23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಎಕ್ಸೆಲ್ ನಲ್ಲಿ ತ್ಯಾಜ್ಯ ನೀರು ಸಂಸ್ಕರಣಾ (ಎಸ್. ಟಿ. ಪಿ) ವಿಸ್ತರಿತ ಘಟಕದ ಭೂಮಿಪೂಜೆ

ಬೆಳ್ತಂಗಡಿ:ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವತಿಯಿಂದ ಕಾಲೇಜು ಮತ್ತು ಹಾಸ್ಟೆಲ್ ಗಳ ತ್ಯಾಜ್ಯ ನೀರು ಹಾಗೂ ಪರಿಸರದ ಕೊಳಚೆ ನೀರಿನ ಸಂಸ್ಕರಣೆಯ ನೂತನ ವಿಸ್ತರಿತ ಘಟಕಕ್ಕೆ ಇತ್ತೀಚಿಗೆ ಶಂಕು ಸ್ಥಾಪನೆ ನೆರವೇರಿಸಲಾಯಿತು.

ಪ್ರತಿದಿನ ಹತ್ತುಲಕ್ಷ ಲೀಟರ್ ನೀರಿನ ಶುದ್ಧೀಕರಣ ಸಾಮರ್ಥ್ಯವುಳ್ಳ, ಸುಮಾರು ಮೂರು ಕೋಟಿ ರೂಪಾಯಿಗಳ ವೆಚ್ಚ ತಗಲುವ , ತಾಲೂಕಿನ ಬೃಹತ್ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಇದಾಗಿದೆ. ಘಟಕದಲ್ಲಿ ಸಂಸ್ಕರಿಸಿದ ನೀರನ್ನು ಸ್ಥಳೀಯ ಕೃಷಿ ಭೂಮಿಗೆ ಬಳಸುವ ಮೂಲಕ, ಕೃಷಿಗೆ ಬೆಂಬಲ ನೀಡುವ ಯೋಚನೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯದ್ದಾಗಿದೆ.

ಎಕ್ಸೆಲ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರ ಹೆತ್ತವರಾದ ಸತೀಶ್ ಕುಮಾರ್ ಆರಿಗ ಬೊಳ್ಳೂರು ಗುತ್ತು ಹಾಗೂ ಶುಭಲತಾ ಅವರು ನೂತನ ಘಟಕದ ಶಂಕು ಸ್ಥಾಪನೆ ನೆರವೇರಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಕಾರ್ಯದರ್ಶಿಯವರು, ಪ್ರಾಂಶುಪಾಲರು, ಆಡಳಿತಾಧಿಕಾರಿ, ಕ್ಯಾಂಪಸ್ ಮ್ಯಾನೇಜರ್, ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಉಪಸ್ಥಿತರಿದ್ದರು.

Related posts

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ: ದರ್ಶನ ಬಲಿ, ಬಟ್ಟಲು ಕಾಣಿಕೆ

Suddi Udaya

ಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

Suddi Udaya

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 95.7 ಫಲಿತಾಂಶ

Suddi Udaya

ಭರತನಾಟ್ಯ ವಿಧ್ವತ್ ಅಂತಿಮ ಪರೀಕ್ಷೆ : ಗುರುವಾಯನಕೆರೆಯ ಸುಕನ್ಯಾ ಕಾಮತ್ ಉತ್ತೀರ್ಣ

Suddi Udaya

ಬೆಳ್ತಂಗಡಿ: ಮ್ಯಾಟ್ರಿಕ್ಸ್ ಹೋಂಡಾ ಬಳಿ ಮರ ಬಿದ್ದು ಹಾನಿ

Suddi Udaya

ಅಳದಂಗಡಿ: ನೊಚ್ಚ ಮನೆತನದ ಕುವರಿ ನಿಯತಿ ಅಮೇರಿಕಾದಲ್ಲಿ ಯಕ್ಷಗಾನ ನಾಟ್ಯ ಪ್ರದರ್ಶನ

Suddi Udaya
error: Content is protected !!