25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಮಲ್ಲಿಕಾ ಕಾಶಿನಾಥ್ ಹೆಗ್ಡೆ ಉಪಾಧ್ಯಕ್ಷರಾಗಿ ಉಮೇಶ್ ಎನ್.

ವೇಣೂರು: ವೇಣೂರು ಗ್ರಾಮ ಪಂಚಾಯತ್‌ನ 2ನೇ ಅವಧಿಗೆ ಅಧ್ಯಕ್ಷರಾಗಿ ಮಲ್ಲಿಕಾ ಕಾಶಿನಾಥ್ ಹೆಗ್ಡೆ ಮತ್ತು ಉಪಾಧ್ಯಕ್ಷರಾಗಿ ಉಮೇಶ್ ಎನ್. ಆಯ್ಕೆಯಾದರು.

ವೇಣೂರು ಪಂಚಾಯತ್‌ನ ಅಧ್ಯಕ್ಷ ಉಪಾಧ್ಯಕ್ಷ ಮೊದಲ ಅವಧಿ ಕೊನೆಗೊಂಡಿದ್ದು 2ನೇ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷರು ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮೀಸಲಾತಿಯಾಗಿದ್ದು, ಎಲ್ಲಾ 24 ಸದಸ್ಯರು ಭಾರತೀಯ ಜನತಾ ಪಾರ್ಟಿ ಬೆಂಬಲಿತರಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ೪ ಸದಸ್ಯರುಗಳಾದ ವೀಣಾ ದೇವಾಡಿಗ, ಲೀಲಾವತಿ ಬಜಿರೆ, ಶಂಭಾಷಿಣಿ ಮತ್ತು ಮಲ್ಲಿಕಾ ಕಾಶಿನಾಥ್ ಹೆಗ್ಡೆ ಆಕಾಂಕ್ಷಿಗಳಾಗಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಮಾಜಿ ಅಧ್ಯಕ್ಷ ಲೋಕಯ್ಯ ಪೂಜಾರಿ ಮತ್ತು ಉಮೇಶ್ ಎನ್. ಆಕಾಂಕ್ಷಿಗಳಾಗಿದ್ದು, ಪಕ್ಷದ ಆಂತರಿಕ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮಲ್ಲಿಕಾ ಕಾಶಿನಾಥ್ ಹೆಗ್ಡೆ ಮತ್ತು ಉಪಾಧ್ಯಕ್ಷರಾಗಿ ಉಮೇಶ್ ಎನ್. ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಬೆಳ್ತಂಗಡಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್ ಪ್ರಕ್ರಿಯೆ ನಡೆಸಿದರು. ಆಡಳಿತಾಧಿಕಾರಿ ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರವಿ ಕುಮಾರ್, ತಾಲೂಕು ಪಂಚಾಯತ್ ಲೆಕ್ಕ ಸಹಾಯಕ ಗಣೇಶ್ ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್, ನಿಕಟ ಪೂರ್ವ ಅಧ್ಯಕ್ಷ ನೇಮಯ್ಯ ಕುಲಾಲ್, ನಿಕಟ ಪೂರ್ವ ಉಪಾಧ್ಯಕ್ಷೆ ಪುಷ್ಪಾ ಡಿ. ಪಂಚಾಯತ್ ಸದಸ್ಯರು ಹಾಜರಿದ್ದರು. ಸದಸ್ಯ ಸುಂದರ ಹೆಗ್ಡೆ ಕೃತಜ್ಞತೆ ಸಲ್ಲಿಸಿದರು.

ಪಕ್ಷದ ವತಿಯಿಂದ ನೂತನ ಅಧ್ಯಕ್ಷರನ್ನು ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಲಾಯಿತು.

Related posts

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ತರಗತಿ ಉದ್ಘಾಟನೆ

Suddi Udaya

ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ನೃತ್ಯ ಹಾಗೂ ಸಂಗೀತ ಸಮಾರೋಪ

Suddi Udaya

ಸುಂದರ ಭಾರತ ಪ್ರತಿಷ್ಠಾನ ಬೆಂಗಳೂರು ಇವರ ವತಿಯಿಂದ ಸರಕಾರಿ ಶಾಲೆಗಳಿಗೆ ನೀಡಲಾಗುವ ಉಚಿತ ನೋಟ್ ಪುಸ್ತಕ ಗಳ ವಿತರಣೆ

Suddi Udaya

ನೀತಿ ಸಂಹಿತೆ ಜಾರಿ: ಬೆಳ್ತಂಗಡಿ ಶ್ರಮಿಕ ಶಾಸಕರ ಕಚೇರಿಯ ಕಾರ್ಯಚರಣೆ ಸ್ಥಗಿತ

Suddi Udaya

ಎಮ್.ಆರ್.ಪಿ.ಎಲ್ – ಸಿಎಸ್ಆರ್ ಯೋಜನೆಯಡಿ “ಶ್ರೀ ಕೃಷ್ಣ ಯೋಗಕ್ಷೇಮ” ಅಂಬುಲೆನ್ಸ್ ಹಸ್ತಾಂತರ

Suddi Udaya

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಶಾಸಕ ಹರೀಶ್ ಪೂಂಜ ರವರ ಉಪಸ್ಥಿತಿಯಲ್ಲಿ 120 ಅಗೇಲು ರಂಗಪೂಜೆ

Suddi Udaya
error: Content is protected !!