38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕುತ್ಲೂರು ಅಂಗನವಾಡಿ ಕೇಂದ್ರಕ್ಕೆ ಟಿ.ವಿ. ಮತ್ತು ಇಂಟರ್ನೆಟ್ ಕೊಡುಗೆ

ಕುತ್ಲೂರು: ಗ್ರಾಮೀಣ ಭಾಗದ ಅಂಗನವಾಡಿ ಮಕ್ಕಳಿಗೆ ನಗರ ಪ್ರದೇಶಗಳ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳ ಮೂಲಕ ನೀಡುವ ವಿದ್ಯಾಭ್ಯಾಸದ ರೀತಿಯಲ್ಲಿ ಮಾಹಿತಿಗಳನ್ನು ನೀಡುವ ದೃಷ್ಟಿಯಿಂದ ಊರಿನ ದಾನಿಗಳಾದ ಶ್ರೀಮತಿ ರಶ್ಮಿ ಹೆಗ್ಡೆ ಮತ್ತು ಪ್ರಶಾಂತ್ ಹೆಗ್ಡೆ ದಂಪತಿಗಳು ಟಿವಿ ಮತ್ತು ಇಂಟರ್ನೆಟನ್ನು ಕೊಡುಗೆಯಾಗಿ ನೀಡಿದರು.

ಇದರ ಸದುಪಯೋಗವನ್ನು ಹಳ್ಳಿ ಪ್ರದೇಶವಾಗಿರುವ ಕೂತ್ಲೂರು ಅಂಗನವಾಡಿಯ ಮಕ್ಕಳು ಪಡೆಯಲಿದ್ದಾರೆ. ಇಂಟರ್ನೆಟ್‌ಗೆ ಬೇಕಾಗಿರುವ ಒಂದು ವರ್ಷದ ರೀಚಾರ್ಜ್ ಮೊತ್ತವನ್ನು ಕುತ್ಲೂರು ಶಾಲಾ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಮಾಡಿದರು. ಅತ್ಯಾಧುನಿಕ ತಂತ್ರಜ್ಞಾನಗಳ ಮೂಲಕ ನೀಡುವ ಮಾಹಿತಿಯಿಂದ ಸಣ್ಣ ಮಕ್ಕಳಲ್ಲಿ ಕಲಿಯುವಿಕೆಯ ಆಸಕ್ತಿ ಹೆಚ್ಚಿಸಲಿದ್ದು, ಹೆತ್ತವರಲ್ಲಿ ಇವರ ಈ ಕೊಡುಗೆಯು ಸಂತೋಷವನ್ನು ತಂದಿದೆ ಮತ್ತು ಗ್ರಾಮಸ್ಥರು ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ.

Related posts

ಪ್ರತಿಷ್ಟಿತ ಎಳ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೌತಡ್ಕ ದೇವಾಲಯಗಳಲ್ಲಿ ಕಾನೂನು ಬಾಹಿರವಾಗಿ ಮತ್ತು ಭಕ್ತಾದಿಗಳ ನಂಬಿಕೆಗೆ ವಿರುದ್ಧವಾಗಿ ನಡೆಸಿರುವ ಅವ್ಯವಹಾರದ ಕುರಿತು ಪ್ರಶಾಂತ್ ಪೂವಾಜೆ ಯವರಿಂದ ಪತ್ರಿಕಾಗೋಷ್ಠಿ

Suddi Udaya

ಚೆನ್ನೆಮಣೆ ಗೊಬ್ಬು ಪಂಥೊ ಮತ್ತು ಸಂಧಿ ಪಾರ್ದನ ಸುಗಿಪ್ಪು ಪಂಥೊದ ಸಮಾರೋಪ ಸಮಾರಂಭ

Suddi Udaya

ಮದ್ದಡ್ಕ : ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಕಾರು 

Suddi Udaya

ಉಜಿರೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಆ.1: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5000 ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya
error: Content is protected !!