September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಎಕ್ಸೆಲ್ ನಲ್ಲಿ ತ್ಯಾಜ್ಯ ನೀರು ಸಂಸ್ಕರಣಾ (ಎಸ್. ಟಿ. ಪಿ) ವಿಸ್ತರಿತ ಘಟಕದ ಭೂಮಿಪೂಜೆ

ಬೆಳ್ತಂಗಡಿ:ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವತಿಯಿಂದ ಕಾಲೇಜು ಮತ್ತು ಹಾಸ್ಟೆಲ್ ಗಳ ತ್ಯಾಜ್ಯ ನೀರು ಹಾಗೂ ಪರಿಸರದ ಕೊಳಚೆ ನೀರಿನ ಸಂಸ್ಕರಣೆಯ ನೂತನ ವಿಸ್ತರಿತ ಘಟಕಕ್ಕೆ ಇತ್ತೀಚಿಗೆ ಶಂಕು ಸ್ಥಾಪನೆ ನೆರವೇರಿಸಲಾಯಿತು.

ಪ್ರತಿದಿನ ಹತ್ತುಲಕ್ಷ ಲೀಟರ್ ನೀರಿನ ಶುದ್ಧೀಕರಣ ಸಾಮರ್ಥ್ಯವುಳ್ಳ, ಸುಮಾರು ಮೂರು ಕೋಟಿ ರೂಪಾಯಿಗಳ ವೆಚ್ಚ ತಗಲುವ , ತಾಲೂಕಿನ ಬೃಹತ್ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಇದಾಗಿದೆ. ಘಟಕದಲ್ಲಿ ಸಂಸ್ಕರಿಸಿದ ನೀರನ್ನು ಸ್ಥಳೀಯ ಕೃಷಿ ಭೂಮಿಗೆ ಬಳಸುವ ಮೂಲಕ, ಕೃಷಿಗೆ ಬೆಂಬಲ ನೀಡುವ ಯೋಚನೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯದ್ದಾಗಿದೆ.

ಎಕ್ಸೆಲ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರ ಹೆತ್ತವರಾದ ಸತೀಶ್ ಕುಮಾರ್ ಆರಿಗ ಬೊಳ್ಳೂರು ಗುತ್ತು ಹಾಗೂ ಶುಭಲತಾ ಅವರು ನೂತನ ಘಟಕದ ಶಂಕು ಸ್ಥಾಪನೆ ನೆರವೇರಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಕಾರ್ಯದರ್ಶಿಯವರು, ಪ್ರಾಂಶುಪಾಲರು, ಆಡಳಿತಾಧಿಕಾರಿ, ಕ್ಯಾಂಪಸ್ ಮ್ಯಾನೇಜರ್, ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಧನ್ವಂತರಿ ಪೂಜೆ ಹಾಗೂ ದುರ್ಗಾಪೂಜೆ

Suddi Udaya

ಧರ್ಮಸ್ಥಳ – ಮಂಗಳೂರು ತುಳುನಾಡು ಸಾರಿಗೆ ಬಸ್

Suddi Udaya

ಖ್ಯಾತ ನೋಟರಿ ನ್ಯಾಯವಾದಿ ಸೇವಿಯರ್ ಪಾಲೇಲಿ ಕಾಂಗ್ರೆಸ್ ಸೇರ್ಪಡೆ

Suddi Udaya

ಆ.21-22: ರೈತರಿಗೆ ಜೇನು ಕೃಷಿ ಹಾಗೂ ಜೇನಿನ ಮೌಲ್ಯವರ್ಧನೆ ಕುರಿತು ಸಾಂಸ್ಥಿಕ ತರಬೇತಿ

Suddi Udaya

ನಾಪತ್ತೆಯಾದ ಬೆಳಾಲಿನ ಯುವತಿ ಮದುವೆಯಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರು

Suddi Udaya

ಧರ್ಮಸ್ಥಳ ಲಕ್ಷ ದೀಪೋತ್ಸವದ ಪ್ರಯುಕ್ತ 12ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!