24.1 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು. 22-23: ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ

ಬೆಳ್ತಂಗಡಿ : ಯೇನಪೋಯ ಮೆಡಿಕಲ್ ಕಾಲೇಜು, ಯೇನಪೋಯ ವಿಶ್ವವಿದ್ಯಾಲಯ ಸಂಸ್ಥೆಯ ಬೆಳ್ಳಿಹಬ್ಬದ ಸಂಭ್ರಮದಲ್ಲಿ ಯೋಗದ ಜಾಗೃತಿ ಮೂಡಿಸಲು ಭವಿಷ್ಯದ ದುಃಖಗಳನ್ನು ದೂರ ಮಾಡಲು ಯೋಗ ಎಂಬ ಧ್ಯೇಯದೊಂದಿಗೆ ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿಯು ಜುಲೈ 22 ಸೋಮವಾರ ದಿಂದ ಜುಲೈ 23 ಮಂಗಳವಾರ 10 ಗಂಟೆಯವರೆಗೆ 25 ಗಂಟೆಗಳ ನಿರಂತರ ಯೋಗ ತರಬೇತಿ ನಡೆಯಲಿದೆ.

ಯೋಗ ಗುರು ಕುಶಾಲಪ್ಪ ಗೌಡ ರವರು ತಲಾ ಒಂದೂವರೆ ಗಂಟೆಯ 17 ಬ್ಯಾಚ್ ಗಳಲ್ಲಿ ತರಬೇತಿ ನೀಡಲಿದ್ದು, ಭಾಗವಹಿಸುವ ಶಿಬಿರಾರ್ಥಿಗಳಿಗೆ ರೂಪಾಯಿ 500 ಮೌಲ್ಯದ ಯೋಗ ಪುಸ್ತಕ, ಯೋಗ ಬಟ್ಟೆ, ಯೋಗ ಕ್ಯಾಲೆಂಡರ್,ಯೋಗ ಪ್ರಮಾಣ ಪತ್ರ ಮತ್ತು ಉಪಹಾರ ನೀಡಲಾಗುವುದು, ಮುಗೇರಡ್ಕ ಸರ್ಕಾರಿ ಶಾಲಾ ಸೇವಾ ಟ್ರಸ್ಟ್ ನಾ ವಿದ್ಯಾನಿಧಿಗಾಗಿ ಆಯೋಜಿಸಿರುವ ಈ ಶಿಬಿರಕ್ಕೆ ವಿದ್ಯಾರ್ಥಿಗಳಿಂದ ರೂಪಾಯಿ 100,ಸಾರ್ವಜನಿಕರಿಂದ ರೂಪಾಯಿ 200 ನ್ನು ದೇಣಿಗೆ ರೂಪದಲ್ಲಿ ಪಡೆಯಲಾಗುವುದು. ಮೂರು ವಿಶ್ವ ದಾಖಲೆಯ ಪ್ರಯತ್ನ, ಮ್ಯಾರಥಾನ್ ಯೋಗ ಶಿಬಿರ ತರಬೇತಿಯ ಮೂಲಕ ಮೂರು ವಿಶ್ವ ದಾಖಲೆಯನ್ನು ಸಾರಿಸಲು ಪ್ರಯತ್ನಿಸಲಾಗುವುದು, ಒಂದೇ ಯೋಗ ಗುರು, ಒಂದೇ ವೇದಿಕೆಯಲ್ಲಿ ನಿರಂತರ 25 ಗಂಟೆ ಯೋಗ ತರಬೇತಿ ನೀಡುವುದು,

ಈ ತರಬೇತಿಯಲ್ಲಿ 2500 ಕ್ಕೂ ಮಿಕ್ಕಿ ವಿವಿಧ ವೈದ್ಯಕೀಯ ವಿದ್ಯಾರ್ಥಿಗಳು ತರಬೇತಿ ಒಳಗಾಗುವುದು,4000ಕ್ಕೂ ಮಿಕ್ಕಿ ಯೋಗ ಶಿಬಿರಾರ್ಥಿಗಳಿಗೆ ತರಬೇತಿ ಪಡೆಯಲಿದ್ದಾರೆಂದು ಯೋಗ ಗುರು ಕುಶಾಲಪ್ಪ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ವಕೀಲರ ಸಂಘದ ನೇತೃತ್ವದಲ್ಲಿ – ವಸಂತ ಮರಕಡ ಅಧ್ಯಕ್ಷತೆಯ 2023-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಪುಂಜಾಲಕಟ್ಟೆ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಗರ್ಡಾಡಿ ಧರ್ಮಣ್ಣ ಸಾಲಿಯಾನ್ ನಿಧನ

Suddi Udaya

ಧರ್ಮಸ್ಥಳ: ನೂತನವಾಗಿ ಪ್ರಾರಂಭಗೊಂಡ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿಗೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ಭೇಟಿ

Suddi Udaya

ಮಾ.1: ಗ್ರಾ.ಪಂ. ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಕೈಗೆ ಕಪ್ಪು ಪಟ್ಟಿ ಧರಿಸಿ ವಿಭಿನ್ನ ಪ್ರತಿಭಟನೆ

Suddi Udaya

ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್ ಕರ್ ಅವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳಿಗೆ ದೇವರ ದರ್ಶನಕ್ಕಾಗಿ ಆರಾಮದಾಯಕ ಸರತಿ ಸಾಲಿನ ನೂತನ ಸಂಕೀರ್ಣ “ಶ್ರೀ ಸಾನ್ನಿಧ್ಯ ಮತ್ತು ಜ್ಞಾನದೀಪ ಶಿಕ್ಷಣ ಕಾರ್ಯಕ್ರಮಗಳ ಉದ್ಘಾಟನೆ

Suddi Udaya
error: Content is protected !!