July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು. 22-23: ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ

ಬೆಳ್ತಂಗಡಿ : ಯೇನಪೋಯ ಮೆಡಿಕಲ್ ಕಾಲೇಜು, ಯೇನಪೋಯ ವಿಶ್ವವಿದ್ಯಾಲಯ ಸಂಸ್ಥೆಯ ಬೆಳ್ಳಿಹಬ್ಬದ ಸಂಭ್ರಮದಲ್ಲಿ ಯೋಗದ ಜಾಗೃತಿ ಮೂಡಿಸಲು ಭವಿಷ್ಯದ ದುಃಖಗಳನ್ನು ದೂರ ಮಾಡಲು ಯೋಗ ಎಂಬ ಧ್ಯೇಯದೊಂದಿಗೆ ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿಯು ಜುಲೈ 22 ಸೋಮವಾರ ದಿಂದ ಜುಲೈ 23 ಮಂಗಳವಾರ 10 ಗಂಟೆಯವರೆಗೆ 25 ಗಂಟೆಗಳ ನಿರಂತರ ಯೋಗ ತರಬೇತಿ ನಡೆಯಲಿದೆ.

ಯೋಗ ಗುರು ಕುಶಾಲಪ್ಪ ಗೌಡ ರವರು ತಲಾ ಒಂದೂವರೆ ಗಂಟೆಯ 17 ಬ್ಯಾಚ್ ಗಳಲ್ಲಿ ತರಬೇತಿ ನೀಡಲಿದ್ದು, ಭಾಗವಹಿಸುವ ಶಿಬಿರಾರ್ಥಿಗಳಿಗೆ ರೂಪಾಯಿ 500 ಮೌಲ್ಯದ ಯೋಗ ಪುಸ್ತಕ, ಯೋಗ ಬಟ್ಟೆ, ಯೋಗ ಕ್ಯಾಲೆಂಡರ್,ಯೋಗ ಪ್ರಮಾಣ ಪತ್ರ ಮತ್ತು ಉಪಹಾರ ನೀಡಲಾಗುವುದು, ಮುಗೇರಡ್ಕ ಸರ್ಕಾರಿ ಶಾಲಾ ಸೇವಾ ಟ್ರಸ್ಟ್ ನಾ ವಿದ್ಯಾನಿಧಿಗಾಗಿ ಆಯೋಜಿಸಿರುವ ಈ ಶಿಬಿರಕ್ಕೆ ವಿದ್ಯಾರ್ಥಿಗಳಿಂದ ರೂಪಾಯಿ 100,ಸಾರ್ವಜನಿಕರಿಂದ ರೂಪಾಯಿ 200 ನ್ನು ದೇಣಿಗೆ ರೂಪದಲ್ಲಿ ಪಡೆಯಲಾಗುವುದು. ಮೂರು ವಿಶ್ವ ದಾಖಲೆಯ ಪ್ರಯತ್ನ, ಮ್ಯಾರಥಾನ್ ಯೋಗ ಶಿಬಿರ ತರಬೇತಿಯ ಮೂಲಕ ಮೂರು ವಿಶ್ವ ದಾಖಲೆಯನ್ನು ಸಾರಿಸಲು ಪ್ರಯತ್ನಿಸಲಾಗುವುದು, ಒಂದೇ ಯೋಗ ಗುರು, ಒಂದೇ ವೇದಿಕೆಯಲ್ಲಿ ನಿರಂತರ 25 ಗಂಟೆ ಯೋಗ ತರಬೇತಿ ನೀಡುವುದು,

ಈ ತರಬೇತಿಯಲ್ಲಿ 2500 ಕ್ಕೂ ಮಿಕ್ಕಿ ವಿವಿಧ ವೈದ್ಯಕೀಯ ವಿದ್ಯಾರ್ಥಿಗಳು ತರಬೇತಿ ಒಳಗಾಗುವುದು,4000ಕ್ಕೂ ಮಿಕ್ಕಿ ಯೋಗ ಶಿಬಿರಾರ್ಥಿಗಳಿಗೆ ತರಬೇತಿ ಪಡೆಯಲಿದ್ದಾರೆಂದು ಯೋಗ ಗುರು ಕುಶಾಲಪ್ಪ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಮಿತ್ತಬಾಗಿಲು – ಮಲವಂತಿಗೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಗುರುಪೂಜೆ ಉತ್ಸವ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹದ ಪತ್ತೆ: ವಾರಸುದಾರರು ಧರ್ಮಸ್ಥಳ ಪೊಲೀಸ್ ಠಾಣೆ ಸಂಪರ್ಕಿಸಲು ಮನವಿ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ: ಅಳದಂಗಡಿ ಅರಮನೆಯ ಅರಸರಾದ ಡಾ.‌ಪದ್ಮಪ್ರಸಾದ್ ರಿಂದ ಗೌರವಾಪ೯ಣೆ

Suddi Udaya

ನೆರಿಯ ಗ್ರಾಮ ಪಂಚಾಯತ್‌ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ವೇಣೂರು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರವೀಂದ್ರರಿಗೆ ಎ.ಎಸ್.ಐ. ಯಾಗಿ ಬಂಟ್ವಾಳ ನಗರ ಠಾಣೆಗೆ ಭಡ್ತಿ

Suddi Udaya
error: Content is protected !!