25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಕೊಲ್ಪಾಡಿ ಪೌಷ್ಟಿಕ ಆಹಾರ ಮಾಹಿತಿ ಕಾರ್ಯಕ್ರಮ

ಬೆಳಾಲು : ಜು 14 ಶ್ರೀ ಕ್ಷೇತ್ರ ಧರ್ಮಾಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ( ರಿ ) ಬೆಳ್ತಂಗಡಿ ತಾಲೂಕು. ಬೆಳಾಲು ಕೊಲ್ಪಾಡಿ ಓಂ ಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಮಾಹಿತಿ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿದ್ಯಾಶ್ರೀನಿವಾಸ್ ಗೌಡ ರವರು ನೆರವೆರಿಸಿ ಆಷಾಡ ಮಾಸದಲ್ಲಿ ಸೇವಿಸುವ ಆಹಾರಗಳ ಬಗ್ಗೆ ವೈಜ್ಞಾನಿಕವಾಗಿ ಪ್ರಾಮುಖ್ಯತೆ ಏನು ಎಂಬುವುದರ ಬಗ್ಗೆ ತಿಳಿಸಿದರು.ಸದೃಢ ಆರೋಗ್ಯ ನಿರ್ವಹಣೆಗೆ ಪೌಷ್ಠಿಕ ಆಹಾರ ತುಂಬಾ ಅವಶ್ಯಕವಾಗಿದ್ದು ಹಲವಾರು ರೋಗ ರುಜಿನ ಗಳನ್ನು ತಡೆಗಟ್ಟಲು ಸಹಕಾರಿ ರಿಯಾಗಿದೆ ಎಂದು ತಿಳಿಸಿದರು ಸಂಪನ್ಮೂಲ ವ್ಯಕ್ತಿಯಾದ ಉಷಾ ಮೇಡಂ ಸಮತೋಲನ ಆಹಾರದ ಬಗ್ಗೆ ದೀರ್ಘಕಾಲ ಕಾಡುವ ಕಾಯಿಲೆಗಳನ್ನು ತಡೆಗಟ್ಟಲು ಆಗಾದವಾದ ಪೌಷ್ಠಿಕಾಂಶಗಳನ್ನು ಒಳಗೊಂಡ ರೋಗನಿರೋದಕ ಶಕ್ತಿಯಿರುವ ಪ್ರೊಟೀನ್ ಅಂಶವುಳ್ಳ ಆಹಾರಗಳ ಸೇವನೆ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಒಕ್ಕೂಟದ ಅಧ್ಯಕ್ಷರಾದ ನೀಲಾವತಿ ಸೇವಾಪ್ರತಿನಿಧಿ ಪ್ರಮೀಳಾರ ವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರದ ಸದಸ್ಯರಾದ ಮಂಜುಳಾ ರವರು ವಹಿಸಿದರು. ಕೇಂದ್ರದ ಸದಸ್ಯರಾದ ಗುಲಾಬಿಯವರು ಸ್ವಾಗತಿಸಿ ಲಲಿತಾ ಧನ್ಯವಾದ ನೀಡಿದರು. ಸಮನ್ವಯಧಿಕಾರಿ ಮಧುರರವರು ಕಾರ್ಯಕ್ರಮ ನಿರೂಪಿಸಿದರು.

Related posts

ಸ್ವ-ಉದ್ಯೋಗ ಅಥವಾ ಉದ್ಯೋಗ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನ

Suddi Udaya

ವೇಣೂರು: ಜೀರ್ಣೋದ್ಧಾರಗೊಳಿಸಿದ ತ್ಯಾಗಿಭವನ ಉದ್ಘಾಟನೆ

Suddi Udaya

ವಾಣಿ ಪ.ಪೂ. ಕಾಲೇಜಿನ ರಿತ್ವಿಕ್ ಶೆಟ್ಟಿ ಏಕಪಾತ್ರ ಅಭಿನಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಯಕ್ಷಯಾನ-2026: ಉಜಿರೆ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರಕ್ಕೆ ಸಮಗ್ರ ದ್ವಿತೀಯ ತಂಡ ಪ್ರಶಸ್ತಿ

Suddi Udaya

ಧರ್ಮಸ್ಥಳ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ

Suddi Udaya

ರೈತ ವಿರೋಧಿ ಕಾಂಗ್ರೆಸ್ ಸರಕಾರದ ನಿಲುವು ವಿರೋಧಿಸಿ ರೈತ ಮೋರ್ಚಾರವರಿಂದ ತಹಶೀಲ್ದಾರರ ಮುಖಾಂತರ ಸಿ.ಎಂ ಸಿದ್ದರಾಮಯ್ಯರಿಗೆ ಮನವಿ

Suddi Udaya
error: Content is protected !!