22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕುತ್ಲೂರು ಅಂಗನವಾಡಿ ಕೇಂದ್ರಕ್ಕೆ ಟಿ.ವಿ. ಮತ್ತು ಇಂಟರ್ನೆಟ್ ಕೊಡುಗೆ

ಕುತ್ಲೂರು: ಗ್ರಾಮೀಣ ಭಾಗದ ಅಂಗನವಾಡಿ ಮಕ್ಕಳಿಗೆ ನಗರ ಪ್ರದೇಶಗಳ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳ ಮೂಲಕ ನೀಡುವ ವಿದ್ಯಾಭ್ಯಾಸದ ರೀತಿಯಲ್ಲಿ ಮಾಹಿತಿಗಳನ್ನು ನೀಡುವ ದೃಷ್ಟಿಯಿಂದ ಊರಿನ ದಾನಿಗಳಾದ ಶ್ರೀಮತಿ ರಶ್ಮಿ ಹೆಗ್ಡೆ ಮತ್ತು ಪ್ರಶಾಂತ್ ಹೆಗ್ಡೆ ದಂಪತಿಗಳು ಟಿವಿ ಮತ್ತು ಇಂಟರ್ನೆಟನ್ನು ಕೊಡುಗೆಯಾಗಿ ನೀಡಿದರು.

ಇದರ ಸದುಪಯೋಗವನ್ನು ಹಳ್ಳಿ ಪ್ರದೇಶವಾಗಿರುವ ಕೂತ್ಲೂರು ಅಂಗನವಾಡಿಯ ಮಕ್ಕಳು ಪಡೆಯಲಿದ್ದಾರೆ. ಇಂಟರ್ನೆಟ್‌ಗೆ ಬೇಕಾಗಿರುವ ಒಂದು ವರ್ಷದ ರೀಚಾರ್ಜ್ ಮೊತ್ತವನ್ನು ಕುತ್ಲೂರು ಶಾಲಾ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಮಾಡಿದರು. ಅತ್ಯಾಧುನಿಕ ತಂತ್ರಜ್ಞಾನಗಳ ಮೂಲಕ ನೀಡುವ ಮಾಹಿತಿಯಿಂದ ಸಣ್ಣ ಮಕ್ಕಳಲ್ಲಿ ಕಲಿಯುವಿಕೆಯ ಆಸಕ್ತಿ ಹೆಚ್ಚಿಸಲಿದ್ದು, ಹೆತ್ತವರಲ್ಲಿ ಇವರ ಈ ಕೊಡುಗೆಯು ಸಂತೋಷವನ್ನು ತಂದಿದೆ ಮತ್ತು ಗ್ರಾಮಸ್ಥರು ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ.

Related posts

ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಮನೆ ನಿರ್ಮಾಣ

Suddi Udaya

ಮೇ 15: ವಿದ್ಯುತ್ ನಿಲುಗಡೆ

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಧ್ವಜಸ್ತಂಭದ ವೃಕ್ಷ ಮುಹೂರ್ತ

Suddi Udaya

ಕಲ್ಮಂಜ : ಗುರಿಪಳ್ಳ ನಿವಾಸಿ ಮೇಸ್ತ್ರಿ ನಾರಾಯಣ ಮೂಲ್ಯ ನಿಧನ

Suddi Udaya

ಕಲ್ಮಂಜ : ಕೃಷಿಕ ದೇಜಪ್ಪ ಗೌಡ ನಿಧನ

Suddi Udaya

ಮುಂಡಾಜೆ ಪ್ರಾ.ಕೃ.ಪ. ಸ. ಸಂಘದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರ 145ನೇ ಜನ್ಮದಿನ ಆಚರಣೆ

Suddi Udaya
error: Content is protected !!