30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿ

ಕೊಲ್ಪಾಡಿ ಪೌಷ್ಟಿಕ ಆಹಾರ ಮಾಹಿತಿ ಕಾರ್ಯಕ್ರಮ

ಬೆಳಾಲು : ಜು 14 ಶ್ರೀ ಕ್ಷೇತ್ರ ಧರ್ಮಾಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ( ರಿ ) ಬೆಳ್ತಂಗಡಿ ತಾಲೂಕು. ಬೆಳಾಲು ಕೊಲ್ಪಾಡಿ ಓಂ ಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಮಾಹಿತಿ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿದ್ಯಾಶ್ರೀನಿವಾಸ್ ಗೌಡ ರವರು ನೆರವೆರಿಸಿ ಆಷಾಡ ಮಾಸದಲ್ಲಿ ಸೇವಿಸುವ ಆಹಾರಗಳ ಬಗ್ಗೆ ವೈಜ್ಞಾನಿಕವಾಗಿ ಪ್ರಾಮುಖ್ಯತೆ ಏನು ಎಂಬುವುದರ ಬಗ್ಗೆ ತಿಳಿಸಿದರು.ಸದೃಢ ಆರೋಗ್ಯ ನಿರ್ವಹಣೆಗೆ ಪೌಷ್ಠಿಕ ಆಹಾರ ತುಂಬಾ ಅವಶ್ಯಕವಾಗಿದ್ದು ಹಲವಾರು ರೋಗ ರುಜಿನ ಗಳನ್ನು ತಡೆಗಟ್ಟಲು ಸಹಕಾರಿ ರಿಯಾಗಿದೆ ಎಂದು ತಿಳಿಸಿದರು ಸಂಪನ್ಮೂಲ ವ್ಯಕ್ತಿಯಾದ ಉಷಾ ಮೇಡಂ ಸಮತೋಲನ ಆಹಾರದ ಬಗ್ಗೆ ದೀರ್ಘಕಾಲ ಕಾಡುವ ಕಾಯಿಲೆಗಳನ್ನು ತಡೆಗಟ್ಟಲು ಆಗಾದವಾದ ಪೌಷ್ಠಿಕಾಂಶಗಳನ್ನು ಒಳಗೊಂಡ ರೋಗನಿರೋದಕ ಶಕ್ತಿಯಿರುವ ಪ್ರೊಟೀನ್ ಅಂಶವುಳ್ಳ ಆಹಾರಗಳ ಸೇವನೆ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಒಕ್ಕೂಟದ ಅಧ್ಯಕ್ಷರಾದ ನೀಲಾವತಿ ಸೇವಾಪ್ರತಿನಿಧಿ ಪ್ರಮೀಳಾರ ವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರದ ಸದಸ್ಯರಾದ ಮಂಜುಳಾ ರವರು ವಹಿಸಿದರು. ಕೇಂದ್ರದ ಸದಸ್ಯರಾದ ಗುಲಾಬಿಯವರು ಸ್ವಾಗತಿಸಿ ಲಲಿತಾ ಧನ್ಯವಾದ ನೀಡಿದರು. ಸಮನ್ವಯಧಿಕಾರಿ ಮಧುರರವರು ಕಾರ್ಯಕ್ರಮ ನಿರೂಪಿಸಿದರು.

Related posts

ಕಾಮಗಾರಿ ನಿರ್ವಹಿಸಿದ ಬಿಲ್ಲು ಪಾವತಿಗೆ ಒತ್ತಾಯಿಸಿ ಮಂಗಳೂರಿನಲ್ಲಿ ಬೆಳ್ತಂಗಡಿ ಲೋಕೋಪಯೋಗಿ ಗುತ್ತಿಗೆದಾರರ ಧರಣಿ

Suddi Udaya

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್ ತ್ರೋಬಾಲ್ ಪಂದ್ಯಾಟ: ಕಣಿಯೂರಿನ ಯೂನಿತ್ ಕೆ. ನಾಯಕತ್ವದ ತಂಡ ಪ್ರಥಮ ಸ್ಥಾನ

Suddi Udaya

ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್‌ನಿಂದ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕರಿಗೆ “ಕಲಿಕಾ ಫಲಿತಾಂಶ ಮತ್ತು ವಿಧಾನಗಳು” ಕಾರ್ಯಾಗಾರ

Suddi Udaya

ಹುಣ್ಸೆಕಟ್ಟೆ: ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕರಿಯಪ್ಪ ಇವರಿಗೆ ಗೌರವಾರ್ಪಣೆ

Suddi Udaya
error: Content is protected !!