂದಿದ್ದು, ಸಮೀಪದಲ್ಲೇ ಅಕ್ರಮ ಕಸಾಯಿಖಾನೆ ಕಾರ್ಯನಿರ್ವಹಿಸುತ್ತಿರುವ ಗುಮಾನಿ ಯಿದ್ದು, ಯಾರೋ ಕಿಡಿಗೇಡಿಗಳು ಕಸಾಯಿಖಾನೆಗೆ ತಂದ ಕರು ದಾರಿಮಧ್ಯೆ ಸತ್ತಿರುವ ಕಾರಣ ಎಸೆದು ಹೋಗಿರಬಹುದು ಎಂಬ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಂಬಂಧಪಟ್ಟವರು ಗಮನ ಹರಿಸಿ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

Related posts

ನಾಳೆ (ಎ.30) ನಾರಾವಿ ಉಪ ವಲಯಾರಣ್ಯಾಧಿಕಾರಿ ಕುಶಾಲಪ್ಪ ಗೌಡರವರಿಗೆ ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ ಜಮೀಯ್ಯತುಲ್ ಫಲಾಹ್ ಘಟಕದ ಪದಗ್ರಹಣ ಸಮಾರಂಭ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಎಸ್.ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಠಲ ಕೊಕ್ಕಡ ಆಯ್ಕೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದದಲ್ಲಿ ಜುಬಿಲಿ ವರ್ಷ ಉದ್ಘಾಟನೆ

Suddi Udaya

ನಾಳೆ (ಎ.9) ವಿದ್ಯುತ್ ನಿಲುಗಡೆ

Suddi Udaya

ಸಾವ್ಯ: ನೂಜಿಲೋಡಿಯಲ್ಲಿ ಮನೆಗೆ ನುಗ್ಗಿದ್ದ ಕಳ್ಳರು: ರೂ.2.15ಲಕ್ಷ ಮೌಲ್ಯದ ಸೊತ್ತುಗಳ ಕಳವು

Suddi Udaya
error: Content is protected !!