22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಮಲ್ಲಿಕಾ ಕಾಶಿನಾಥ್ ಹೆಗ್ಡೆ ಉಪಾಧ್ಯಕ್ಷರಾಗಿ ಉಮೇಶ್ ಎನ್.

ವೇಣೂರು: ವೇಣೂರು ಗ್ರಾಮ ಪಂಚಾಯತ್‌ನ 2ನೇ ಅವಧಿಗೆ ಅಧ್ಯಕ್ಷರಾಗಿ ಮಲ್ಲಿಕಾ ಕಾಶಿನಾಥ್ ಹೆಗ್ಡೆ ಮತ್ತು ಉಪಾಧ್ಯಕ್ಷರಾಗಿ ಉಮೇಶ್ ಎನ್. ಆಯ್ಕೆಯಾದರು.

ವೇಣೂರು ಪಂಚಾಯತ್‌ನ ಅಧ್ಯಕ್ಷ ಉಪಾಧ್ಯಕ್ಷ ಮೊದಲ ಅವಧಿ ಕೊನೆಗೊಂಡಿದ್ದು 2ನೇ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷರು ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮೀಸಲಾತಿಯಾಗಿದ್ದು, ಎಲ್ಲಾ 24 ಸದಸ್ಯರು ಭಾರತೀಯ ಜನತಾ ಪಾರ್ಟಿ ಬೆಂಬಲಿತರಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ೪ ಸದಸ್ಯರುಗಳಾದ ವೀಣಾ ದೇವಾಡಿಗ, ಲೀಲಾವತಿ ಬಜಿರೆ, ಶಂಭಾಷಿಣಿ ಮತ್ತು ಮಲ್ಲಿಕಾ ಕಾಶಿನಾಥ್ ಹೆಗ್ಡೆ ಆಕಾಂಕ್ಷಿಗಳಾಗಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಮಾಜಿ ಅಧ್ಯಕ್ಷ ಲೋಕಯ್ಯ ಪೂಜಾರಿ ಮತ್ತು ಉಮೇಶ್ ಎನ್. ಆಕಾಂಕ್ಷಿಗಳಾಗಿದ್ದು, ಪಕ್ಷದ ಆಂತರಿಕ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮಲ್ಲಿಕಾ ಕಾಶಿನಾಥ್ ಹೆಗ್ಡೆ ಮತ್ತು ಉಪಾಧ್ಯಕ್ಷರಾಗಿ ಉಮೇಶ್ ಎನ್. ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಬೆಳ್ತಂಗಡಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್ ಪ್ರಕ್ರಿಯೆ ನಡೆಸಿದರು. ಆಡಳಿತಾಧಿಕಾರಿ ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರವಿ ಕುಮಾರ್, ತಾಲೂಕು ಪಂಚಾಯತ್ ಲೆಕ್ಕ ಸಹಾಯಕ ಗಣೇಶ್ ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್, ನಿಕಟ ಪೂರ್ವ ಅಧ್ಯಕ್ಷ ನೇಮಯ್ಯ ಕುಲಾಲ್, ನಿಕಟ ಪೂರ್ವ ಉಪಾಧ್ಯಕ್ಷೆ ಪುಷ್ಪಾ ಡಿ. ಪಂಚಾಯತ್ ಸದಸ್ಯರು ಹಾಜರಿದ್ದರು. ಸದಸ್ಯ ಸುಂದರ ಹೆಗ್ಡೆ ಕೃತಜ್ಞತೆ ಸಲ್ಲಿಸಿದರು.

ಪಕ್ಷದ ವತಿಯಿಂದ ನೂತನ ಅಧ್ಯಕ್ಷರನ್ನು ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಲಾಯಿತು.

Related posts

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಟ್ಟದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ನಾವೂರು ಬಡೆಕ್ಕಾವು ಗುತ್ತುವಿನಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ವಿದ್ಯಾರ್ಥಿ ವೇತನ ಮತ್ತು ಪುಸ್ತಕ ವಿತರಣೆ

Suddi Udaya

ನಿದ್ದೆ ಮಾತ್ರೆ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಕಲಾವಿದ ಮುಂಡಾಜೆಯ ಜಯರಾಂ ಕೆ. ಮೃತ್ಯು

Suddi Udaya

ಜೆಡಿಎಸ್ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ರವರಿಂದ ರೋಡ್ ಶೋ: ಗಣ್ಯರ ಭೇಟಿ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಮನಶ್ರೀ ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಅಭಿನಂದನೆ

Suddi Udaya

ಕುಂದಾಪುರ ಜೆಸಿಯ ಆತಿಥ್ಯದಲ್ಲಿ ನಡೆದ ಲಾಟ್ಸ್ ನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಪ್ರಶಸ್ತಿ

Suddi Udaya
error: Content is protected !!