September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕುತ್ಲೂರು ಅಂಗನವಾಡಿ ಕೇಂದ್ರಕ್ಕೆ ಟಿ.ವಿ. ಮತ್ತು ಇಂಟರ್ನೆಟ್ ಕೊಡುಗೆ

ಕುತ್ಲೂರು: ಗ್ರಾಮೀಣ ಭಾಗದ ಅಂಗನವಾಡಿ ಮಕ್ಕಳಿಗೆ ನಗರ ಪ್ರದೇಶಗಳ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳ ಮೂಲಕ ನೀಡುವ ವಿದ್ಯಾಭ್ಯಾಸದ ರೀತಿಯಲ್ಲಿ ಮಾಹಿತಿಗಳನ್ನು ನೀಡುವ ದೃಷ್ಟಿಯಿಂದ ಊರಿನ ದಾನಿಗಳಾದ ಶ್ರೀಮತಿ ರಶ್ಮಿ ಹೆಗ್ಡೆ ಮತ್ತು ಪ್ರಶಾಂತ್ ಹೆಗ್ಡೆ ದಂಪತಿಗಳು ಟಿವಿ ಮತ್ತು ಇಂಟರ್ನೆಟನ್ನು ಕೊಡುಗೆಯಾಗಿ ನೀಡಿದರು.

ಇದರ ಸದುಪಯೋಗವನ್ನು ಹಳ್ಳಿ ಪ್ರದೇಶವಾಗಿರುವ ಕೂತ್ಲೂರು ಅಂಗನವಾಡಿಯ ಮಕ್ಕಳು ಪಡೆಯಲಿದ್ದಾರೆ. ಇಂಟರ್ನೆಟ್‌ಗೆ ಬೇಕಾಗಿರುವ ಒಂದು ವರ್ಷದ ರೀಚಾರ್ಜ್ ಮೊತ್ತವನ್ನು ಕುತ್ಲೂರು ಶಾಲಾ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಮಾಡಿದರು. ಅತ್ಯಾಧುನಿಕ ತಂತ್ರಜ್ಞಾನಗಳ ಮೂಲಕ ನೀಡುವ ಮಾಹಿತಿಯಿಂದ ಸಣ್ಣ ಮಕ್ಕಳಲ್ಲಿ ಕಲಿಯುವಿಕೆಯ ಆಸಕ್ತಿ ಹೆಚ್ಚಿಸಲಿದ್ದು, ಹೆತ್ತವರಲ್ಲಿ ಇವರ ಈ ಕೊಡುಗೆಯು ಸಂತೋಷವನ್ನು ತಂದಿದೆ ಮತ್ತು ಗ್ರಾಮಸ್ಥರು ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ.

Related posts

ಕಲ್ಮಂಜ ಶ್ರೀ ಸತ್ಯನಾರಾಯಣ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಇಂದಬೆಟ್ಟು ಸ.ಹಿ.ಪ್ರಾ. ಶಾಲೆಗೆ ಹಲವಾರು ಪ್ರಶಸ್ತಿ

Suddi Udaya

ಉರುವಾಲುನಲ್ಲಿ ಗುಡ್ಡ ಕುಸಿತ : ಮನೆ ಹಾಗೂ ಕೃಷಿಗೆ ಹಾನಿ

Suddi Udaya

ಕಾಯರ್ತಡ್ಕ ಸ.ಕಿ.ಪ್ರಾ. ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ.ಬಿ ಆಯ್ಕೆ

Suddi Udaya

ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಬರೆದ ‘ತ್ಯಾಗಮಯಿ ಮೊಳಹಳ್ಳಿ’ ಕೃತಿ ಬಿಡುಗಡೆ

Suddi Udaya
error: Content is protected !!