25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕುತ್ಲೂರು ಅಂಗನವಾಡಿ ಕೇಂದ್ರಕ್ಕೆ ಟಿ.ವಿ. ಮತ್ತು ಇಂಟರ್ನೆಟ್ ಕೊಡುಗೆ

ಕುತ್ಲೂರು: ಗ್ರಾಮೀಣ ಭಾಗದ ಅಂಗನವಾಡಿ ಮಕ್ಕಳಿಗೆ ನಗರ ಪ್ರದೇಶಗಳ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳ ಮೂಲಕ ನೀಡುವ ವಿದ್ಯಾಭ್ಯಾಸದ ರೀತಿಯಲ್ಲಿ ಮಾಹಿತಿಗಳನ್ನು ನೀಡುವ ದೃಷ್ಟಿಯಿಂದ ಊರಿನ ದಾನಿಗಳಾದ ಶ್ರೀಮತಿ ರಶ್ಮಿ ಹೆಗ್ಡೆ ಮತ್ತು ಪ್ರಶಾಂತ್ ಹೆಗ್ಡೆ ದಂಪತಿಗಳು ಟಿವಿ ಮತ್ತು ಇಂಟರ್ನೆಟನ್ನು ಕೊಡುಗೆಯಾಗಿ ನೀಡಿದರು.

ಇದರ ಸದುಪಯೋಗವನ್ನು ಹಳ್ಳಿ ಪ್ರದೇಶವಾಗಿರುವ ಕೂತ್ಲೂರು ಅಂಗನವಾಡಿಯ ಮಕ್ಕಳು ಪಡೆಯಲಿದ್ದಾರೆ. ಇಂಟರ್ನೆಟ್‌ಗೆ ಬೇಕಾಗಿರುವ ಒಂದು ವರ್ಷದ ರೀಚಾರ್ಜ್ ಮೊತ್ತವನ್ನು ಕುತ್ಲೂರು ಶಾಲಾ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಮಾಡಿದರು. ಅತ್ಯಾಧುನಿಕ ತಂತ್ರಜ್ಞಾನಗಳ ಮೂಲಕ ನೀಡುವ ಮಾಹಿತಿಯಿಂದ ಸಣ್ಣ ಮಕ್ಕಳಲ್ಲಿ ಕಲಿಯುವಿಕೆಯ ಆಸಕ್ತಿ ಹೆಚ್ಚಿಸಲಿದ್ದು, ಹೆತ್ತವರಲ್ಲಿ ಇವರ ಈ ಕೊಡುಗೆಯು ಸಂತೋಷವನ್ನು ತಂದಿದೆ ಮತ್ತು ಗ್ರಾಮಸ್ಥರು ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ.

Related posts

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಚಪ್ಪರ ಮೂಹೂರ್ತ

Suddi Udaya

ಫೆ.17 ಬಳಂಜದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಕಬಡ್ಡಿ ಪಂದ್ಯಾಟ: ಪ್ರಗತಿಪರ ಕೃಷಿಕ ತಿಮ್ಮಪ್ಪ ಪೂಜಾರಿಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚೆಸ್ ಪಂದ್ಯಾಟ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಲಕ್ಮೀಶ ಭಟ್ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ವಿವಿಧ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗಳ ಖುಲಾಸೆ

Suddi Udaya

ಮಾ.22: ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya
error: Content is protected !!