July 23, 2026
ಗ್ರಾಮಾಂತರ ಸುದ್ದಿ

ಕೊಲ್ಪಾಡಿ ಪೌಷ್ಟಿಕ ಆಹಾರ ಮಾಹಿತಿ ಕಾರ್ಯಕ್ರಮ

ಬೆಳಾಲು : ಜು 14 ಶ್ರೀ ಕ್ಷೇತ್ರ ಧರ್ಮಾಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ( ರಿ ) ಬೆಳ್ತಂಗಡಿ ತಾಲೂಕು. ಬೆಳಾಲು ಕೊಲ್ಪಾಡಿ ಓಂ ಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಮಾಹಿತಿ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿದ್ಯಾಶ್ರೀನಿವಾಸ್ ಗೌಡ ರವರು ನೆರವೆರಿಸಿ ಆಷಾಡ ಮಾಸದಲ್ಲಿ ಸೇವಿಸುವ ಆಹಾರಗಳ ಬಗ್ಗೆ ವೈಜ್ಞಾನಿಕವಾಗಿ ಪ್ರಾಮುಖ್ಯತೆ ಏನು ಎಂಬುವುದರ ಬಗ್ಗೆ ತಿಳಿಸಿದರು.ಸದೃಢ ಆರೋಗ್ಯ ನಿರ್ವಹಣೆಗೆ ಪೌಷ್ಠಿಕ ಆಹಾರ ತುಂಬಾ ಅವಶ್ಯಕವಾಗಿದ್ದು ಹಲವಾರು ರೋಗ ರುಜಿನ ಗಳನ್ನು ತಡೆಗಟ್ಟಲು ಸಹಕಾರಿ ರಿಯಾಗಿದೆ ಎಂದು ತಿಳಿಸಿದರು ಸಂಪನ್ಮೂಲ ವ್ಯಕ್ತಿಯಾದ ಉಷಾ ಮೇಡಂ ಸಮತೋಲನ ಆಹಾರದ ಬಗ್ಗೆ ದೀರ್ಘಕಾಲ ಕಾಡುವ ಕಾಯಿಲೆಗಳನ್ನು ತಡೆಗಟ್ಟಲು ಆಗಾದವಾದ ಪೌಷ್ಠಿಕಾಂಶಗಳನ್ನು ಒಳಗೊಂಡ ರೋಗನಿರೋದಕ ಶಕ್ತಿಯಿರುವ ಪ್ರೊಟೀನ್ ಅಂಶವುಳ್ಳ ಆಹಾರಗಳ ಸೇವನೆ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಒಕ್ಕೂಟದ ಅಧ್ಯಕ್ಷರಾದ ನೀಲಾವತಿ ಸೇವಾಪ್ರತಿನಿಧಿ ಪ್ರಮೀಳಾರ ವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರದ ಸದಸ್ಯರಾದ ಮಂಜುಳಾ ರವರು ವಹಿಸಿದರು. ಕೇಂದ್ರದ ಸದಸ್ಯರಾದ ಗುಲಾಬಿಯವರು ಸ್ವಾಗತಿಸಿ ಲಲಿತಾ ಧನ್ಯವಾದ ನೀಡಿದರು. ಸಮನ್ವಯಧಿಕಾರಿ ಮಧುರರವರು ಕಾರ್ಯಕ್ರಮ ನಿರೂಪಿಸಿದರು.

Related posts

ಮಚ್ಚಿನ: ನೆತ್ತರ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಮೈಸೂರು ಚಾಮುಂಡೇಶ್ವರಿ ಅಗ್ರಿ ಟೂಲ್ಸ್ ಮಾಲಕ ರಾಜೇಶ್ ದೇವಾಡಿಗ ರಿಂದ ಉಚಿತ ರೈನ್ ಕೋಟ್ ವಿತರಣೆ

Suddi Udaya

ಉಜಿರೆ ಹಳೆಪೇಟೆಯಲ್ಲಿ ಹೊಳೆಯಂತಾದ ರಸ್ತೆ: ವಾಹನ ಸವಾರರ ಪರದಾಟ

Suddi Udaya

ಕೇಂದ್ರದಲ್ಲಿ ಎನ್ ಡಿ ಎ ಬಿಜೆಪಿ ಮೋದಿ ಸರಕಾರ 10ನೇ ವರ್ಷಕ್ಕೆ ಪಾದಾರ್ಪಣೆ :ಪ್ರತಾಪಸಿಂಹ ನಾಯಕ್

Suddi Udaya

ಶಿಲ್ಪಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿಗೆ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ಆಯ್ಕೆ

Suddi Udaya

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಶ್ರೀ ಸ್ಟಾರ್ ಯುವಕ ಹಾಗೂ ಮಹಿಳಾ ಮಂಡಲದ ವತಿಯಿಂದ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!